ಸರ್ಕಾರಿ ಉದ್ಯೋಗಿಗಳಿಗೆ ಸಿಹಿ ಸುದ್ದಿ, ಈ ದಿನ ಚಿನ್ನ ಖರೀದಿ ಬೇಡ; ಇಲ್ಲಿದೆ ಇಂದಿನ ಭವಿಷ್ಯ!

author-image
Veena Gangani
Updated On
ಪ್ರೇಮಿಗಳಿಗೆ ಶುಭದಿನ; ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ; ಇಲ್ಲಿದೆ ಇಂದಿನ ಭವಿಷ್ಯ
Advertisment
  • ಅವಸರದಲ್ಲಿ ಮಾಡಿದ ಕೆಲಸಗಳಿಂದ ನಷ್ಟ ಹೊಂದುತ್ತೀರಿ
  • ಅನಾರೋಗ್ಯ ಪೀಡಿತರು ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಿ
  • ಹಿಂದೆ ಮಾಡಿದ್ದ ಉತ್ತಮ ಕೆಲಸಗಳಿಗೆ ಇಂದು ಮೆಚ್ಚುಗೆ ಸಿಗುತ್ತದೆ

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

ಶ್ರೀ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಪಂಚಮಿ ತಿಥಿ, ಮೂಲ ನಕ್ಷತ್ರ, ರಾಹುಕಾಲ ರಾಹುಕಾಲ ಮಂಗಳವಾರ ಮಧ್ಯಾಹ್ನ 3.00 ರಿಂದ 4.30 ರವರೆಗೆ ಇರಲಿದೆ.

ಮೇಷ ರಾಶಿ

publive-image

    • ಅನಾರೋಗ್ಯ ಪೀಡಿತರು ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಿ
    • ಈ ದಿನ ಹಿತಶತೃಗಳಿಂದ ತೊಂದರೆ ಸಾಧ್ಯತೆ, ಎಚ್ಚರಿಕೆ ಇರಲಿ
    • ಕುಟುಂಬದ ಸದಸ್ಯರ ಮಧ್ಯೆ ಕಲಹ ಸಾಧ್ಯತೆ
    • ಇಂದು ಶಾಂತವಾಗಿರಿ, ನಿಮ್ಮ ಕೆಲಸ-ಕಾರ್ಯಗಳ ಬಗ್ಗೆ ಗಮನಹರಿಸಿ
    • ಈಶ್ವರನನ್ನು ಆರಾಧಿಸಿ

ವೃಷಭ

publive-image

  • ದೊಡ್ಡ ಉದ್ದಿಮೆ-ಕೈಗಾರಿಕೆಗಳನ್ನು ಹೊಂದಿರುವವರಿಗೆ ಶುಭಫಲ
  • ಹಿಂದೆ ಮಾಡಿದ್ದ ಉತ್ತಮ ಕೆಲಸಗಳಿಗೆ ಇಂದು ಮೆಚ್ಚುಗೆ ಸಿಗುತ್ತದೆ
  • ವೈವಾಹಿಕ ಜೀವನದಿಂದ ಸಂತೋಷ ಸಿಗುತ್ತದೆ
  • ಕುಟುಂಬಕ್ಕೆ ಹೊಸ ಅತಿಥಿ ಆಗಮನ ಸಾಧ್ಯತೆ ಇದೆ
  • ನಿಮ್ಮ ವೃತ್ತಿಯಲ್ಲಿ ಸಮಾಧಾನ ಸಿಗುವ ದಿನ
  • ಬೇರೆಯವರಿಗೆ ಸಹಾಯ ಮಾಡುತ್ತಿರಿ, ಇದರಿಂದ ಮನಸ್ಸಿಗೆ ತೃಪ್ತಿ ಸಿಗಲಿದೆ
  • ಹೊಸ ಕೆಲಸಗಳು, ಯೋಜನೆಗಳು ಆರಂಭವಾಗುವ ದಿನ

ಮಿಥುನ

publive-image

  • ಅವಸರದಲ್ಲಿ ಮಾಡಿದ ಕೆಲಸಗಳಿಂದ ನಷ್ಟ ಹೊಂದುತ್ತೀರಿ
  • ಉದ್ಯೋಗ ವ್ಯಾಪಾರದೊಂದಿಗೆ ಇನ್ನೊಂದು ಕೆಲಸವನ್ನು ಶುರು ಮಾಡುವ ಯೋಚನೆ ಬರುತ್ತದೆ
  • ಹಣಕಾಸಿನ ವಿಚಾರದಲ್ಲಿ ಈ ದಿನ ಚೆನ್ನಾಗಿದೆ
  • ಪೂರ್ವಿಕರು, ಹಿರಿಯರು ಮಾಡಿದ ಧರ್ಮ-ಕರ್ಮಗಳಿಂದ ನಿಮಗೆ ಯಶಸ್ಸು ಸಿಗುತ್ತದೆ ಗುರುಗಳನ್ನು ಆರಾಧಿಸಿ

ಕಟಕ

publive-image

  • ವೃತ್ತಿಪರರು ನಿಮ್ಮ ಮೇಲಾಧಿಕಾರಿಗಳ ವಿಶ್ವಾಸಕ್ಕೆ ಪಾತ್ರರಾಗುತ್ತೀರಿ
  • ಸಮಾಜದಲ್ಲಿ ನಿಮ್ಮ ಚಿಂತನೆ-ವಿಚಾರಗಳಿಗೆ ಮನ್ನಣೆ ದೊರೆಯುತ್ತದೆ
  • ವಾದ-ವಿವಾದಗಳನ್ನು ಮಾಡಿಕೊಳ್ಳಬೇಡಿ ಕೆಲಸಗಳು ಹಾಳಾಗುತ್ತವೆ
  • ಇಂದು ನಿಮ್ಮ ಮಾತುಗಳಲ್ಲಿ ಗೊಂದಲವಿಲ್ಲದೆ ಸ್ಪಷ್ಟವಾಗಿರಲಿ
  • ಬಹಳ ಕಾಲದ ನಂತರ ನಿಮ್ಮ ಪ್ರೀತಿ ಪಾತ್ರರ ದರ್ಶನದಿಂದ ಮನಸ್ಸಿಗೆ ಆನಂದ
  • ಮಕ್ಕಳ ಆರೋಗ್ಯ ವ್ಯತ್ಯಾಸದಿಂದ ಸಾಯಂಕಾಲದ ಸಮಯಕ್ಕೆ ಬೇಸರ ಸಾಧ್ಯತೆ
  • ಸಾಯಂಕಾಲ ಸೂರ್ಯನನ್ನು ಪ್ರಾರ್ಥನೆ ಮಾಡಿ

ಸಿಂಹ

publive-image

  • ಜಮೀನು, ಆಸ್ತಿ ವಿಚಾರಗಳ ಬಗ್ಗೆ ಪರ-ವಿರೋಧ ಚರ್ಚೆ ಸಾಧ್ಯತೆ
  • ಮನೆಯ ಹೊರಗಡೆ ವಿನಾಕಾರಣ ಜಗಳವಾಗಬಹುದು ಎಚ್ಚರಿಕೆ ಇರಲಿ
  • ನೀವು ಬಳಸುವ ವಾಹನ ಬಗ್ಗೆ ಜಾಗ್ರತೆ ಇರಲಿ, ವಾಹನದಿಂದ ನಷ್ಟವಿದೆ
  • ಇಂದು ವಾಹನ ಚಾಲನೆ ಮಾಡದೆ ಇದ್ದರೆ ಒಳ್ಳೆಯದು
  • ಹೃದ್ರೋಗಿಗಳು ತುಂಬಾ ಕಷ್ಟ ಅನುಭವಿಸುವ ಸಾಧ್ಯತೆ ಇದೆ
  • ಔಷಧೋಪಚಾರಗಳು ಪರಿಣಾಮ ಬೀರದೆ ಇರಬಹುದು ಎಚ್ಚರ
  • ಉಗ್ರ ನರಸಿಂಹನ ಆರಾಧನೆ ಮಾಡಿ

ಕನ್ಯಾ

publive-image

  • ಸರ್ಕಾರಿ ಉದ್ಯೋಗಿಗಳಿಗೆ ಸಿಹಿ ಸುದ್ದಿ ಸಾಧ್ಯತೆ
  • ಕಾರ್ಯಕ್ಷೇತ್ರದಲ್ಲಿ ಹಿಂದೆಂದೂ ಕಾಣದ ಸಾಧನೆ, ಬದಲಾವಣೆ ಸಾಧ್ಯತೆ
  • ಸಹೋದರ ವರ್ಗದ ಹಾರೈಕೆಯಿಂದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯತೆ
  • ವೈವಾಹಿಕ ಜೀವನ ಸುಖದಾಯಕವಾಗಿರುತ್ತದೆ
  • ಅವಿವಾಹಿತರಿಗೆ ವಿವಾಹ ವಿಚಾರದಲ್ಲಿ ಶುಭ ಫಲ
  • ಇಂದು ಆದಾಯದಲ್ಲಿ ಹೆಚ್ಚಳ ಆಗಲಿದೆ
  • ಆತ್ಮವಿಶ್ವಾಸ ಹೆಚ್ಚಾಗಿ ಸಂತೋಷ ಪಡುತ್ತೀರಿ

ತುಲಾ

publive-image

  • ಬೇರೆಯವರ ವಿಷಯಕ್ಕೆ ತಲೆ ಹಾಕಬೇಡಿ, ಅವಮಾನ ಸಾಧ್ಯತೆ
  • ಆದಾಯ ಇರುವ ದಿನ, ಆದರೆ ಖರ್ಚು ಕೂಡ ಹೆಚ್ಚಾಗಿರುತ್ತದೆ
  • ಚಿನ್ನಾಭರಣಗಳ ಖರೀದಿ ಬೇಡ, ಮನೆಯಲ್ಲಿರುವ ಆಭರಣಗಳ ಬಗ್ಗೆ ಜಾಗ್ರತೆ ಇರಲಿ
  • ಹೊಸ ಸಂಪರ್ಕಗಳಿಂದ ಮನಸ್ಸಿಗೆ ಖುಷಿಯಾಗಬಹುದು
  • ಇಂದು ಮಕ್ಕಳ ಶಿಕ್ಷಣ ವಿಚಾರವಾಗಿ ಉತ್ತಮ ದಿನ
  • ನಿಮ್ಮ ಆಲೋಚನೆಗಳು ಕುಟುಂಬಕ್ಕೆ ಸೀಮಿತವಾಗಿರದೆ ಸಮಾಜಮುಖಿಯಾಗಿರಲಿ
  • ವೈಯಕ್ತಿಕ ಲಾಭಕ್ಕೆ ನಂಬಿದವರಿಂದ ಮೋಸ ಸಾಧ್ಯತೆ
  • ವೀರಾಂಜನೇಯ ಸ್ವಾಮಿಯನ್ನು ಪ್ರಾರ್ಥನೆ ಮಾಡಿ

ವೃಶ್ಚಿಕ

publive-image

  • ಹಣ ಹೂಡಿಕೆಯಿಂದ ಮನಸ್ಸಿಗೆ ಸಮಾಧಾನ ಸಿಗಬಹುದು
  • ಆಕಸ್ಮಿಕವಾಗಿ ಹಣ ಸಿಗುವುದರಿಂದ ಅಹಂಕಾರ ಬರಬಹುದು ಎಚ್ಚರ
  • ಸಂಬಂಧಿಕರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ
  • ನಿಮ್ಮ ತಾಳ್ಮೆ - ವಿನಯ ಮಾತ್ರ ನಿಮ್ಮನ್ನು ಕಾಪಾಡಬಲ್ಲದು
  • ನಿಮ್ಮನ್ನು ನೀವು ಮರೆಯುವ ಸಾಧ್ಯತೆ ಇದೆ
  • ಹಣದ ವ್ಯವಹಾರ, ಹೂಡಿಕೆಯನ್ನು ಮಧ್ಯಾಹ್ನದ ನಂತರ ಮಾಡಿ
  • ಶ್ರೀರಾಮ ಪರಿವಾರ ದೇವತೆಗಳನ್ನು ಆರಾಧನೆ ಮಾಡಿ

ಧನಸ್ಸು

publive-image

  • ಸೈದ್ಧಾಂತಿಕವಾಗಿ ಮಾಡಬೇಕಿರುವ ಸಮಸ್ಯೆಗಳ ಪರಿಹಾರಕ್ಕೆ ಹಿನ್ನಡೆ
  • ನಿಮ್ಮ ಶತ್ರುಗಳ ಮಾತಿನಿಂದ ನಿಮ್ಮ ಆತ್ಮಿಯರು ನಿಮ್ಮನ್ನು ಅವಮಾನಿಸುವ ಸಾಧ್ಯತೆ
  • ನಿಮ್ಮೊಂದಿಗೆ ಸರಿಯಾಗಿ ವ್ಯವಹರಿಸುವುದಿಲ್ಲ, ಮಾತಾಡಲು ಒಪ್ಪುವುದಿಲ್ಲ
  • ಇಂದು ನಿಮ್ಮ ವೈಯಕ್ತಿಕ ಪ್ರತಿಷ್ಠೆ, ಅಹಂಕಾರ ಬಿಟ್ಟರೆ ಒಳ್ಳೆಯದು
  • ಸಮಾಜದಲ್ಲಿ ಚಿಕ್ಕವರ ಮುಂದೆ ಚಿಕ್ಕವರಾಗುವ ಸಾಧ್ಯತೆ ಇದೆ
  • ಕಲ್ಕಿ ಭಗವಾನರನ್ನು ಸ್ಮರಿಸಿ

ಮಕರ

publive-image

  • ಸ್ಮೇಹಿತರೊಂದಿಗೆ ನಿಮ್ಮ ವಿದ್ಯಾಭ್ಯಾಸ, ಕೆಲಸ, ಹೊಸ ಆಲೋಚನೆಗಳ ಬಗ್ಗೆ ಚರ್ಚಿಸಿದರೆ ಒಳ್ಳೆಯದು
  • ಕೆಲಸದ ಒತ್ತಡ ಇದ್ದಾಗ್ಯೂ ಜನಸೇವೆ ಮಾಡಿ ಗೌರವ ಹೆಚ್ಚಾಗುತ್ತದೆ
  • ಜನರು ಕೊಡುವ ಅಭಿಮಾನ, ಪ್ರೀತಿ, ಗೌರವಕ್ಕೆ ಭಾಜನರಾಗುತ್ತೀರಿ
  • ನಿಮ್ಮನ್ನು ನಂಬಿದವರಿಗೆ ನ್ಯಾಯವನ್ನು ಕೊಡುತ್ತೀರಿ
  • ಬೆಳ್ಳಂಬೆಳಗ್ಗೆ ಕಹಿ ಘಟನೆಯಿಂದ ಮನೆಯಲ್ಲಿ ಅಶಾಂತಿ ಸಾಧ್ಯತೆಯಿದೆ
  • ಕೋದಂಡರಾಮನ ಪ್ರಾರ್ಥನೆ ಮಾಡಿ

ಕುಂಭ

publive-image

  • ಇಂದು ಹಣದ ವಿಚಾರದಲ್ಲಿ ಗೊಂದಲ ಸಾಧ್ಯತೆ
  • ಆದಾಯ-ಖರ್ಚಿನ ಅಸ್ಪಷ್ಟತೆಯಿಂದ ತೊಳಲಾಡಬಹುದು
  • ಗಂಟಲಿನ ಸಮಸ್ಯೆ ಕಾಡಬಹುದು ತಾತ್ಸಾರ ಮಾಡಬೇಡಿ
  • ಸಂಗೀತಕಾರರಿಗೆ ತಮ್ಮ ಕಾರ್ಯದಲ್ಲಿ ಹಿನ್ನಡೆ, ಕಾರ್ಯಕ್ರಮ ರದ್ದಾಗುವ ಸೂಚನೆ
  • ರಾಜಕಾರಣಿಗಳಿಗೆ ಹೊಸ ಸುದ್ದಿ ಸಾಧ್ಯತೆ
  • ಮಕ್ಕಳ ಉತ್ತಮ ಫಲಿತಾಂಶದಿಂದ ಸಮಾಧಾನ
  • ಶಿವಾರಾಧನೆ ಮಾಡಿ

ಮೀನ 

publive-image

  • ತತ್ವ ಸಿದ್ಧಾಂತದ ಆಧಾರದ ಮೇಲೆ ಸಮಸ್ಯೆಗಳನ್ನು ಬಗೆಹರಿಸಲು ಕಷ್ಟದ ದಿನ
  • ಪ್ರಾಯೋಗಿಕ ರೀತಿಯಿಂದ ಬಗೆಹರಿಸಿಕೊಳ್ಳಿ
  • ದಾಕ್ಷಿಣ್ಯಕ್ಕೆ ಒಳಗಾಗಿ ನಿಮ್ಮ ಆತ್ಮಗೌರವಕ್ಕೆ ಕೊರತೆ ಸಾಧ್ಯತೆ
  • ಯಾವುದೇ ರೀತಿಯ ಸಮಸ್ಯೆಗಳಿದ್ದರೆ ಮುಕ್ತವಾಘಿ ಮಾತಾಡಿ ಬಗೆಹರಿಸಿಕೊಳ್ಳಿ
  • ಈ ದಿನ ವಿದ್ಯಾರ್ಥಿಗಳಿಗೆ ಸಮಸ್ಯೆ ಬಗೆ ಹರಿಯುತ್ತದೆ
  • ಮನೆ ದೇವಾಲಯಗಳಲ್ಲಿ ಕುಟುಂಬದ ಹಿತಕ್ಕಾಗಿ ಧರ್ಮಕಾರ್ಯ ನಡೆಯುತ್ತವೆ
  • ಮನಸ್ಸಿಗೆ ಆಹ್ಲಾದ ನೆಮ್ಮದಿ ದೊರೆಯುತ್ತದೆ
  • ನವಗ್ರಹರ ಆರಾಧನೆ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

Advertisment