ಬೆಂಗಳೂರಿನಲ್ಲಿ ತಮಿಳುನಾಡು ನಟೋರಿಯಸ್ ರೌಡಿ ಮೇಲೆ ಅಟ್ಯಾಕ್
ಮಾಜಿ ಸಿಎಂ ಕರುಣಾನಿಧಿ ಪುತ್ರ ಎಂ.ಕೆ ಅಳಗಿರಿ ಆಪ್ತನ ಮೇಲೆ ಹಲ್ಲೆ!
ಲಾಂಗ್ನಿಂದ ಕೊಚ್ಚಿ ಎಸ್ಕೇಪ್ ಆದ ಹಂತಕರು, ರೌಡಿ ಸ್ಥಿತಿ ಗಂಭೀರ
ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಪುತ್ರ ಎಂ.ಕೆ ಅಳಗಿರಿ ಆಪ್ತ ವಿಕೆ ಗುರುಸ್ವಾಮಿ ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಬಾಣಸವಾಡಿಯ ಕಮ್ಮನಹಳ್ಳಿ ಸುಖಸಾಗರ್ ಹೊಟೇಲ್ನಲ್ಲಿ ಟೀ ಕುಡಿಯುವಾಗ ಗುರುಸ್ವಾಮಿಗೆ ಲಾಂಗ್ನಿಂದ ಹಲ್ಲೆ ನಡೆಸಲಾಗಿದೆ.
ಸದ್ಯ ಗುರುಸ್ವಾಮಿ ತಲೆ ಭಾಗಕ್ಕೆ ತೀವ್ರವಾಗಿ ಪೆಟ್ಟಾಗಿದೆ. ಹೀಗಾಗಿ ಚಿಕಿತ್ಸೆಗಾಗಿ ಗುರುಸ್ವಾಮಿ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ತಮಿಳುನಾಡಿನಿಂದ ಕಾರಿನಲ್ಲೇ ಫಾಲೋ ಮಾಡಿಕೊಂಡು ಬಂದಿದ್ದ ಐವರು ಹಂತಕರು ಈ ಕೃತ್ಯ ಎಸಗಿದ್ದಾರೆ.
ವಿ.ಕೆ ಗುರುಸ್ವಾಮಿ ಮಧುರೈ ಮೂಲದವರು. ಮಧುರೈ ಕಾರ್ಪೊರೇಷನ್ ಮಾಜಿ ಅಧ್ಯಕ್ಷ ಆಗಿದ್ದರು. ಕೊಲೆ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿರುವ ವಿವಿಧ ಪ್ರಕರಣಗಳಲ್ಲಿ ಗುರುಸ್ವಾಮಿ ಆರೋಪಿ. ತಮಿಳುನಾಡಿನ ನಟೋರಿಯಸ್ ರೌಡಿ.
ಲಿಟಿಗೇಷನ್ ಇರೋ ಸೈಟ್ ವಿಚಾರವಾಗಿ ಮಾತುಕತೆಗೆ ಬಂದಿದ್ದ. ಹೋಟೆಲ್ವೊಂದರಲ್ಲಿ ರೂಮ್ ಮಾಡಿಕೊಂಡು ಇದ್ದ. ಇಡೀ ದಿನ ಮನೆಯೊಂದು ಹುಡುಕಿ ಸೈಟ್ ಬಗ್ಗೆ ಗುರುಸ್ವಾಮಿ ಮಾತಾಡುತ್ತಿದ್ದರು. ಬ್ರೋಕರ್ ಜತೆ ಮಾತಾಡುವಾಗ ತಮಿಳುನಾಡು ರಿಜಿಸ್ಟ್ರೇಷನ್ ಆಗಿರೋ ಕಾರಿನಲ್ಲಿ ಬಂದು ಅಟ್ಯಾಕ್ ಮಾಡಿದ್ದಾರೆ. ಸದ್ಯ ಸ್ಥಳಕ್ಕೆ ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬೆಂಗಳೂರಿನಲ್ಲಿ ತಮಿಳುನಾಡು ನಟೋರಿಯಸ್ ರೌಡಿ ಮೇಲೆ ಅಟ್ಯಾಕ್
ಮಾಜಿ ಸಿಎಂ ಕರುಣಾನಿಧಿ ಪುತ್ರ ಎಂ.ಕೆ ಅಳಗಿರಿ ಆಪ್ತನ ಮೇಲೆ ಹಲ್ಲೆ!
ಲಾಂಗ್ನಿಂದ ಕೊಚ್ಚಿ ಎಸ್ಕೇಪ್ ಆದ ಹಂತಕರು, ರೌಡಿ ಸ್ಥಿತಿ ಗಂಭೀರ
ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಪುತ್ರ ಎಂ.ಕೆ ಅಳಗಿರಿ ಆಪ್ತ ವಿಕೆ ಗುರುಸ್ವಾಮಿ ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಬಾಣಸವಾಡಿಯ ಕಮ್ಮನಹಳ್ಳಿ ಸುಖಸಾಗರ್ ಹೊಟೇಲ್ನಲ್ಲಿ ಟೀ ಕುಡಿಯುವಾಗ ಗುರುಸ್ವಾಮಿಗೆ ಲಾಂಗ್ನಿಂದ ಹಲ್ಲೆ ನಡೆಸಲಾಗಿದೆ.
ಸದ್ಯ ಗುರುಸ್ವಾಮಿ ತಲೆ ಭಾಗಕ್ಕೆ ತೀವ್ರವಾಗಿ ಪೆಟ್ಟಾಗಿದೆ. ಹೀಗಾಗಿ ಚಿಕಿತ್ಸೆಗಾಗಿ ಗುರುಸ್ವಾಮಿ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ತಮಿಳುನಾಡಿನಿಂದ ಕಾರಿನಲ್ಲೇ ಫಾಲೋ ಮಾಡಿಕೊಂಡು ಬಂದಿದ್ದ ಐವರು ಹಂತಕರು ಈ ಕೃತ್ಯ ಎಸಗಿದ್ದಾರೆ.
ವಿ.ಕೆ ಗುರುಸ್ವಾಮಿ ಮಧುರೈ ಮೂಲದವರು. ಮಧುರೈ ಕಾರ್ಪೊರೇಷನ್ ಮಾಜಿ ಅಧ್ಯಕ್ಷ ಆಗಿದ್ದರು. ಕೊಲೆ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿರುವ ವಿವಿಧ ಪ್ರಕರಣಗಳಲ್ಲಿ ಗುರುಸ್ವಾಮಿ ಆರೋಪಿ. ತಮಿಳುನಾಡಿನ ನಟೋರಿಯಸ್ ರೌಡಿ.
ಲಿಟಿಗೇಷನ್ ಇರೋ ಸೈಟ್ ವಿಚಾರವಾಗಿ ಮಾತುಕತೆಗೆ ಬಂದಿದ್ದ. ಹೋಟೆಲ್ವೊಂದರಲ್ಲಿ ರೂಮ್ ಮಾಡಿಕೊಂಡು ಇದ್ದ. ಇಡೀ ದಿನ ಮನೆಯೊಂದು ಹುಡುಕಿ ಸೈಟ್ ಬಗ್ಗೆ ಗುರುಸ್ವಾಮಿ ಮಾತಾಡುತ್ತಿದ್ದರು. ಬ್ರೋಕರ್ ಜತೆ ಮಾತಾಡುವಾಗ ತಮಿಳುನಾಡು ರಿಜಿಸ್ಟ್ರೇಷನ್ ಆಗಿರೋ ಕಾರಿನಲ್ಲಿ ಬಂದು ಅಟ್ಯಾಕ್ ಮಾಡಿದ್ದಾರೆ. ಸದ್ಯ ಸ್ಥಳಕ್ಕೆ ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ