/newsfirstlive-kannada/media/post_attachments/wp-content/uploads/2025/03/MLC-RAJENDRA.jpg)
ಕಳೆದ ನವೆಂಬರ್ನಲ್ಲಿ ನನ್ನ ಕೊಲೆಗೆ ಯತ್ನ ನಡೆದಿತ್ತು ಎಂದು ಆರೋಪಿಸಿದ್ದ ಸಚಿವ ಕೆ.ಎನ್ ರಾಜಣ್ಣ ಅವರ ಪುತ್ರ ಎಂಎಲ್ಸಿ ಸಿ ರಾಜೇಂದ್ರ ತುಮಕೂರು ಎಸ್ಪಿಗೆ ದೂರು ನೀಡಿದ್ದಾರೆ. ದೂರು ಕೊಟ್ಟ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿ ರಾಜೇಂದ್ರ, ನಾನು ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಗೆ ದೂರು ನೀಡಿದ್ದೇನೆ. ತುಮಕೂರು ಎಸ್ಪಿಗೆ ದೂರು ನೀಡುವಂತೆ ಸೂಚನೆ ಕೊಟ್ಟಿದ್ದರು. ಅದರಂತೆ ಇವತ್ತು ದೂರು ತುಮಕೂರು ಎಸ್ಪಿಗೆ ದೂರು ಕೊಟ್ಟಿದ್ದೇನೆ. ನನ್ನ ಮಗಳ ಬರ್ತ್ಡೇ ದಿನದಂದು ನನ್ನ ಕೊಲೆಗೆ ಯತ್ನಿಸಿದ್ದರು. ಕೊಲೆಗೆ 70 ಲಕ್ಷ ರೂಪಾಯಿ ಸುಪಾರಿ ನೀಡಲಾಗಿತ್ತು. ಅದರಲ್ಲಿ ಐದು ಲಕ್ಷ ರೂಪಾಯಿ ಪಡೆದಿದ್ದಾರೆ. ಇದೆಲ್ಲಾ ಆಡಿಯೋ ನನ್ನ ಬಳಿ ಇದೆ. ಒಂದು ಹುಡುಗಿ ಹುಡುಗನ ನಡುವೆ ನಡೆದ ಸಂಭಾಷಣೆ ಆಡಿಯೋ ಇದೆ. ಹೀಗಾಗಿ ಭದ್ರತೆ ಕೊಡಿ ಎಂದು ಕೂಡ ಪೊಲೀಸ್ ಇಲಾಖೆಗೆ ಕೇಳಿದ್ದೇನೆ ಎಂದು ಸಿ ರಾಜೇಂದ್ರ ಹೇಳಿದ್ದಾರೆ.
ನಾನು, ನಾನಾಗಲಿ ನನ್ನ ಕೆಲಸ ಆಗಲಿ ಅಂತ ಇದ್ದೋನು. ನನ್ನ ಮುಗಿಸಲು ಸುಪಾರಿ ಯಾಕೆ ಕೊಟ್ಟಿದ್ದಾರೆ ಅಂತ ಗೊತ್ತಿಲ್ಲ. ಸೋಮ ಮತ್ತು ಭರತ್ ಅನ್ನೋ ಹೆಸರು ಆಡಿಯೋದಲ್ಲಿದೆ. ಅವರಿಬ್ಬರು ಯಾರು ಅಂತ ಕೂಡ ನನಗೆ ಗೊತ್ತಿಲ್ಲ. ಲೇಡಿ ಮತ್ತು ಒಬ್ಬ ಹುಡುಗ ಮಾತಾಡಿರುವ ಆಡಿಯೋ ಅದು. 18 ನಿಮಿಷದ ಸಂಭಾಷಣೆ ಆಡಿಯೋದಲ್ಲಿದೆ. ಸುಪಾರಿ ಕೊಟ್ಟಿದ್ದಾರೆ ಹೊಡೆಯಬೇಕು ಅಂತ. ಇದರ ವಿಚಾರವೇನು ಎಂಬುದರ ಬಗ್ಗೆ ತನಿಖೆಯಾಗಬೇಕು. ಯಾವ ಕಾರಣಕ್ಕೆ ನನ್ನ ಮೇಲೆ ದ್ವೇಷ ಇದೆ ಎಂಬುದು ಗೊತ್ತಾಗಬೇಕು ಅಂತ ರಾಜೇಂದ್ರ ಹೇಳಿದ್ದಾರೆ.
ಇದನ್ನೂ ಓದಿ:ಹನಿಟ್ರ್ಯಾಪ್ ಕೇಸ್ಗೆ CID ಎಂಟ್ರಿ; ಸಚಿವ ರಾಜಣ್ಣ ಮನೆಯಲ್ಲಿ ತಲಾಷ್, ಹೊಸ ತಿರುವು..!
ಈ ಬಗ್ಗೆ ಮತಷ್ಟು ಮಾಹಿತಿ ಹಂಚಿಕೊಂಡಿರುವ ಎಂಎಲ್ಸಿ ರಾಜೇಂದ್ರ, ಜಿಪಿಎಸ್ ಚಿಪ್ ನನ್ನ ಕಾರಿಗೆ ಅಳವಡಿಸಬೇಕು ಅಂತಾ ಇದ್ರಂತೆ. ಜನವರಿಯಲ್ಲಿ ನನ್ನ ಸರ್ಕಲ್ನಲ್ಲಿ ಅದು ಸಿಕ್ತು. ನಾನು ತಮಾಷೆ ಅಂತ ಸುಮ್ಮನಾಗಿದ್ದೆ. ಆದ್ರೆ ಅದು ಗಂಭೀರ ವಿಷಯ ಎಂದು ಗೊತ್ತಾಗಿ ಈಗ ದೂರು ನೀಡಿದ್ದೇನೆ. ಹನಿಟ್ರ್ಯಾಪ್ ವಿಚಾರಾಗಿ ಸಿಐಡಿ ತನಿಖೆ ನಡೆಸುತ್ತಿದೆ. ಅವರು ನಿನ್ನೆ ಬೆಂಗಳೂರಿನ ಮನೆ ಹತ್ತಿರ ಬಂದಿದ್ದಾರೆ, ತನಿಖೆ ನಡೆಸುತ್ತಾರೆ. ಶಾಮಿಯಾನ ಹಾಕೋರು ನನ್ನ ಸ್ನೇಹಿತರೇ ಇದ್ದಾರೆ. ಸುಮ್ಮನೆ ಅವರನ್ನು ಎಳೆಯೋಕೆ ಇಷ್ಟವಿಲ್ಲ ಎಂದು ರಾಜೇಂದ್ರ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ