/newsfirstlive-kannada/media/post_attachments/wp-content/uploads/2025/07/accident6.jpg)
ಚಿಕ್ಕಮಂಗಳೂರು: ಪ್ರವಾಸಕ್ಕೆ ಹೋಗುತ್ತಿದ್ದ ಬಸ್ ಪಲ್ಟಿಯಾಗಿರೋ ಘಟನೆ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ:ಪದವಿ ಓದಿದವರಿಗೆ ಸಿಹಿ ಸುದ್ದಿ.. 1500 ಅಪ್ರೆಂಟಿಸ್ ಉದ್ಯೋಗಗಳಿಗೆ ಅರ್ಜಿ ಆಹ್ವಾನ
ಬಸ್ಸಿನಲ್ಲಿದ್ದ ಯುವತಿಯರು ಎಂ.ಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರಂತೆ. ವೀಕೆಂಡ್ ಹಿನ್ನೆಲೆ 40ಕ್ಕೂ ಹೆಚ್ಚು ಜನ ಟ್ರಕ್ಕಿಂಗ್ಗಾಗಿ ಬರುತ್ತಿದ್ದರು. ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸ ಹೋಗ್ತಿದ್ದ ವೇಳೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದರಿಂದ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಅಲ್ಲದೇ ಇಬ್ಬರ ಸ್ಥಿತಿ ಗಂಭೀರವಾಗಿದೆ.
ನೇತ್ರಾವತಿ ಪೀಕ್ ಟ್ರಕ್ಕಿಂಗ್ಗೆ ಬಂದಿದ್ದ ಯುವಕ, ಯುವತಿಯರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳಿಗೆ ಮೂಡಿಗೆರೆ, ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ