/newsfirstlive-kannada/media/post_attachments/wp-content/uploads/2024/10/RAIN-SCHOOL-1.jpg)
ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೊಷಣೆ ಮಾಡಲಾಗಿದೆ.
ಅಂಗನವಾಡಿಯಿಂದ ಫ್ರೌಡಶಾಲೆಯವರೆಗೆ ರಜೆ ಘೋಷಣೆ ಮಾಡಲಾಗಿದೆ. ನಿನ್ನೆ ರಾತ್ರಿ ಇಡೀ ಭಾರೀ ಮಳೆ ಸುರಿದಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಮಳೆ ಆಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಇದನ್ನೂ ಓದಿ: NHM ವೈದ್ಯರಿಗೆ, ನರ್ಸ್ಗಳಿಗೆ ಭರ್ಜರಿ ಗುಡ್ನ್ಯೂಸ್.. ಕೊರೊನಾ ಉಲ್ಬಣ ಬೆನ್ನಲ್ಲೇ ವೇತನ ಹೆಚ್ಚಳ..!
ಇನ್ನು, ಉಡುಪಿ ಜಿಲ್ಲೆಯಲ್ಲಿ ಕಡಲು ಅಬ್ಬರಿಸಿ ಬೊಬ್ಬಿಡುತ್ತಿದೆ. ಅರಬ್ಬಿ ಸಮುದ್ರ ಅಕ್ಷರಶಃ ಪ್ರಕ್ಷುಬದ್ಧವಾಗಿದ್ದು ಮತ್ತೊಂದು ದೊಡ್ಡ ಚಂಡಮಾರುತದ ಎಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದೆ. ಈ ನಡುವೆ ಪ್ರವಾಸಿಗರ ದಂಡು ಕಡಲತಡಿಗೆ ಹರಿದುಬರುತ್ತಿದ್ದು ಕಡಲಿಗೆ ಇಳಿಯದಂತೆ ಒಂದು ಹಗ್ಗವನ್ನ ಕಟ್ಟಿ ಬೆರಳೆಣಿಕೆಯ ಲೈಫ್ ಗಾರ್ಡ್ಗಳನ್ನು ನಿಯೋಜನೆ ಮಾಡಲಾಗಿದೆ.
ಚಂಡಮಾರುತದ ಎಚ್ಚರಿಕೆ ಇರುವುದರಿಂದ ಜಿಲ್ಲಾಡಳಿತ ಇನ್ನಷ್ಟು ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಅನ್ನೋದು ಸ್ಥಳೀಯರು ಹಾಗೂ ಮೀನುಗಾರರ ಒತ್ತಾಯ ಮಾಡಿದ್ದಾರೆ. ಅಲ್ಲದೇ ಉಡುಪಿ ಜಿಲ್ಲಾಡಳಿತ ಇಡೀ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಇದನ್ನೂ ಓದಿ: ಫೈನಲ್ಗೆ ಎಂಟ್ರಿ ಕೊಟ್ಟ ಆರ್ಸಿಬಿ.. ಕರ್ನಾಟಕದಲ್ಲಿ ಸಂಭ್ರಮ ಹೇಗಿತ್ತು..? Photos
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ