/newsfirstlive-kannada/media/post_attachments/wp-content/uploads/2024/11/TIGERS-MISSING.jpg)
- ಮಲೆಮಹದೇಶ್ವರ ವನ್ಯಧಾಮದ ಮೀಣ್ಯಂ ವಲಯದಲ್ಲಿ ಘಟನೆ
- ತಾಯಿ ಹುಲಿ ಹಾಗೂ ಮೂರು ಮರಿ ಹುಲಿಗಳ ಅಸಹಜ ಬಲಿ!
- ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯಾಧಿಕಾರಿಗಳ ದೌಡು
ಚಾಮರಾಜನಗರ: ತಾಯಿ ಹುಲಿ ಹಾಗೂ ಮೂರು ಮರಿಗಳು ಬಲಿಯಾಗಿರೋ ಘಟನೆ ಮಲೆಮಹದೇಶ್ವರ ವನ್ಯಧಾಮದ ಮೀಣ್ಯಂ ವಲಯದಲ್ಲಿ ನಡೆದಿದೆ.
ಇದನ್ನೂ ಓದಿ:ಅಂತಿಂಥ ಹೆಣ್ಣು ಇವಳಲ್ಲ..! ರೈಲು ಹಳಿ ಮೇಲೆ ಕಾರು ಓಡಿಸಿ ದಿಗಿಲು ಹುಟ್ಟಿಸಿದ ಲೇಡಿ -VIDEO
ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಕೊಟ್ಟಿದ್ದಾರೆ. ಇನ್ನೂ, ಹುಲಿಗಳು ವಿಷ ಪ್ರಶಾನದ ಸೇವಿಸಿ ಮೃತಪಟ್ಟಿವೆ ಎಂದು ಶಂಕಿಸಲಾಗಿದೆ. ಇನ್ನೂ, ಪಿಸಿಸಿಎಫ್ ನೇತೃತ್ವದಲ್ಲಿ ತನಿಖೆ ನಡೆಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ ಹೊರಡಿಸಿದ್ದಾರೆ. ಅಲ್ಲದೇ ತನಿಖೆ ನಡೆಸಿ ವರದಿ ನೀಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಜೊತೆಗೆ ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ವಿಷಪ್ರಾಶಾನವಾಗಿದ್ದರೆ ಸಂಬಂಧಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ದಾಖಲಿಸಲು ಸೂಚನೆ ಕೊಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ