newsfirstkannada.com

ಬೆಂಗಳೂರಲ್ಲಿ ಟ್ಯಾಂಕರ್​ ಡಿಕ್ಕಿ ಹೊಡೆದು MBBS ವಿದ್ಯಾರ್ಥಿ ಸಾವು.. ಸ್ನೇಹಿತನ ಭೇಟಿಗೆ ಬಂದಾಗ ದುರಂತ

Share :

Published July 19, 2024 at 8:22am

    ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ

    ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸಂಭವಿಸಿದ ಅಪಘಾತ

    ಮಗನ ಕಳೆದುಕೊಂಡು ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಬೆಂಗಳೂರು: ವಾಟರ್ ಟ್ಯಾಂಕರ್ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಬಿಎಸ್ ವಿದ್ಯಾರ್ಥಿ ಬಲಿಯಾದ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಶಾನ್ (23) ಮೃತ ಎಂಬಿಬಿಎಸ್ ವಿದ್ಯಾರ್ಥಿ.

ನಿನ್ನೆ ಸಂಜೆ ಇಶಾನ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬಂದ ಟ್ಯಾಂಕರ್​ ಭೀಕರವಾಗಿ ಡಿಕ್ಕಿ ಹೊಡೆದಿದೆ. ಟ್ಯಾಂಕರ್​ ಗುದ್ದಿದ ಪರಿಣಾಮ ಇಶಾನ್ ನೆಲಕ್ಕೆ ಬಿದ್ದಿದ್ದಾರೆ. ಆಗ ಟ್ಯಾಂಕರ್​ ಚಕ್ರಗಳು ಇಶಾನ್ ಮೇಲೆ ಹರಿದಿದೆ. ಅಪಘಾತ ಬೆನ್ನಲ್ಲೇ ಚಾಲಕ ಪರಾರಿಯಾಗಲು ಯತ್ನಿಸಿದ್ದ. ನಂತರ ಬೈಕ್ ಸವಾರರು ಫಾಲೋ ಮಾಡಿ ನಿಲ್ಲಿಸಿದ್ದಾರೆ. ಟ್ಯಾಂಕರ್ ಸವಾರನ ನಡೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ:ಉತ್ತರ ಕನ್ನಡ ಜಿಲ್ಲೆಗೆ ಮಳೆ ಕಂಟಕ.. 18 ಕಾಳಜಿ ಕೇಂದ್ರಗಳಲ್ಲಿ ಸಂತ್ರಸ್ತರ ಆರೈಕೆ.. ಭಾರೀ ಪ್ರವಾಹದ ಭೀತಿ..

ಮಾನ್ಯತ ಟೆಕ್​ಪಾರ್ಕ್​​ನಲ್ಲಿ ಮೃತ ವ್ಯಕ್ತಿಯ ಕುಟುಂಬ ವಾಸವಿದೆ. ವಿಷಯ ತಿಳಿದು ಕುಟುಂಬಸ್ಥರು ದುರ್ಘಟನಾ ಸ್ಥಳಕ್ಕೆ ಆಗಮಿಸಿದ್ದರು. ಮಗನ ಮೃತದೇಹ ನೋಡಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅದರಲ್ಲೂ ಇಶಾನ್ ತಾಯಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಶಾನ್ ಎಂಬಿಬಿಎಸ್ ಫೈನಲ್ ಇಯರ್ ಸ್ಟೂಡೆಂಟ್ ಆಗಿದ್ದ. ನಿನ್ನೆ ಸ್ನೇಹಿತನನ್ನ ಮೀಟ್ ಆಗಲು ಥಣಿಸಂದ್ರ ಬಳಿ ಬಂದಿದ್ದ. ಈ ವೇಳೆ ದುರ್ಘಟನೆ ನಡೆದು ಸಾವು ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:ಎಲ್ಲೆಲ್ಲೂ ಮಳೆಯ ಆರ್ಭಟ.. ಶಾಲಾ-ಕಾಲೇಜುಗಳಿಗೆ ಇವತ್ತೂ ರಜೆ.. ಮತ್ತೆ ಎಲ್ಲೆಲ್ಲಿ ಭಾರೀ ಅನಾಹುತ ಆಗಿದೆ..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಲ್ಲಿ ಟ್ಯಾಂಕರ್​ ಡಿಕ್ಕಿ ಹೊಡೆದು MBBS ವಿದ್ಯಾರ್ಥಿ ಸಾವು.. ಸ್ನೇಹಿತನ ಭೇಟಿಗೆ ಬಂದಾಗ ದುರಂತ

https://newsfirstlive.com/wp-content/uploads/2024/07/WATER-TANK-1-1.jpg

    ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ

    ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸಂಭವಿಸಿದ ಅಪಘಾತ

    ಮಗನ ಕಳೆದುಕೊಂಡು ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಬೆಂಗಳೂರು: ವಾಟರ್ ಟ್ಯಾಂಕರ್ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಬಿಎಸ್ ವಿದ್ಯಾರ್ಥಿ ಬಲಿಯಾದ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಶಾನ್ (23) ಮೃತ ಎಂಬಿಬಿಎಸ್ ವಿದ್ಯಾರ್ಥಿ.

ನಿನ್ನೆ ಸಂಜೆ ಇಶಾನ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬಂದ ಟ್ಯಾಂಕರ್​ ಭೀಕರವಾಗಿ ಡಿಕ್ಕಿ ಹೊಡೆದಿದೆ. ಟ್ಯಾಂಕರ್​ ಗುದ್ದಿದ ಪರಿಣಾಮ ಇಶಾನ್ ನೆಲಕ್ಕೆ ಬಿದ್ದಿದ್ದಾರೆ. ಆಗ ಟ್ಯಾಂಕರ್​ ಚಕ್ರಗಳು ಇಶಾನ್ ಮೇಲೆ ಹರಿದಿದೆ. ಅಪಘಾತ ಬೆನ್ನಲ್ಲೇ ಚಾಲಕ ಪರಾರಿಯಾಗಲು ಯತ್ನಿಸಿದ್ದ. ನಂತರ ಬೈಕ್ ಸವಾರರು ಫಾಲೋ ಮಾಡಿ ನಿಲ್ಲಿಸಿದ್ದಾರೆ. ಟ್ಯಾಂಕರ್ ಸವಾರನ ನಡೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ:ಉತ್ತರ ಕನ್ನಡ ಜಿಲ್ಲೆಗೆ ಮಳೆ ಕಂಟಕ.. 18 ಕಾಳಜಿ ಕೇಂದ್ರಗಳಲ್ಲಿ ಸಂತ್ರಸ್ತರ ಆರೈಕೆ.. ಭಾರೀ ಪ್ರವಾಹದ ಭೀತಿ..

ಮಾನ್ಯತ ಟೆಕ್​ಪಾರ್ಕ್​​ನಲ್ಲಿ ಮೃತ ವ್ಯಕ್ತಿಯ ಕುಟುಂಬ ವಾಸವಿದೆ. ವಿಷಯ ತಿಳಿದು ಕುಟುಂಬಸ್ಥರು ದುರ್ಘಟನಾ ಸ್ಥಳಕ್ಕೆ ಆಗಮಿಸಿದ್ದರು. ಮಗನ ಮೃತದೇಹ ನೋಡಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅದರಲ್ಲೂ ಇಶಾನ್ ತಾಯಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಶಾನ್ ಎಂಬಿಬಿಎಸ್ ಫೈನಲ್ ಇಯರ್ ಸ್ಟೂಡೆಂಟ್ ಆಗಿದ್ದ. ನಿನ್ನೆ ಸ್ನೇಹಿತನನ್ನ ಮೀಟ್ ಆಗಲು ಥಣಿಸಂದ್ರ ಬಳಿ ಬಂದಿದ್ದ. ಈ ವೇಳೆ ದುರ್ಘಟನೆ ನಡೆದು ಸಾವು ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:ಎಲ್ಲೆಲ್ಲೂ ಮಳೆಯ ಆರ್ಭಟ.. ಶಾಲಾ-ಕಾಲೇಜುಗಳಿಗೆ ಇವತ್ತೂ ರಜೆ.. ಮತ್ತೆ ಎಲ್ಲೆಲ್ಲಿ ಭಾರೀ ಅನಾಹುತ ಆಗಿದೆ..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More