/newsfirstlive-kannada/media/post_attachments/wp-content/uploads/2025/05/Bangalore-Rains.jpg)
ಬೆಂಗಳೂರು: ಒಂದು ಕಡೆ ಬಿಸಿಲು, ಮತ್ತೊಂದು ಕಡೆ ಸಿಲಿಕಾನ್ ಸಿಟಿಯಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಇಷ್ಟು ದಿನ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ಕೊಟ್ಟಿದೆ.
ಇದನ್ನೂ ಓದಿ:ಸೀತಾರಾಮ ತಂಡದಿಂದ ಬಿಗ್ ಶಾಕ್.. ವೀಕ್ಷಕರಿಗೆ ಗುಡ್ ಬೈ ಹೇಳಲು ಮುಂದಾದ ಟಾಪ್ ಸೀರಿಯಲ್
ಇಂದಿನಿಂದ ರಾಜ್ಯದ ಹಲವೆಡೆ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಇಂದಿನಿಂದ ಅಂದರೆ ಮೇ 22.ರಿಂದ 27ರ ತನಕ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಮೇತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಆದ್ರೆ ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಉತ್ತರ ಕನ್ನಡ,ದಕ್ಷಿಣ ಕನ್ನಡ,ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗೋ ಸಾಧ್ಯತೆ ಇದೆ. ಹೀಗಾಗಿ ಈ ಮೇಲಿನ ಜಿಲ್ಲೆಗಳಿಗೆ ಇಂದಿನಿಂದ ಮೆ.26ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ