newsfirstkannada.com

ರಾಜ್ಯದ ಜನತೆಗೆ ಬಿಗ್​ ಶಾಕ್​​.. ತರಕಾರಿ ಬೆನ್ನಲ್ಲೇ ಪ್ರತೀ ಲೀಟರ್​ ಹಾಲಿಗೆ 3 ರೂ. ಏರಿಕೆ

Share :

21-07-2023

    ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದ ಜನ

    ರಾಜ್ಯದ ಜನತೆಗೆ ಮತ್ತೊಂದು ಶಾಕಿಂಗ್​ ನ್ಯೂಸ್​​

    ತರಕಾರಿ ಬೆನ್ನಲ್ಲೇ ಪ್ರತೀ ಲೀಟರ್​ ಹಾಲಿಗೆ 3 ರೂ. ಏರಿಕೆ

ಬೆಂಗಳೂರು: ತರಕಾರಿ ಬೆಲೆ ಏರಿಕೆಯಿಂದ ತತ್ತರಿಸಿದ ಹೋಗಿರೋ ರಾಜ್ಯದ ಜನತೆಗೆ ಮತ್ತೊಂದು ಶಾಕಿಂಗ್​ ನ್ಯೂಸ್​ ಇದೆ. ಇನ್ನು ಪ್ರತಿ ಲೀಟರ್​ ಹಾಲಿಗೆ 3 ರೂ. ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಹಾಲಿನ ದರ ಏರಿಕೆ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದೆ. ಈ ಸಭೆಯಲ್ಲಿ ಹಾಲಿನ ದರ ಏರಿಕೆಗೆ ಒಮ್ಮತದ ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಮುಂದಿನ ತಿಂಗಳು ಆಗಸ್ಟ್​ 1ನೇ ತಾರೀಕಿನಿಂದಲೇ ಪರಿಷ್ಕೃತ ಹಾಲಿನ ದರ ಚಾಲ್ತಿಗೆ ಬರಲಿದೆ.

ಇನ್ನು, ಪ್ರತಿ ಲೀಟರ್​ಗೆ 5ರೂ ಹೆಚ್ಚಳ ಮಾಡುವಂತೆ ಒಕ್ಕೂಟಗಳಿಂದ ಕೆಎಂಎಫ್​ಗೆ ಮನವಿ ಮಾಡಲಾಗಿತ್ತು. ಹೀಗಾಗಿ ಉತ್ಪಾದಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದರ ಏರಿಕೆಗೆ ಕೆಎಂಎಫ್ ಬೋರ್ಡ್ ಸಮ್ಮತಿ ನೀಡಿತ್ತು. ಈ ಬಗ್ಗೆ ಸಿಎಂ ಜೊತೆ ಸಭೆ ನಡೆಸಿದ ಕೆಎಂಎಫ್ ಅಧಿಕಾರಿಗಳು ಹಾಲಿನ ದರ ಲೀಟರ್​ಗೆ 5. ರೂ ಹೆಚ್ಚಳಕ್ಕೆ ಪ್ರಸ್ತಾಪ ಇಡಲಾಗಿತ್ತು. ಆದರೆ, ಕೊನೆಗೆ 3 ರೂ. ಏರಿಕೆಗೆ ಸಿಎಂ ಗ್ರೀನ್​ ಸಿಗ್ನಲ್​ ನೀಡಿದ್ದಾರೆ.

ಇನ್ನು, ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿರುವ ಮಾಜಿ ಸಚಿವ ಹೆಚ್​​.ಡಿ ರೇವಣ್ಣ, ಹಾಲು ಒಕ್ಕೂಟವು 5 ರೂಪಾಯಿ ಹೆಚ್ಚಳಕ್ಕೆ ಸರ್ಕಾರದ ಮುಂದೆ ಬೇಡಿಕೆ ಇಟ್ಟಿತ್ತು. ನಾವು ಚರ್ಚೆ ಮಾಡಿದಾಗ ಸಿಎಂ ಸಿದ್ದರಾಮಯ್ಯ 3 ರೂ. ಹೆಚ್ಚಳಕ್ಕೆ ಒಪ್ಪಿಗೆ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯದ ಜನತೆಗೆ ಬಿಗ್​ ಶಾಕ್​​.. ತರಕಾರಿ ಬೆನ್ನಲ್ಲೇ ಪ್ರತೀ ಲೀಟರ್​ ಹಾಲಿಗೆ 3 ರೂ. ಏರಿಕೆ

https://newsfirstlive.com/wp-content/uploads/2023/07/milk-4.jpg

    ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದ ಜನ

    ರಾಜ್ಯದ ಜನತೆಗೆ ಮತ್ತೊಂದು ಶಾಕಿಂಗ್​ ನ್ಯೂಸ್​​

    ತರಕಾರಿ ಬೆನ್ನಲ್ಲೇ ಪ್ರತೀ ಲೀಟರ್​ ಹಾಲಿಗೆ 3 ರೂ. ಏರಿಕೆ

ಬೆಂಗಳೂರು: ತರಕಾರಿ ಬೆಲೆ ಏರಿಕೆಯಿಂದ ತತ್ತರಿಸಿದ ಹೋಗಿರೋ ರಾಜ್ಯದ ಜನತೆಗೆ ಮತ್ತೊಂದು ಶಾಕಿಂಗ್​ ನ್ಯೂಸ್​ ಇದೆ. ಇನ್ನು ಪ್ರತಿ ಲೀಟರ್​ ಹಾಲಿಗೆ 3 ರೂ. ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಹಾಲಿನ ದರ ಏರಿಕೆ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದೆ. ಈ ಸಭೆಯಲ್ಲಿ ಹಾಲಿನ ದರ ಏರಿಕೆಗೆ ಒಮ್ಮತದ ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಮುಂದಿನ ತಿಂಗಳು ಆಗಸ್ಟ್​ 1ನೇ ತಾರೀಕಿನಿಂದಲೇ ಪರಿಷ್ಕೃತ ಹಾಲಿನ ದರ ಚಾಲ್ತಿಗೆ ಬರಲಿದೆ.

ಇನ್ನು, ಪ್ರತಿ ಲೀಟರ್​ಗೆ 5ರೂ ಹೆಚ್ಚಳ ಮಾಡುವಂತೆ ಒಕ್ಕೂಟಗಳಿಂದ ಕೆಎಂಎಫ್​ಗೆ ಮನವಿ ಮಾಡಲಾಗಿತ್ತು. ಹೀಗಾಗಿ ಉತ್ಪಾದಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದರ ಏರಿಕೆಗೆ ಕೆಎಂಎಫ್ ಬೋರ್ಡ್ ಸಮ್ಮತಿ ನೀಡಿತ್ತು. ಈ ಬಗ್ಗೆ ಸಿಎಂ ಜೊತೆ ಸಭೆ ನಡೆಸಿದ ಕೆಎಂಎಫ್ ಅಧಿಕಾರಿಗಳು ಹಾಲಿನ ದರ ಲೀಟರ್​ಗೆ 5. ರೂ ಹೆಚ್ಚಳಕ್ಕೆ ಪ್ರಸ್ತಾಪ ಇಡಲಾಗಿತ್ತು. ಆದರೆ, ಕೊನೆಗೆ 3 ರೂ. ಏರಿಕೆಗೆ ಸಿಎಂ ಗ್ರೀನ್​ ಸಿಗ್ನಲ್​ ನೀಡಿದ್ದಾರೆ.

ಇನ್ನು, ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿರುವ ಮಾಜಿ ಸಚಿವ ಹೆಚ್​​.ಡಿ ರೇವಣ್ಣ, ಹಾಲು ಒಕ್ಕೂಟವು 5 ರೂಪಾಯಿ ಹೆಚ್ಚಳಕ್ಕೆ ಸರ್ಕಾರದ ಮುಂದೆ ಬೇಡಿಕೆ ಇಟ್ಟಿತ್ತು. ನಾವು ಚರ್ಚೆ ಮಾಡಿದಾಗ ಸಿಎಂ ಸಿದ್ದರಾಮಯ್ಯ 3 ರೂ. ಹೆಚ್ಚಳಕ್ಕೆ ಒಪ್ಪಿಗೆ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More