/newsfirstlive-kannada/media/post_attachments/wp-content/uploads/2025/07/accident6.jpg)
ಚಿಕ್ಕಮಂಗಳೂರು: ಪ್ರವಾಸಕ್ಕೆ ಹೋಗುತ್ತಿದ್ದ ಬಸ್​ ಪಲ್ಟಿಯಾಗಿರೋ ಘಟನೆ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ:ಪದವಿ ಓದಿದವರಿಗೆ ಸಿಹಿ ಸುದ್ದಿ.. 1500 ಅಪ್ರೆಂಟಿಸ್​ ಉದ್ಯೋಗಗಳಿಗೆ ಅರ್ಜಿ ಆಹ್ವಾನ
/newsfirstlive-kannada/media/post_attachments/wp-content/uploads/2025/07/accident5.jpg)
ಬಸ್ಸಿನಲ್ಲಿದ್ದ ಯುವತಿಯರು ಎಂ.ಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರಂತೆ. ವೀಕೆಂಡ್ ಹಿನ್ನೆಲೆ 40ಕ್ಕೂ ಹೆಚ್ಚು ಜನ ಟ್ರಕ್ಕಿಂಗ್​ಗಾಗಿ ಬರುತ್ತಿದ್ದರು. ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸ ಹೋಗ್ತಿದ್ದ ವೇಳೆ ​​ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದರಿಂದ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಅಲ್ಲದೇ ಇಬ್ಬರ ಸ್ಥಿತಿ ಗಂಭೀರವಾಗಿದೆ.
/newsfirstlive-kannada/media/post_attachments/wp-content/uploads/2025/07/accident4.jpg)
ನೇತ್ರಾವತಿ ಪೀಕ್ ಟ್ರಕ್ಕಿಂಗ್​​ಗೆ ಬಂದಿದ್ದ ಯುವಕ, ಯುವತಿಯರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳಿಗೆ ಮೂಡಿಗೆರೆ, ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
/newsfirstlive-kannada/media/post_attachments/wp-content/uploads/2025/07/accident3.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us