/newsfirstlive-kannada/media/post_attachments/wp-content/uploads/2024/08/Team-India-1.jpg)
ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ನಡೆದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ. ಮುಂದೆ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ನಡೆಯಲಿದ್ದು, ಬಲಿಷ್ಠ ಟೀಮ್ ಇಂಡಿಯಾ ಪ್ರಕಟಿಸಲು ಬಿಸಿಸಿಐ ಮುಂದಾಗಿದೆ.
ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯೋ ಟೀಮ್ ಇಂಡಿಯಾ ಆಟಗಾರರೇ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಭಾಗವಾಗಲಿದ್ದಾರೆ. ಹೀಗಾಗಿ ಟೀಮ್ ಇಂಡಿಯಾದಲ್ಲಿ ಯಾರಿಗೆ ಅವಕಾಶ ಸಿಗಲಿದೆ? ಅನ್ನೋ ಕುತೂಹಲ ಹೆಚ್ಚಾಗಿದೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಆಡಲು ಕರ್ನಾಟಕದ ಇಬ್ಬರು ಸ್ಟಾರ್ ಆಟಗಾರರು ಎದುರು ನೋಡುತ್ತಿದ್ದಾರೆ.
ಸ್ಟಾರ್ ಆಟಗಾರರಿಗೆ ಕೊಕ್ ಸಾಧ್ಯತೆ
ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಟಾಪ್ ಆರ್ಡರ್ ಬ್ಯಾಟಿಂಗ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಶುಭ್ಮನ್ ಗಿಲ್ ಸೇರಿದಂತೆ ಸ್ಟಾರ್ ಆಟಗಾರರೇ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹೊತ್ತಲ್ಲೇ ಇವರಿಗೆ ಕೊಕ್ ನೀಡಿ ದೇಶೀಯ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರೋ ಮಾಯಾಂಕ್ ಅಗರ್ವಾಲ್, ಕರುಣ್ ನಾಯರ್ ಅವರಿಗೆ ಅವಕಾಶ ನೀಡಬಹುದು.
ಮಯಾಂಕ್ ಅಗರ್ವಾಲ್
ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ಕ್ಯಾಪ್ಟನ್ ಮಯಾಂಕ್ ಅಗರ್ವಾಲ್ ಅಮೋಘ ಪ್ರದರ್ಶನ ನೀಡಿದ್ರು. ಇವರು ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿ ಕರ್ನಾಟಕದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದೆ. ಮಯಾಂಕ್ ಈವರೆಗೆ ಆಡಿರೋ 7 ಪಂದ್ಯಗಳಲ್ಲಿ 4 ಶತಕ ಹಾಗೂ 1 ಅರ್ಧಶತಕದ ಜತೆಗೆ 613 ರನ್ ಕಲೆಹಾಕಿದ್ದಾರೆ.
ಕರುಣ್ ನಾಯರ್
ಕರ್ನಾಟಕದ ಮಾಜಿ ಕ್ರಿಕೆಟರ್ ಕರುಣ್ ನಾಯರ್ ವಿದರ್ಭ ತಂಡವನ್ನು ಲೀಡ್ ಮಾಡುತ್ತಿದ್ದಾರೆ. ಇವರಯ ಕೂಡ ವಿಜಯ್ ಹಜಾರೆ ಟ್ರೋಫಿಯಲ್ಲಿ ಅಬ್ಬರಿಸುತ್ತಿದ್ದಾರೆ. ಮಯಾಂಕ್ ಜತೆಗೆ 500ಕ್ಕೂ ಹೆಚ್ಚು ರನ್ ಬಾರಿಸಿದ ದಾಖಲೆಯನ್ನು ಕರುಣ್ ನಾಯರ್ ಸೃಷ್ಟಿಸಿದ್ದಾರೆ. ಕರುಣ್ ನಾಯರ್ 5 ಇನಿಂಗ್ಸ್ಗಳಲ್ಲಿ 4 ಶತಕ ಸಿಡಿಸಿದ್ದು, 542 ರನ್ ಕಲೆಹಾಕಿದ್ದಾರೆ.
ಇದನ್ನೂ ಓದಿ:ICC ಚಾಂಪಿಯನ್ಸ್ ಟ್ರೋಫಿ; ಟೀಮ್ ಇಂಡಿಯಾಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟ ಬುಮ್ರಾ; ಏನಾಯ್ತು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ