ಇತ್ತೀಚೆಗೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಮಯಾಂಕ್
ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ಮಯಾಂಕ್ ಅಗರ್ವಾಲ್
ತ್ರಿಪುರಾದಿಂದ ಬೆಂಗಳೂರಿಗೆ ಬಂದ ಕರ್ನಾಟಕದ ಸ್ಟಾರ್ ಕ್ರಿಕೆಟರ್
ತ್ರಿಪುರಾ: ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ಟೀಮ್ ಇಂಡಿಯಾ ಕ್ರಿಕೆಟಿಗ, ಕರ್ನಾಟಕ ರಣಜಿ ತಂಡದ ನಾಯಕ ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಈಗ ಬೆಂಗಳೂರಿಗೆ ಸೇಫ್ ಆಗಿ ಬಂದಿದ್ದಾರೆ. ತ್ರಿಪುರಾದಲ್ಲಿ ವಿಮಾನದಲ್ಲಿ ನೇರವಾಗಿ ಬೆಂಗಳೂರು ಇಂಟರ್ ನ್ಯಾಷನಲ್ ಏರ್ಪೋರ್ಟ್ಗೆ ಬಂದಿದ್ದಾರೆ.
ಇನ್ನು, ಪತ್ನಿ ಸಮೇತ ಬಂದಿರೋ ಮಯಾಂಕ್ ಅಗರ್ವಾಲ್ ಏರ್ಪೋರ್ಟ್ನಿಂದ ನೇರ ತಮ್ಮ ಮನೆಗೆ ತೆಳುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಹೋಗಲಿದ್ದಾರೆ.
ನಿನ್ನೆ ತ್ರಿಪುರಾದಿಂದ ಸೂರತ್ಗೆ ತೆರಳುವ ವೇಳೆ ವಿಮಾನದಲ್ಲಿದ್ದ ನೀರು ಕುಡಿದ ಬಳಿಕ ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಬಾಯಿ ಹಾಗೂ ಗಂಟಲಲ್ಲಿ ಸುಟ್ಟ ಅನುಭವವಾದ ಬೆನ್ನಲ್ಲೇ, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಗರ್ತಲಾದ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದ ಮಯಾಂಕ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಯಾಂಕ್ ಪೋಸ್ಟ್ ಮಾಡಿದ್ದು, ನಾನು ಆರೋಗ್ಯವಾಗಿದ್ದಿನಿ ಎಂದು ಬರೆದುಕೊಂಡಿದ್ದಾರೆ.
ಇನ್ನು, ಇಂದು ಬೆಳಗ್ಗೆ ಪ್ರಕರಣಕ್ಕೆ ಸಂಬಂದಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮ್ಮ ಮ್ಯಾನೇಜರ್ ಮೂಲಕ ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆಗಾಗಿ NCCPS ಅಡಿಯಲ್ಲಿ ದೂರು ದಾಖಲಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇತ್ತೀಚೆಗೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಮಯಾಂಕ್
ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ಮಯಾಂಕ್ ಅಗರ್ವಾಲ್
ತ್ರಿಪುರಾದಿಂದ ಬೆಂಗಳೂರಿಗೆ ಬಂದ ಕರ್ನಾಟಕದ ಸ್ಟಾರ್ ಕ್ರಿಕೆಟರ್
ತ್ರಿಪುರಾ: ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ಟೀಮ್ ಇಂಡಿಯಾ ಕ್ರಿಕೆಟಿಗ, ಕರ್ನಾಟಕ ರಣಜಿ ತಂಡದ ನಾಯಕ ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಈಗ ಬೆಂಗಳೂರಿಗೆ ಸೇಫ್ ಆಗಿ ಬಂದಿದ್ದಾರೆ. ತ್ರಿಪುರಾದಲ್ಲಿ ವಿಮಾನದಲ್ಲಿ ನೇರವಾಗಿ ಬೆಂಗಳೂರು ಇಂಟರ್ ನ್ಯಾಷನಲ್ ಏರ್ಪೋರ್ಟ್ಗೆ ಬಂದಿದ್ದಾರೆ.
ಇನ್ನು, ಪತ್ನಿ ಸಮೇತ ಬಂದಿರೋ ಮಯಾಂಕ್ ಅಗರ್ವಾಲ್ ಏರ್ಪೋರ್ಟ್ನಿಂದ ನೇರ ತಮ್ಮ ಮನೆಗೆ ತೆಳುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಹೋಗಲಿದ್ದಾರೆ.
ನಿನ್ನೆ ತ್ರಿಪುರಾದಿಂದ ಸೂರತ್ಗೆ ತೆರಳುವ ವೇಳೆ ವಿಮಾನದಲ್ಲಿದ್ದ ನೀರು ಕುಡಿದ ಬಳಿಕ ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಬಾಯಿ ಹಾಗೂ ಗಂಟಲಲ್ಲಿ ಸುಟ್ಟ ಅನುಭವವಾದ ಬೆನ್ನಲ್ಲೇ, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಗರ್ತಲಾದ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದ ಮಯಾಂಕ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಯಾಂಕ್ ಪೋಸ್ಟ್ ಮಾಡಿದ್ದು, ನಾನು ಆರೋಗ್ಯವಾಗಿದ್ದಿನಿ ಎಂದು ಬರೆದುಕೊಂಡಿದ್ದಾರೆ.
ಇನ್ನು, ಇಂದು ಬೆಳಗ್ಗೆ ಪ್ರಕರಣಕ್ಕೆ ಸಂಬಂದಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮ್ಮ ಮ್ಯಾನೇಜರ್ ಮೂಲಕ ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆಗಾಗಿ NCCPS ಅಡಿಯಲ್ಲಿ ದೂರು ದಾಖಲಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ