newsfirstkannada.com

ಮಂಗಳೂರು ಏರ್​​ಪೋರ್ಟ್​ಗೆ ಬಾಂಬ್ ಬೆದರಿಕೆ ಕರೆ.. ಪೊಲೀಸರು ಫುಲ್ ಅಲರ್ಟ್​

Share :

Published May 4, 2024 at 3:51pm

    ದೊಡ್ಡ ಮಟ್ಟದ ರಕ್ತಪಾತ ಆಗಲಿದೆ ಎಂದು ಪತ್ರದಲ್ಲಿ ಉಲ್ಲೇಖವಾಗಿದೆ

    ಬಾಂಬ್ ಬೆದರಿಕೆ ವಿಷಯ ಗೌಪ್ಯವಾಗಿಟ್ಟ ಪೊಲೀಸ್ ಅಧಿಕಾರಿಗಳು

    ಇಮೇಲ್ ಸಂದೇಶದ ಬಗ್ಗೆ ಬಜ್ಪೆ ಠಾಣೆಯಲ್ಲಿ ದಾಖಲಾಯ್ತು ಪ್ರಕರಣ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬೆದರಿಕೆ ಬಂದಿದೆ. ಇದರಿಂದ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಹಮೀದಾ ಬಾನುಗೆ ಗೂಗಲ್​ ಡೂಡಲ್​ ಗೌರವ.. ಪುರುಷರನ್ನೇ ಕುಸ್ತಿಯಲ್ಲಿ ಸೋಲಿಸಿದ ಗಟ್ಟಿಗಿತ್ತಿ ಈಕೆ

ಉಗ್ರರ ಹೆಸರಿನಲ್ಲಿ ಇ-ಮೇಲ್ ಸಂದೇಶ ಬಂದಿದ್ದು, ಮೂರು ವಿಮಾನದಲ್ಲಿಯು ಸ್ಫೋಟಕ ಇಡಲಾಗಿದೆ. ವಿಮಾನದಲ್ಲಿಯು ಸ್ಫೋಟಕಗಳನ್ನು ಅಡಗಿಸಿ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ಅದು ಸ್ಫೋಟಗೊಳ್ಳಲಿದ್ದು, ದೊಡ್ಡ ಮಟ್ಟದ ರಕ್ತಪಾತವಾಗಲಿದೆ. ಈ ಘಟನೆಯಲ್ಲಿ ಹೆಚ್ಚು ಜನ ಪ್ರಾಣ ಕಳೆದುಕೊಳ್ಳಲಿದ್ದಾರೆ ಎಂದು ಇ-ಮೇಲ್​ನಲ್ಲಿ ಉಲ್ಲೇಖ ಮಾಡಲಾಗಿದೆ ಎಂದು ಸಂದೇಶ ಬಂದಿದೆ.

ಬಾಂಬ್ ಬೆದರಿಕೆ ವಿಷಯ ಗೌಪ್ಯವಾಗಿಟ್ಟ ಪೊಲೀಸ್ ಅಧಿಕಾರಿಗಳು

ಇನ್ನು, ಏಪ್ರಿಲ್ 29ರಂದು ವಿಮಾನ ನಿಲ್ದಾಣದ ಪ್ರಾಧಿಕರದ ಇಮೇಲ್ ಸಂದೇಶ ಬಂದಿತ್ತು. ಈ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೇಲಧಿಕಾರಿಗಳ ಸೂಚನೆಯಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ನಗರ ಪೊಲೀಸ್ ಕಮಿಷನರ್ ಅಗರ್ವಾಲ್ ಈ ಗಂಭೀರ ಪ್ರಕರಣ ಮುಚ್ಚಿಟ್ಟಿದ್ದಾರೆ. ಸದ್ಯಕ್ಕೆ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಂಗಳೂರು ಏರ್​​ಪೋರ್ಟ್​ಗೆ ಬಾಂಬ್ ಬೆದರಿಕೆ ಕರೆ.. ಪೊಲೀಸರು ಫುಲ್ ಅಲರ್ಟ್​

https://newsfirstlive.com/wp-content/uploads/2024/05/MNG_AIR_PORT.jpg

    ದೊಡ್ಡ ಮಟ್ಟದ ರಕ್ತಪಾತ ಆಗಲಿದೆ ಎಂದು ಪತ್ರದಲ್ಲಿ ಉಲ್ಲೇಖವಾಗಿದೆ

    ಬಾಂಬ್ ಬೆದರಿಕೆ ವಿಷಯ ಗೌಪ್ಯವಾಗಿಟ್ಟ ಪೊಲೀಸ್ ಅಧಿಕಾರಿಗಳು

    ಇಮೇಲ್ ಸಂದೇಶದ ಬಗ್ಗೆ ಬಜ್ಪೆ ಠಾಣೆಯಲ್ಲಿ ದಾಖಲಾಯ್ತು ಪ್ರಕರಣ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬೆದರಿಕೆ ಬಂದಿದೆ. ಇದರಿಂದ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಹಮೀದಾ ಬಾನುಗೆ ಗೂಗಲ್​ ಡೂಡಲ್​ ಗೌರವ.. ಪುರುಷರನ್ನೇ ಕುಸ್ತಿಯಲ್ಲಿ ಸೋಲಿಸಿದ ಗಟ್ಟಿಗಿತ್ತಿ ಈಕೆ

ಉಗ್ರರ ಹೆಸರಿನಲ್ಲಿ ಇ-ಮೇಲ್ ಸಂದೇಶ ಬಂದಿದ್ದು, ಮೂರು ವಿಮಾನದಲ್ಲಿಯು ಸ್ಫೋಟಕ ಇಡಲಾಗಿದೆ. ವಿಮಾನದಲ್ಲಿಯು ಸ್ಫೋಟಕಗಳನ್ನು ಅಡಗಿಸಿ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ಅದು ಸ್ಫೋಟಗೊಳ್ಳಲಿದ್ದು, ದೊಡ್ಡ ಮಟ್ಟದ ರಕ್ತಪಾತವಾಗಲಿದೆ. ಈ ಘಟನೆಯಲ್ಲಿ ಹೆಚ್ಚು ಜನ ಪ್ರಾಣ ಕಳೆದುಕೊಳ್ಳಲಿದ್ದಾರೆ ಎಂದು ಇ-ಮೇಲ್​ನಲ್ಲಿ ಉಲ್ಲೇಖ ಮಾಡಲಾಗಿದೆ ಎಂದು ಸಂದೇಶ ಬಂದಿದೆ.

ಬಾಂಬ್ ಬೆದರಿಕೆ ವಿಷಯ ಗೌಪ್ಯವಾಗಿಟ್ಟ ಪೊಲೀಸ್ ಅಧಿಕಾರಿಗಳು

ಇನ್ನು, ಏಪ್ರಿಲ್ 29ರಂದು ವಿಮಾನ ನಿಲ್ದಾಣದ ಪ್ರಾಧಿಕರದ ಇಮೇಲ್ ಸಂದೇಶ ಬಂದಿತ್ತು. ಈ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೇಲಧಿಕಾರಿಗಳ ಸೂಚನೆಯಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ನಗರ ಪೊಲೀಸ್ ಕಮಿಷನರ್ ಅಗರ್ವಾಲ್ ಈ ಗಂಭೀರ ಪ್ರಕರಣ ಮುಚ್ಚಿಟ್ಟಿದ್ದಾರೆ. ಸದ್ಯಕ್ಕೆ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More