newsfirstkannada.com

ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧದ ಪ್ರಕರಣಕ್ಕೆ ಟ್ವಿಸ್ಟ್; ಮೈಸೂರಲ್ಲಿ ಯುವತಿ ಮೇಲೆ ಹನಿಟ್ರ್ಯಾಪ್ ಕೇಸ್ ದಾಖಲು..!

Share :

17-11-2023

    ಹಣಕ್ಕಾಗಿ ಪೀಡಿಸುತ್ತಿದ್ದಾಳೆಂದು ಹನಿಟ್ರ್ಯಾಪ್ ದೂರು ದಾಖಲು

    ಮೈಸೂರಿನ ಮಹಾರಾಜ ಕಾಲೇಜಿನ ಪ್ರೊಫೆಸರ್ ರಂಗನಾಥ್

    ಯುವತಿ ಕೇಸ್ ದಾಖಲಿಸುತ್ತಿದ್ದಂತೆ ರಂಗನಾಥ್ ಕೂಡ ದೂರು

ಮೈಸೂರು: ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ದೇವೇಂದ್ರಪ್ಪ ಅವರ ಪುತ್ರ ಪ್ರೊ.ರಂಗನಾಥ್ ವಿರುದ್ಧ ಯುವತಿಯೊಬ್ಬಳು ಲೈಂಗಿಕ ಆರೋಪ ಮಾಡಿ ಕೇಸ್ ದಾಖಲಿಸಿದ್ದಾಳೆ. ಇದಕ್ಕೆ ಪ್ರತಿಯಾಗಿ ಸಂಸದರ ಪುತ್ರ ವಿಜಯನಗರ ಠಾಣೆಯಲ್ಲಿ ಹನಿಟ್ರ್ಯಾಪ್ ಕೇಸ್ ದಾಖಲಿಸಿದ್ದಾರೆ.

ರಂಗನಾಥ್ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ನನ್ನ ವಿರುದ್ಧ ದೂರು ನೀಡಿರುವ ಯುವತಿಯು ಹಣಕ್ಕಾಗಿ ಪೀಡಿಸುತ್ತಿದ್ದಾಳೆ. ಆ ಯುವತಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆರೋಪಿಸಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಹನಿಟ್ರ್ಯಾಪ್ ದೂರನ್ನು 3 ದಿನಗಳ ಹಿಂದೆ ದಾಖಲಿಸಿದ್ದಾರೆ.

ಇದನ್ನೂ ಓದಿ: ‘ನನ್ನ ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾನೆ’ ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಯುವತಿ ಆರೋಪ..!

ಉಪನ್ಯಾಸಕ ರಂಗನಾಥ್ ಅವರು ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಆದರೆ ಈಗ ಮದುವೆಯಾಗಿ ಎಂದರೆ ಕೇಳುತ್ತಿಲ್ಲ. ಮದುವೆಯಾಗಲ್ಲ ಏನ್ ಮಾಡಿಕೊಳ್ಳುತ್ತೀಯಾ ಮಾಡ್ಕೋ ಹೋಗು ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿ ಯುವತಿ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ. ಇದಕ್ಕೆ ಪ್ರತಿ ದೂರಾಗಿ ರಂಗನಾಥ್ ಅವರು ವಿಜಯನಗರ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧದ ಪ್ರಕರಣಕ್ಕೆ ಟ್ವಿಸ್ಟ್; ಮೈಸೂರಲ್ಲಿ ಯುವತಿ ಮೇಲೆ ಹನಿಟ್ರ್ಯಾಪ್ ಕೇಸ್ ದಾಖಲು..!

https://newsfirstlive.com/wp-content/uploads/2023/11/MP_DEVENDRAPPA_SON_1.jpg

    ಹಣಕ್ಕಾಗಿ ಪೀಡಿಸುತ್ತಿದ್ದಾಳೆಂದು ಹನಿಟ್ರ್ಯಾಪ್ ದೂರು ದಾಖಲು

    ಮೈಸೂರಿನ ಮಹಾರಾಜ ಕಾಲೇಜಿನ ಪ್ರೊಫೆಸರ್ ರಂಗನಾಥ್

    ಯುವತಿ ಕೇಸ್ ದಾಖಲಿಸುತ್ತಿದ್ದಂತೆ ರಂಗನಾಥ್ ಕೂಡ ದೂರು

ಮೈಸೂರು: ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ದೇವೇಂದ್ರಪ್ಪ ಅವರ ಪುತ್ರ ಪ್ರೊ.ರಂಗನಾಥ್ ವಿರುದ್ಧ ಯುವತಿಯೊಬ್ಬಳು ಲೈಂಗಿಕ ಆರೋಪ ಮಾಡಿ ಕೇಸ್ ದಾಖಲಿಸಿದ್ದಾಳೆ. ಇದಕ್ಕೆ ಪ್ರತಿಯಾಗಿ ಸಂಸದರ ಪುತ್ರ ವಿಜಯನಗರ ಠಾಣೆಯಲ್ಲಿ ಹನಿಟ್ರ್ಯಾಪ್ ಕೇಸ್ ದಾಖಲಿಸಿದ್ದಾರೆ.

ರಂಗನಾಥ್ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ನನ್ನ ವಿರುದ್ಧ ದೂರು ನೀಡಿರುವ ಯುವತಿಯು ಹಣಕ್ಕಾಗಿ ಪೀಡಿಸುತ್ತಿದ್ದಾಳೆ. ಆ ಯುವತಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆರೋಪಿಸಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಹನಿಟ್ರ್ಯಾಪ್ ದೂರನ್ನು 3 ದಿನಗಳ ಹಿಂದೆ ದಾಖಲಿಸಿದ್ದಾರೆ.

ಇದನ್ನೂ ಓದಿ: ‘ನನ್ನ ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾನೆ’ ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಯುವತಿ ಆರೋಪ..!

ಉಪನ್ಯಾಸಕ ರಂಗನಾಥ್ ಅವರು ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಆದರೆ ಈಗ ಮದುವೆಯಾಗಿ ಎಂದರೆ ಕೇಳುತ್ತಿಲ್ಲ. ಮದುವೆಯಾಗಲ್ಲ ಏನ್ ಮಾಡಿಕೊಳ್ಳುತ್ತೀಯಾ ಮಾಡ್ಕೋ ಹೋಗು ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿ ಯುವತಿ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ. ಇದಕ್ಕೆ ಪ್ರತಿ ದೂರಾಗಿ ರಂಗನಾಥ್ ಅವರು ವಿಜಯನಗರ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More