ಸುಹಾಸ್ ಶೆಟ್ಟಿ ಪ್ರಕರಣ.. ಮಂಗಳೂರು ಕಮಿಷನರ್ ನೀಡಿದ ಮಾಹಿತಿ ಏನು..?

author-image
Ganesh
Updated On
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣ.. ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್
Advertisment
  • ‘ಇನೋವಾ ಕಾರಿನಲ್ಲಿ ಹೋಗುತ್ತಿದ್ದಾಗ ಕೃತ್ಯ ಎಸೆಗಿದ್ದಾರೆ’
  • ‘ಸುಮಾರು ಐದಾರು ಜನರಿಂದ ಅಟ್ಯಾಕ್ ಆಗಿದೆ’
  • ‘ಸುಹಾಸ್ ವರ್ಷದ ಹಿಂದೆ ಜಾಮೀನು ಪಡೆದು ಹೊರಬಂದಿದ್ದ’

ಮಂಗಳೂರು ಸುಹಾಸ್ ಶೆಟ್ಟಿ ಪ್ರಕರಣದ ಬಗ್ಗೆ ಪೊಲೀಸ್​ ಕಮಿಷನರ್​ ಅನುಪಮ್​ ಅಗರ್ವಾಲ್ ಮಾಹಿತಿ ನೀಡಿದ್ದಾರೆ. ಒಬ್ಬ ರೌಡಿ ಶೀಟರ್​​, ಸುಹಾಸ್​ ಶೆಟ್ಟಿ ಮೇಲೆ ಸುಮಾರು ಐದಾರು ಜನ ಹಲ್ಲೆ ಮಾಡಿದ್ದಾರೆ.

ಇನೋವಾ ಕಾರಿನಲ್ಲಿ ಸಹಚರರ ಜೊತೆ ಸುಹಾಸ್ ಶೆಟ್ಟಿ ತೆರಳುತ್ತಿದ್ದಾಗ ಕಾರನ್ನ ಅಡ್ಡಗಟ್ಟಿದ್ದಾರೆ. ನಂತರ ತಲ್ವಾರ್​​​ಗಳಿಂದ ಹಲ್ಲೆ ಮಾಡಿದ್ದಾರೆ. ಗೂಡ್ಸ್​ ವಾಹನ, ಕಾರಿನಲ್ಲಿ ಬಂದು ಸುಹಾಸ್​ನನ್ನು ಅಡ್ಡಗಟ್ಟಿದ್ದಾರೆ. ಸುಹಾಸ್​ ಶೆಟ್ಟಿಯನ್ನೇ ಟಾರ್ಗೆಟ್​ ಮಾಡಿ ಕೃತ್ಯ ಎಸೆಗಲಾಗಿದೆ.

ಇದನ್ನೂ ಓದಿ: ಭಾರತದ ಗಡಿಯಲ್ಲಿ ಸಂಪೂರ್ಣ ಗೋಧಿ ಕಟಾವು ಮುಗಿಸಿದ ರೈತರು; ಪಾಕ್‌ಗೆ ಮತ್ತೊಂದು ಸ್ಪಷ್ಟ ಸೂಚನೆ!

publive-image

ಕೂಡಲೇ ಸುಹಾಸ್ ಶೆಟ್ಟಿಯನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ವೈದ್ಯರು ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ. 2022ರಲ್ಲಿ ಫಾಸಿಲ್ ಎಂಬಾತನ ಹತ್ಯೆ ಆಗಿತ್ತು. ಪ್ರಕರಣದ ಆರೋಪಿ ಸುಹಾಸ್ ಶೆಟ್ಟಿ. ಸುಹಾಸ್ ಶೆಟ್ಟಿ ಮೇಲೆ ಸುಮಾರು ಐದು ಕೇಸ್​ಗಳು ಇದ್ದವು. ಒಂದು ವರ್ಷದ ಹಿಂದೆ ಜಾಮೀನು ಪಡೆದು ಹೊರ ಬಂದಿದ್ದ. ಈ ಸಂಬಂಧ ಬಜ್ಪೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಶುರು ಮಾಡಲಾಗಿದ್ದು, ಆರೋಪಿಗಳ ಪತ್ತೆಗಾಗಿ ತಂಡ ರಚಿಸುತ್ತೇವೆ. ಇನ್ನು ಪೊಲೀಸ್​ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಮಂಗಳೂರು ನಗರದಲ್ಲಿ ಹೆಚ್ಚಿನ ಬಂದೋಬಸ್ತ್​ ಕಲ್ಪಿಸಲಾಗುತ್ತೆ. ಇದು ಪ್ರತೀಕಾರದ ಹತ್ಯೆ ಎಂದು ಮೇಲ್ನೋಟಕ್ಕೆ ಕಾಣುತ್ತಿದೆ ಅಂತಾ ತಿಳಿಸಿದರು.

ಇದನ್ನೂ ಓದಿ: ಮಂಗಳೂರಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನ ಕೊಚ್ಚಿ ಕೊಂದ 6 ದುಷ್ಕರ್ಮಿಗಳು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment