ಬೆನ್ನಿಗೆ ಬಾಸುಂಡೆ ಬರುವಂತೆ ಥಳಿಸಿದ ಆರೋಪ
ಬಜರಂಗದಳ ಕಾರ್ಯಕರ್ತರ ವಿರುದ್ಧ ಗಂಭೀರ ಆರೋಪ
ಕೇಸ್ ದಾಖಲಾಗ್ತಿದ್ದಂತೆ ಆರೋಪಿಗಳು ನಾಪತ್ತೆ ಆಗಿದ್ದಾರೆ
ಅನ್ಯ ಕೋಮಿನ ಯುವತಿ ಪ್ರೀತಿಸಿದ ವಿಚಾರಕ್ಕೆ ಯಾದಗಿರಿಯಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಬಜರಂಗದಳ ಸಂಘಟನೆ ಕಾರ್ಯಕರ್ತರು ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, 9 ಆರೋಪಿಗಳು ಯುವಕನನ್ನ ಹಿಡಿದು ಥಳಿಸಿದ್ದಾರೆ ಎನ್ನಲಾಗಿದೆ.
ಯಾದಗಿರಿ ನಗರದಲ್ಲಿ ಕಳೆದ ಎರಡು ದಿನಗಳ ಹಿಂದೆ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಲೇಜಿನಿಂದ ಮನೆಗೆ ಬರುತ್ತಿದ್ದ ಯುವಕನನ್ನು ಅಪಹರಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಬೆನ್ನಿಗೆ ಬಾಸುಂಡೆ ಬರುವ ರೀತಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿರೋ ಫೋಟೋ ವೈರಲ್ ಆಗಿದೆ. ಸತತ ಐದು ಗಂಟೆಗಳ ಕಾಲ ರೂಮ್ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಯಾದಗಿರಿ ನಗರದ ಗೋಗಿ ಮೊಹಲ್ಲಾ ನಿವಾಸಿ ವಾಹಿದ್ ಎಂಬ ಯುವಕ ನೈತಿಕ ಪೊಲೀಸ್ಗಿರಿಗೆ ಒಳಗಾಗಿದ್ದಾನೆ. ಹೊಟ್ಟೆಗೆ ಚಾಕು ಹಾಕಿ ಕೊಲೆ ಮಾಡಲು ಗ್ಯಾಂಗ್ ಯತ್ನಿಸಿದೆ ಎಂದು ಆರೋಪಿಸಿದ್ದಾನೆ. ತಪ್ಪಾಗಿದೆ ಅಂತ ಕಾಲಿಗೆ ಬಿದ್ದು ಜೀವ ಉಳಿಸಿಕೊಂಡಿದ್ದೇನೆ ಎಂದು ತಿಳಿಸಿದ್ದಾನೆ.
ಶಿವಕುಮಾರ್, ತಾಯಪ್ಪ, ಮಲ್ಲು, ಅಂಬರೀಶ್ ಸೇರಿ 9 ಆರೋಪಿಗಳು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಇವರ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 147, 148, 307, 323, 341, 342, 363, 504 ಹಾಗೂ 506 ಕಲಂ ಅಡಿಯಲ್ಲಿ ದೂರು ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬೆನ್ನಿಗೆ ಬಾಸುಂಡೆ ಬರುವಂತೆ ಥಳಿಸಿದ ಆರೋಪ
ಬಜರಂಗದಳ ಕಾರ್ಯಕರ್ತರ ವಿರುದ್ಧ ಗಂಭೀರ ಆರೋಪ
ಕೇಸ್ ದಾಖಲಾಗ್ತಿದ್ದಂತೆ ಆರೋಪಿಗಳು ನಾಪತ್ತೆ ಆಗಿದ್ದಾರೆ
ಅನ್ಯ ಕೋಮಿನ ಯುವತಿ ಪ್ರೀತಿಸಿದ ವಿಚಾರಕ್ಕೆ ಯಾದಗಿರಿಯಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಬಜರಂಗದಳ ಸಂಘಟನೆ ಕಾರ್ಯಕರ್ತರು ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, 9 ಆರೋಪಿಗಳು ಯುವಕನನ್ನ ಹಿಡಿದು ಥಳಿಸಿದ್ದಾರೆ ಎನ್ನಲಾಗಿದೆ.
ಯಾದಗಿರಿ ನಗರದಲ್ಲಿ ಕಳೆದ ಎರಡು ದಿನಗಳ ಹಿಂದೆ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಲೇಜಿನಿಂದ ಮನೆಗೆ ಬರುತ್ತಿದ್ದ ಯುವಕನನ್ನು ಅಪಹರಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಬೆನ್ನಿಗೆ ಬಾಸುಂಡೆ ಬರುವ ರೀತಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿರೋ ಫೋಟೋ ವೈರಲ್ ಆಗಿದೆ. ಸತತ ಐದು ಗಂಟೆಗಳ ಕಾಲ ರೂಮ್ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಯಾದಗಿರಿ ನಗರದ ಗೋಗಿ ಮೊಹಲ್ಲಾ ನಿವಾಸಿ ವಾಹಿದ್ ಎಂಬ ಯುವಕ ನೈತಿಕ ಪೊಲೀಸ್ಗಿರಿಗೆ ಒಳಗಾಗಿದ್ದಾನೆ. ಹೊಟ್ಟೆಗೆ ಚಾಕು ಹಾಕಿ ಕೊಲೆ ಮಾಡಲು ಗ್ಯಾಂಗ್ ಯತ್ನಿಸಿದೆ ಎಂದು ಆರೋಪಿಸಿದ್ದಾನೆ. ತಪ್ಪಾಗಿದೆ ಅಂತ ಕಾಲಿಗೆ ಬಿದ್ದು ಜೀವ ಉಳಿಸಿಕೊಂಡಿದ್ದೇನೆ ಎಂದು ತಿಳಿಸಿದ್ದಾನೆ.
ಶಿವಕುಮಾರ್, ತಾಯಪ್ಪ, ಮಲ್ಲು, ಅಂಬರೀಶ್ ಸೇರಿ 9 ಆರೋಪಿಗಳು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಇವರ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 147, 148, 307, 323, 341, 342, 363, 504 ಹಾಗೂ 506 ಕಲಂ ಅಡಿಯಲ್ಲಿ ದೂರು ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ