ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ಬಹಳ ಜೋರು..!
ಮಂಡ್ಯದಲ್ಲಿ ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಅಬ್ಬರದ ಪ್ರಚಾರ
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ
ಮಂಡ್ಯ: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಅದರಲ್ಲೂ ಸಕ್ಕರೆ ನಾಡು ಮಂಡ್ಯದಲ್ಲಂತೂ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಮಂಡ್ಯ ಹೈವೋಲ್ಟೇಜ್ ಕಣವಾಗಿದೆ.
ಇನ್ನು, ಕಳೆದ ಚುನಾವಣೆಯಲ್ಲಿ ದರ್ಶನ್ ನಟಿ ಸುಮಲತಾ ಪರ ಪ್ರಚಾರ ಮಾಡಿದ್ರು. ಇಂದು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಮಧ್ಯೆ ಈ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಮಾತಾಡಿದ್ದಾರೆ.
ನಾನು ಸ್ಪರ್ಧೆ ಮಾಡಿದಾಗಲೂ ದರ್ಶನ್ ಅವರನ್ನ ಕರೆದಿಲ್ಲ. ನಾನು ಮೋದಿಯವರ ನಾಯಕತ್ವ ಬೆಂಬಲಿಸಿ ಬಿಜೆಪಿ ಸೇರಿದ್ದೇನೆ. ಮಂಡ್ಯದ ಪ್ರಚಾರ ವಿಚಾರದಲ್ಲಿ ಅನಗತ್ಯ ಚರ್ಚೆ ಬೇಡ. ನಾನು ಬಿಜೆಪಿ ಎನ್ಡಿಎ ಪರ ಪ್ರಚಾರ ಮಾಡುತ್ತೇನೆ. ಪಕ್ಷ ಸೂಚಿಸಿದ್ದಲ್ಲಿ ಹೋಗಿ ಪ್ರಚಾರ ಮಾಡ್ತೀನಿ ಎಂದಿದ್ದಾರೆ.
ಇದನ್ನೂ ಓದಿ: ಕೆಕೆಆರ್ ವಿರುದ್ಧ ಪಂದ್ಯಕ್ಕೆ ಮುನ್ನವೇ ಆರ್ಸಿಬಿಗೆ ಬಿಗ್ ಶಾಕ್.. ಸ್ಟಾರ್ ಪ್ಲೇಯರ್ ಔಟ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ಬಹಳ ಜೋರು..!
ಮಂಡ್ಯದಲ್ಲಿ ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಅಬ್ಬರದ ಪ್ರಚಾರ
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ
ಮಂಡ್ಯ: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಅದರಲ್ಲೂ ಸಕ್ಕರೆ ನಾಡು ಮಂಡ್ಯದಲ್ಲಂತೂ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಮಂಡ್ಯ ಹೈವೋಲ್ಟೇಜ್ ಕಣವಾಗಿದೆ.
ಇನ್ನು, ಕಳೆದ ಚುನಾವಣೆಯಲ್ಲಿ ದರ್ಶನ್ ನಟಿ ಸುಮಲತಾ ಪರ ಪ್ರಚಾರ ಮಾಡಿದ್ರು. ಇಂದು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಮಧ್ಯೆ ಈ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಮಾತಾಡಿದ್ದಾರೆ.
ನಾನು ಸ್ಪರ್ಧೆ ಮಾಡಿದಾಗಲೂ ದರ್ಶನ್ ಅವರನ್ನ ಕರೆದಿಲ್ಲ. ನಾನು ಮೋದಿಯವರ ನಾಯಕತ್ವ ಬೆಂಬಲಿಸಿ ಬಿಜೆಪಿ ಸೇರಿದ್ದೇನೆ. ಮಂಡ್ಯದ ಪ್ರಚಾರ ವಿಚಾರದಲ್ಲಿ ಅನಗತ್ಯ ಚರ್ಚೆ ಬೇಡ. ನಾನು ಬಿಜೆಪಿ ಎನ್ಡಿಎ ಪರ ಪ್ರಚಾರ ಮಾಡುತ್ತೇನೆ. ಪಕ್ಷ ಸೂಚಿಸಿದ್ದಲ್ಲಿ ಹೋಗಿ ಪ್ರಚಾರ ಮಾಡ್ತೀನಿ ಎಂದಿದ್ದಾರೆ.
ಇದನ್ನೂ ಓದಿ: ಕೆಕೆಆರ್ ವಿರುದ್ಧ ಪಂದ್ಯಕ್ಕೆ ಮುನ್ನವೇ ಆರ್ಸಿಬಿಗೆ ಬಿಗ್ ಶಾಕ್.. ಸ್ಟಾರ್ ಪ್ಲೇಯರ್ ಔಟ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ