Advertisment

ವರದಕ್ಷಿಣೆ ಕಿರುಕುಳ ಆರೋಪ, ವಿವಾಹಿತೆ ಟೆಕ್ಕಿ ಆತ್ಮಹ*.. ಆಕೆಯ ಸಾವಿಗೆ ಪತಿ, ಮೈದುನಾ ಕಾರಣರಾದ್ರಾ?

author-image
AS Harshith
Updated On
ವರದಕ್ಷಿಣೆ ಕಿರುಕುಳ ಆರೋಪ, ವಿವಾಹಿತೆ ಟೆಕ್ಕಿ ಆತ್ಮಹ*.. ಆಕೆಯ ಸಾವಿಗೆ ಪತಿ, ಮೈದುನಾ ಕಾರಣರಾದ್ರಾ?
Advertisment
  • ಇಪ್ಪತ್ತೆರಡು ವರ್ಷದ ಟೆಕ್ಕಿ ಆತ್ಮಹತ್ಯೆ ಶರಣು
  • ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ
  • ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಈ ನಿರ್ಣಯ ತೆಗೆದುಕೊಂಡ್ರಾ?

ವಿಜಯನಗರ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಆರೋಪವೊಂದು ಕೇಳಿಬಂದಿದೆ. ಗಂಗಮ್ಮನ ಗುಡಿ ಮುಖ್ಯ ರಸ್ತೆಯಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ.

Advertisment

22 ವರ್ಷದ ಪೂಜಾ ಆತ್ಮಹತ್ಯೆ ಶರಣಾದ ಟೆಕ್ಕಿ. ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

publive-image

ಪೂಜಾ ಮೂಲತಃ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ತೆಗ್ಗಿ ಬಸಾಪುರ ಮೂಲದವರು. ಪೂಜಾ ಸಾವಿಗೆ ಪತಿ ಸುನೀಲ್ ಹಾಗೂ ಮೈದುನಾ ಅನಿಲ್ ಕಾರಣ ಎಂದು ಯುವತಿ ಪೋಷಕರ ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: KRS Dam: ಎರಡು ವಾರದಿಂದ ಒಳ ಹರಿವು ಹೆಚ್ಚಳ.. 100 ಅಡಿ ಭರ್ತಿ! ಸದ್ಯ ಎಷ್ಟಿದೆ ನೀರಿನ ಮಟ್ಟ? 

Advertisment

2022 ರಲ್ಲಿ ಪೂಜಾ ಪೋಷಕರು ಸುನೀಲ್ ಜೊತೆ ವಿವಾಹ ಮಾಡಿದ್ದರು. ಆದರೀಗ ಪೂಜಾ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಬದುಕು ಮುಗಿಸಿದ್ದಾರೆ.

publive-image

ಇದನ್ನೂ ಓದಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಭೀಕರ ಕೊಲೆ; ಆರೋಪಿ ಅರೆಸ್ಟ್​, ಹತ್ಯೆಯ ಕಾರಣ ಮಾತ್ರ ವಿಚಿತ್ರ

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆತ್ಮಹತ್ಯೆಗೀಡಾದ ಟೆಕ್ಕಿ ಪೂಜಾ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಪೂಜಾ ಮೃತದೇಹ ರವಾನಿಸಲಾಗಿದೆ. ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment