/newsfirstlive-kannada/media/post_attachments/wp-content/uploads/2024/10/Ramanna-L-Bhovi.jpg)
ಕೊಪ್ಪಳ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲೆ ಹಲ್ಲೆ ಪ್ರಕರಣ ಸಂಬಂಧಪಟ್ಟಂತೆ ಕಠಿಣ ಶಿಕ್ಷೆಗೆ ಒಳಗಾದ 3 ಅಪರಾಧಿಗಳು ಪೈಕಿ ಓರ್ವ ಸಾವನ್ನಪಿದ್ದಾನೆ. ಮೃತಪಟ್ಟ ಅಪರಾಧಿಯನ್ನು ರಾಮಣ್ಣ ಎಲ್ ಭೋವಿ (39) ಎಂದು ಗುರುತಿಸಲಾಗಿದೆ.
ಮರಕುಂಬಿ ಪ್ರಕರಣ ಸಂಬಂಧಿಸಿದಂತೆ 101 ಅಪರಾಧಿಗಳ ಪೈಕಿ 98 ಮಂದಿ ಮೇಲೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ಅದರಲ್ಲಿ ಮೂವರಿಗೆ ಕೊಪ್ಪಳ ಕೋರ್ಟ್ ಕಠಿಣ ಶಿಕ್ಷೆ ವಿಧಿಸಿದೆ. ಈ ಪ್ರಕರಣ ಸಂಬಂಧ ನ್ಯಾಯಧೀಶರು ತೀರ್ಪು ಪ್ರಕಟಿಸಿದ ನಂತರ ಅಪರಾಧಿ ರಾಮಣ್ಣ ಎಲ್ ಭೋವಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ರಾತ್ರಿ 9:00 ಗಂಟೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅಪರಾಧಿ ಮೃತಪಟ್ಟಿದ್ದಾನೆಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಏನಿದು ಮರಕುಂಬಿ ಪ್ರಕರಣ?
ಆಗಸ್ಟ್ 28, 2014ರಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಸವರ್ಣೀಯರು, ದಲಿತರ ಮೇಲೆ ಹಲ್ಲೆ ನಡೆಸಿ, ಮನೆಗಳನ್ನ ಧ್ವಂಸಗೊಳಿಸಲಾಗಿತ್ತು. ದಲಿತರ ಮೇಲಿನ ಈ ದೌರ್ಜನ್ಯ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡಿತ್ತು. ಗಂಗಾವತಿ ಪೊಲೀಸ್ ಠಾಣೆಯಲ್ಲಿ 117 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಬರೋಬ್ಬರಿ ಒಂಭತ್ತು ವರ್ಷಗಳ ನಂತರ ಜಿಲ್ಲಾ ಸತ್ರ ನ್ಯಾಯಧೀಶರು ತೀರ್ಪು ಪ್ರಕಟಿಸಿದ್ದಾರೆ. ಇತಿಹಾಸದಲ್ಲಿಯೇ ದೊಡ್ಡ ತೀರ್ಪು ನೀಡಿ ಕೊಪ್ಪಳ ಕೋರ್ಟ್ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಕೊಪ್ಪಳದಲ್ಲಿ 98 ಜನರಿಗೆ ಜೀವಾವಧಿ ಶಿಕ್ಷೆ ನೀಡಿದ ಕೋರ್ಟ್; ಏನಿದು ಮರಕುಂಬಿ ಪ್ರಕರಣ? ಇಲ್ಲಿದೆ ಮಾಹಿತಿ
ಅಟ್ರಾಸಿಟಿ ಕೇಸ್ನಲ್ಲಿ 101 ಜನರ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ತಲಾ 5 ಸಾವಿರ ರೂಪಾಯಿ ದಂಡವನ್ನ ಕೊಪ್ಪಳದ ಸತ್ರ ನ್ಯಾಯಾಲಯ ವಿಧಿಸಿ ಆದೇಶ ಹೊರಡಿಸಿದೆ. ಉಳಿದ ಮೂವರಿಗೆ ಕಠಿಣ ಶಿಕ್ಷೆ, ತಲಾ 2 ಸಾವಿರ ದಂಡ ವಿಧಿಸಿದೆ. 117 ಮಂದಿಯ ಪೈಕಿ 16 ಆರೋಪಿಗಳು ಮೃತಪಟ್ಟಿದ್ದಾರೆ. 101 ಆರೋಪಿಗಳ ವಿರುದ್ಧ ಇರುವ ದಾಖಲೆ ಪರಿಶೀಲನೆ ಮಾಡಲಾಗಿದ್ದು. ಅಕ್ಟೋಬರ್ 21ರಂದು ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿದೆ. ನ್ಯಾಯಧೀಶರಾದ ಚಂದ್ರಶೇಖರ್ರಿಂದ ಮಹತ್ವದ ತೀರ್ಪು ನೀಡಿದ್ದಾರೆ. ತಡರಾತ್ರಿ ಬಿಗಿ ಬಂದೋಬಸ್ತ್ನಲ್ಲಿ ಎಲ್ಲಾ ಅಪರಾಧಿಗಳನ್ನ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ