newsfirstkannada.com

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ಬಂಧಿತರ ರಿಲೀಸ್​ಗೆ ತನ್ವೀರ್ ಸೇಠ್ ಪತ್ರ; ಬಿಡುಗಡೆ ಬಗ್ಗೆ ಪರಿಶೀಲಿಸಲು ಗೃಹ ಸಚಿವರಿಂದ ಆದೇಶ

Share :

26-07-2023

    ಅಮಾಯಕ ಯುವಕರ ಬಂಧನ ಆಗಿದೆ-ತನ್ವೀರ್ ಸೇಠ್

    ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಗೃಹ ಸಚಿವರು ಪತ್ರ

    ‘ಪರಿಣಾಮ ನೆಟ್ಟಗಿರಲ್ಲ’ ಎಂದ ಮಾಜಿ ಸಚಿವ ಸುನಿಲ್ ಕುಮಾರ್

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಗಲಭೆಯಲ್ಲಿ ಬಂಧಿತರಾಗಿರೋರನ್ನು ನಿಯಮಾನುಸಾರ ಬಿಡುಗಡೆ ಮಾಡುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್​​ಗೆ ಮೈಸೂರು ಜಿಲ್ಲೆ ಶಾಸಕ ತನ್ವೀರ್ ಸೇಠ್ ಪತ್ರ ಬರೆದಿದ್ದಾರೆ.

ಶಾಸಕರ ಪತ್ರ ಬೆನ್ನಲ್ಲೇ ಗೃಹ ಸಚಿವರು ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಸುತ್ತೋಲೆ ಕಳುಹಿಸಿದ್ದಾರೆ. ಅದರಲ್ಲಿ ‘ಪರಿಶೀಲಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ’ ಸೂಚಿಸಿದ್ದಾರೆ ಎನ್ನಲಾಗಿದೆ.

ಗೃಹ ಸಚಿವರ ಆದೇಶದಲ್ಲಿ ಏನಿದೆ..?
ಶ್ರೀ ತನ್ವೀರ್ ಸೇಠ್, ಮಾನ್ಯ ಶಾಸಕರು ಹಾಗೂ ಮಾಜಿ ಸಚಿವರು, ನರಸಿಂಹರಾಜ ಕ್ಷೇತ್ರ. ಇವರು ಸಲ್ಲಿಸಿರುವ ಮನವಿಯನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಮನವಿಯಲ್ಲಿ ಬೆಂಗಳೂರು ನಗರದ ಡಿಜೆ ಹಳ್ಳಿ, ಕೆಜೆ ಹಳ್ಳಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ಇತರೆ ಕಡೆಗಳಲ್ಲಿ ನಡೆದ ಪ್ರತಿಭಟನೆ ಹಾಗೂ ಗಲಭೆಗಳಲ್ಲಿ ಅಮಾಯಕ ಯುವಕರು ಹಾಗೂ ವಿದ್ಯಾರ್ಥಿಗಳು ಸುಳ್ಳು ಮೊಕದ್ದಮೆಗಳಲ್ಲಿ ಬಂಧಿತರಾಗಿದ್ದು, ಸದರಿ ಮೊಕದ್ದಮೆಗಳನ್ನು ಮರು ಪರಿಶೀಲಿಸಿ ನಿಯಮಾನುಸಾರ ಹಿಂಪಡೆಯಲು ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ. ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ. -ಡಾ.ಜಿ.ಪರಮೇಶ್ವರ್, ಗೃಹ ಸಚಿವ

ಪರಿಣಾಮ ನೆಟ್ಟಗಿರುವುದಿಲ್ಲ-ಸುನಿಲ್ ಕುಮಾರ್

ಸರ್ಕಾರದ ಈ ಆದೇಶ ಬೆನಲ್ಲೇ ಬಿಜೆಪಿ ನಾಯಕ ಸುನಿಲ್ ಕುಮಾರ್ ಸರಣಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ. ಕೆಜಿಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆಯ ಮೇಲೆ ನಡೆದ ಗೂಂಡಾ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಪ್ರಕರಣವನ್ನು ಕೈ ಬಿಡುವಂತೆ ಶಾಸಕ ತನ್ವೀರ್ ಸೇಠ್ ಬರೆದ ಪತ್ರ ಆಧರಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪೊಲೀಸ್ ಇಲಾಖೆಗೆ ಬರೆದ ಪತ್ರ ಸಂಪೂರ್ಣವಾಗಿ ಕಾನೂನು ಬಾಹಿರ.

ಸರ್ಕಾರ ಮುಸ್ಲಿಂ ಓಲೈಕೆಗಾಗಿ ಸಂವಿಧಾನ ಬಾಹಿರವಾಗಿ ವರ್ತಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಕರ್ನಾಟಕದ ಪೊಲೀಸರು ಆಳುವ ಸರ್ಕಾರದ ಆಳುಗಳಂತೆ ವರ್ತಿಸುವುದಕ್ಕೆ ಮುನ್ನ ಅಂದು ನಡೆದ ಭೀಬತ್ಸ ಘಟನೆಯನ್ನು ನೆನೆಪು ಮಾಡಿಕೊಳ್ಳಲಿ. ಉಗ್ರ ಮನಸ್ಥಿತಿಯ ವ್ಯಕ್ತಿಗಳಿಗೆ ಅಮಾಯಕರ ಪಟ್ಟಕಟ್ಟಿ ದೇಶವನ್ನು ಸಿರಿಯಾ ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ಬಂಧಿತರ ರಿಲೀಸ್​ಗೆ ತನ್ವೀರ್ ಸೇಠ್ ಪತ್ರ; ಬಿಡುಗಡೆ ಬಗ್ಗೆ ಪರಿಶೀಲಿಸಲು ಗೃಹ ಸಚಿವರಿಂದ ಆದೇಶ

https://newsfirstlive.com/wp-content/uploads/2023/07/PARAMESHWAR-1.jpg

    ಅಮಾಯಕ ಯುವಕರ ಬಂಧನ ಆಗಿದೆ-ತನ್ವೀರ್ ಸೇಠ್

    ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಗೃಹ ಸಚಿವರು ಪತ್ರ

    ‘ಪರಿಣಾಮ ನೆಟ್ಟಗಿರಲ್ಲ’ ಎಂದ ಮಾಜಿ ಸಚಿವ ಸುನಿಲ್ ಕುಮಾರ್

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಗಲಭೆಯಲ್ಲಿ ಬಂಧಿತರಾಗಿರೋರನ್ನು ನಿಯಮಾನುಸಾರ ಬಿಡುಗಡೆ ಮಾಡುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್​​ಗೆ ಮೈಸೂರು ಜಿಲ್ಲೆ ಶಾಸಕ ತನ್ವೀರ್ ಸೇಠ್ ಪತ್ರ ಬರೆದಿದ್ದಾರೆ.

ಶಾಸಕರ ಪತ್ರ ಬೆನ್ನಲ್ಲೇ ಗೃಹ ಸಚಿವರು ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಸುತ್ತೋಲೆ ಕಳುಹಿಸಿದ್ದಾರೆ. ಅದರಲ್ಲಿ ‘ಪರಿಶೀಲಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ’ ಸೂಚಿಸಿದ್ದಾರೆ ಎನ್ನಲಾಗಿದೆ.

ಗೃಹ ಸಚಿವರ ಆದೇಶದಲ್ಲಿ ಏನಿದೆ..?
ಶ್ರೀ ತನ್ವೀರ್ ಸೇಠ್, ಮಾನ್ಯ ಶಾಸಕರು ಹಾಗೂ ಮಾಜಿ ಸಚಿವರು, ನರಸಿಂಹರಾಜ ಕ್ಷೇತ್ರ. ಇವರು ಸಲ್ಲಿಸಿರುವ ಮನವಿಯನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಮನವಿಯಲ್ಲಿ ಬೆಂಗಳೂರು ನಗರದ ಡಿಜೆ ಹಳ್ಳಿ, ಕೆಜೆ ಹಳ್ಳಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ಇತರೆ ಕಡೆಗಳಲ್ಲಿ ನಡೆದ ಪ್ರತಿಭಟನೆ ಹಾಗೂ ಗಲಭೆಗಳಲ್ಲಿ ಅಮಾಯಕ ಯುವಕರು ಹಾಗೂ ವಿದ್ಯಾರ್ಥಿಗಳು ಸುಳ್ಳು ಮೊಕದ್ದಮೆಗಳಲ್ಲಿ ಬಂಧಿತರಾಗಿದ್ದು, ಸದರಿ ಮೊಕದ್ದಮೆಗಳನ್ನು ಮರು ಪರಿಶೀಲಿಸಿ ನಿಯಮಾನುಸಾರ ಹಿಂಪಡೆಯಲು ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ. ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ. -ಡಾ.ಜಿ.ಪರಮೇಶ್ವರ್, ಗೃಹ ಸಚಿವ

ಪರಿಣಾಮ ನೆಟ್ಟಗಿರುವುದಿಲ್ಲ-ಸುನಿಲ್ ಕುಮಾರ್

ಸರ್ಕಾರದ ಈ ಆದೇಶ ಬೆನಲ್ಲೇ ಬಿಜೆಪಿ ನಾಯಕ ಸುನಿಲ್ ಕುಮಾರ್ ಸರಣಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ. ಕೆಜಿಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆಯ ಮೇಲೆ ನಡೆದ ಗೂಂಡಾ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಪ್ರಕರಣವನ್ನು ಕೈ ಬಿಡುವಂತೆ ಶಾಸಕ ತನ್ವೀರ್ ಸೇಠ್ ಬರೆದ ಪತ್ರ ಆಧರಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪೊಲೀಸ್ ಇಲಾಖೆಗೆ ಬರೆದ ಪತ್ರ ಸಂಪೂರ್ಣವಾಗಿ ಕಾನೂನು ಬಾಹಿರ.

ಸರ್ಕಾರ ಮುಸ್ಲಿಂ ಓಲೈಕೆಗಾಗಿ ಸಂವಿಧಾನ ಬಾಹಿರವಾಗಿ ವರ್ತಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಕರ್ನಾಟಕದ ಪೊಲೀಸರು ಆಳುವ ಸರ್ಕಾರದ ಆಳುಗಳಂತೆ ವರ್ತಿಸುವುದಕ್ಕೆ ಮುನ್ನ ಅಂದು ನಡೆದ ಭೀಬತ್ಸ ಘಟನೆಯನ್ನು ನೆನೆಪು ಮಾಡಿಕೊಳ್ಳಲಿ. ಉಗ್ರ ಮನಸ್ಥಿತಿಯ ವ್ಯಕ್ತಿಗಳಿಗೆ ಅಮಾಯಕರ ಪಟ್ಟಕಟ್ಟಿ ದೇಶವನ್ನು ಸಿರಿಯಾ ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More