BREAKING: ಬಿಜೆಪಿ ಶಾಸಕ ಮುನಿರತ್ನ ಬಂಧನ; ಕಾರಣವೇನು?

author-image
Bheemappa
Updated On
ಬಿಜೆಪಿ ಶಾಸಕ ಮುನಿರತ್ನಗಿಲ್ಲ ರಿಲೀಫ್.. ಜಾಮೀನು ಸಿಕ್ಕರೂ ಮತ್ತೆ ವಶಕ್ಕೆ ಪಡೆಯಲು ಪೊಲೀಸರು ಸಿದ್ಧತೆ
Advertisment
  • ಆಂಧ್ರದ ಚಿತ್ತೂರಿಗೆ ತೆರಳುವಾಗ ಅರೆಸ್ಟ್ ಮಾಡಿದ ಪೊಲೀಸರು
  • ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ಬಂಧನ
  • ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ FIR ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಾಜಿ ಸಚಿವ ಮುನಿರತ್ನ ವಿರುದ್ಧ ಗುತ್ತಿಗೆದಾರ ಚೆಲುವರಾಜು ಎಂಬುವವರು ಜೀವ ಬೆದರಿಕೆ ಆರೋಪ ಮಾಡಿ ದೂರು ನೀಡಿದ್ದರು. ವೈಯಾಲಿಕಾವಲ್ ಪೊಲೀಸ್‌ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಇದನ್ನೂ ಓದಿ: ನಾಗಮಂಗಲದಲ್ಲಿ ಅಮಾಯಕರನ್ನು ಬಂಧಿಸಿದ್ದಕ್ಕೂ ಕಾರಣ ಇದೆ.. ಸಚಿವ ಚೆಲುವರಾಯಸ್ವಾಮಿ ಶಾಕಿಂಗ್ ಉತ್ತರ! 

publive-image

ಜೀವ ಬೆದರಿಕೆ ಆರೋಪದ ಜೊತೆಗೆ ಶಾಸಕ ಮುನಿರತ್ನ ವಿರುದ್ಧ ವೇಲು ನಾಯ್ಕರ್​ರಿಂದ ಜಾತಿ ನಿಂದನೆ ಆರೋಪ ಕೇಳಿ ಬಂದಿತ್ತು. ಜಾತಿ ನಿಂದನೆ ಆರೋಪದಲ್ಲೂ ಮತ್ತೊಂದು ಕೇಸ್ ದಾಖಲಾಗಿದೆ. ಶಾಸಕ ಮುನಿರತ್ನ ವಿರುದ್ಧ ಜೀವ ಬೆದರಿಕೆ ಆರೋಪದಲ್ಲಿ ಗುತ್ತಿಗೆದಾರ ಚೆಲುವರಾಜು ದೂರಿನ ಆಧಾರದಲ್ಲಿ ಎಫ್​ಐಆರ್ ದಾಖಲಾಗಿತ್ತು. ಜೀವ ಬೆದರಿಕೆ ಕೇಸ್​ನಲ್ಲಿ ಎ1 - ಮುನಿರತ್ನ, ಮಾಜಿ ಸಚಿವ, ಎ2 - ವಿ.ಜಿ. ಕುಮಾರ್, ಆಪ್ತ ಸಹಾಯಕ, ಎ3 - ಅಭಿಷೇಕ್, ಸೆಕ್ಯೂರಿಟಿ, ಎ4 - ವಸಂತ್ ಕುಮಾರ್ ವಿರುದ್ಧ ಕೇಸ್ ಹಾಕಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment