Advertisment

ಅಬ್ದುಲ್ ರಹೀಮಾನ್ ಪ್ರಕರಣ.. ಪೊಲೀಸ್ ವರಿಷ್ಠಾಧಿಕಾರಿ ನೀಡಿದ ಮಾಹಿತಿ ಏನು..?

author-image
Ganesh
Updated On
ಅಬ್ದುಲ್ ರಹೀಮಾನ್ ಪ್ರಕರಣ.. ಪೊಲೀಸ್ ವರಿಷ್ಠಾಧಿಕಾರಿ ನೀಡಿದ ಮಾಹಿತಿ ಏನು..?
Advertisment
  • ಮರಳು ಸಾಗಾಟಕ್ಕೆ ಹೋದಾಗ ದುಷ್ಕರ್ಮಿಗಳಿಂದ ದಾಳಿ
  • ತೀವ್ರ ಗಾಯಗೊಂಡಿದ್ದ ಓರ್ವ ವ್ಯಕ್ತಿ ಸಾವು, ಮತ್ತೊಬ್ಬನಿಗೆ ಗಾಯ
  • ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮರಳು ಸಾಗಾಟಕ್ಕೆಂದು ಹೋದಾಗ ಅಬ್ದುಲ್ ರಹೀಮಾನ್ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ. ಆಸ್ಪತ್ರೆಗೆ ಕರೆದೊಯ್ದಾಗ ಅಬ್ದುಲ್ ನಿಧನರಾಗಿರೋದು ಗೊತ್ತಾಗಿದೆ. ಕೃತ್ಯಕ್ಕೆ ಕಾರಣ ಹಾಗೂ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದೇವೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ತಿಳಿಸಿದ್ದಾರೆ.

Advertisment

ಬಂಟ್ವಾಳ ಡಿವೈಎಸ್​ಪಿ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದ್ದು, ಶಂಕಿತರನ್ನು ಕರೆದು ವಿಚಾರಣೆಯನ್ನು ಮಾಡುತ್ತಿದ್ದೇವೆ ಅಂತ ಎಸ್​ಪಿ ಯತೀಶ್.ಎನ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರಲ್ಲಿ ಮತ್ತೆ ಹರಿದ ನೆತ್ತರು.. ತಲ್ವಾರ್​ನಿಂದ ಕೊಚ್ಚಿ ಅಬ್ದುಲ್ ರಹಿಮಾನ್​ನ ಭೀಕರ ಹತ್ಯೆ

publive-image

ಏನಂದ್ರು ಅಧಿಕಾರಿ..?

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಧ್ಯಾಹ್ನ 3 ರಿಂದ 3.30ರ ಸುಮಾರಿಗೆ ಮಧ್ಯ ವಯಸ್ಕಿನ ಯುವಕ ಹಾಗೂ ಆತನ ಸ್ನೇಹಿತ ಒಂದು ಕಡೆ ಮರಳನ್ನು ಡಂಪ್ ಮಾಡಲು ಹೋದಾಗ ಅಟ್ಯಾಕ್ ಆಗಿದೆ. ಯಾರೋ ದುಷ್ಕರ್ಮಿಗಳು ಅವರ ಮೇಲೆ ಅಟ್ಯಾಕ್ ಮಾಡಿದ್ದಾರೆ. ದಾಳಿಯಲ್ಲಿ ಅಬ್ದುಲ್ ರಹೀಮಾನ್ ಮೃತಪಟ್ಟಿದ್ದಾನೆ.

Advertisment

ಇದನ್ನೂ ಓದಿ: ಅಬ್ದುಲ್ ರಹಿಮಾನ್​ನ ಬರ್ಬರ ಹತ್ಯೆ.. ಸದ್ಯ ಹೇಗಿದೆ ಮಂಗಳೂರು ಪರಿಸ್ಥಿತಿ..?

publive-image

ಆತನ ಜೊತೆಯಲ್ಲಿದ್ದ ಸ್ನೇಹಿತನಿಗೂ ಸ್ವಲ್ಪ ಏಟಾಗಿದೆ. ಘಟನೆ ವೇಳೆ ಆತ ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ. ಗಾಯಗೊಂಡಿರುವ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದೇವೆ. ಬಂಟ್ವಾಳ ಡಿಎಸ್​ಪಿ ನೇತೃತ್ವದಲ್ಲಿ ತನಿಖೆಗೆ ಎರಡು ತಂಡ ರಚನೆ ಮಾಡಿದ್ದೇವೆ. ಆರೋಪಿಗಳ ಗುರುತು ಪತ್ತೆ ಹಾಗೂ ಅರೆಸ್ಟ್ ಮಾಡೋದಕ್ಕೆ ತಂಡ ರಚನೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: RCB ಗೆಲುವಿನಲ್ಲಿ ಕಿಂಗ್​​ ಕೊಹ್ಲಿಯ ಮುತ್ತಿನಂತ ವರ್ಲ್ಡ್​​ರೆಕಾರ್ಡ್ಸ್​​​.. ಏನೇನು ದಾಖಲೆ ಬರೆದರು ವಿರಾಟ್​​?

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment