ಸಂಸದ ಬಚ್ಚೇಗೌಡ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ
ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಚ್ಚೇಗೌಡ
ಚುನಾವಣಾ ರಾಜಕೀಯದಿಂದ ದೂರವಿರಲು ಬಚ್ಚೇಗೌಡ ನಿರ್ಧಾರ
ಬೆಂಗಳೂರು: ಸಂಸದ ಬಚ್ಚೇಗೌಡ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ಸದಸ್ಯತ್ವಕ್ಕೆ ಗುಡ್ ಬಾಯ್ ಹೇಳಿದ್ದಾರೆ.
ಬಚ್ಚೇಗೌಡ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದು, ಇದೀಗ ಅವರ ರಾಜೀನಾಮೆ ಪಕ್ಷದ ಕಾರ್ಯಕರ್ತರಿಗೆ ಶಾಕ್ ನೀಡಿದೆ.
ಚುನಾವಣಾ ರಾಜಕೀಯದಿಂದ ದೂರವಿರಲು ಬಚ್ಚೇಗೌಡ ನಿರ್ಧರಿಸಿದ್ದು, ಸಕ್ರೀಯ ರಾಜಕಾರಣದಲ್ಲಿ ಇರಲಿದ್ದಾರೆ. ಇನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾರ ಪರವಾಗಿಯೂ ಕೆಲಸವನ್ನು ಮಾಡದಿರಲು ನಿರ್ಧಿಸಿದ್ದಾರೆ.
ಬಚ್ಚೇಗೌಡರು ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಚಿಕ್ಕಬಳ್ಳಾಪುರದಲ್ಲಿ ಕಮಲ ಅರಳಿಸಿದ್ದರು. ಮಾತ್ರವಲ್ಲದೆ ಚಿಕ್ಕಬಳ್ಳಾಪುರದಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆಗೆದಿದ್ದರು.
2019ರಲ್ಲಿ ಇವರು ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳಿಂದ ಸೋಲಿಸಿದ್ದರು. ಇನ್ನು ಇವರ ಮಗ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಹೊಸಕೋಟೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸಂಸದ ಬಚ್ಚೇಗೌಡ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ
ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಚ್ಚೇಗೌಡ
ಚುನಾವಣಾ ರಾಜಕೀಯದಿಂದ ದೂರವಿರಲು ಬಚ್ಚೇಗೌಡ ನಿರ್ಧಾರ
ಬೆಂಗಳೂರು: ಸಂಸದ ಬಚ್ಚೇಗೌಡ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ಸದಸ್ಯತ್ವಕ್ಕೆ ಗುಡ್ ಬಾಯ್ ಹೇಳಿದ್ದಾರೆ.
ಬಚ್ಚೇಗೌಡ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದು, ಇದೀಗ ಅವರ ರಾಜೀನಾಮೆ ಪಕ್ಷದ ಕಾರ್ಯಕರ್ತರಿಗೆ ಶಾಕ್ ನೀಡಿದೆ.
ಚುನಾವಣಾ ರಾಜಕೀಯದಿಂದ ದೂರವಿರಲು ಬಚ್ಚೇಗೌಡ ನಿರ್ಧರಿಸಿದ್ದು, ಸಕ್ರೀಯ ರಾಜಕಾರಣದಲ್ಲಿ ಇರಲಿದ್ದಾರೆ. ಇನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾರ ಪರವಾಗಿಯೂ ಕೆಲಸವನ್ನು ಮಾಡದಿರಲು ನಿರ್ಧಿಸಿದ್ದಾರೆ.
ಬಚ್ಚೇಗೌಡರು ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಚಿಕ್ಕಬಳ್ಳಾಪುರದಲ್ಲಿ ಕಮಲ ಅರಳಿಸಿದ್ದರು. ಮಾತ್ರವಲ್ಲದೆ ಚಿಕ್ಕಬಳ್ಳಾಪುರದಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆಗೆದಿದ್ದರು.
2019ರಲ್ಲಿ ಇವರು ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳಿಂದ ಸೋಲಿಸಿದ್ದರು. ಇನ್ನು ಇವರ ಮಗ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಹೊಸಕೋಟೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ