/newsfirstlive-kannada/media/post_attachments/wp-content/uploads/2025/03/Tejasvi-Surya.jpg)
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇದನ್ನೂ ಓದಿ: ಗಂಡನ ಮನೆಗೆ ಬಂದ 3 ದಿನದಲ್ಲೇ 5 ತಿಂಗಳ ಬಾಣಂತಿ ಕೊಲೆ ಆರೋಪ.. ಹಸುಗೂಸು ಅನಾಥ
ಇಂದು ಹೆಸರಘಟ್ಟ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಜೊತೆಗೆ ವೈವಾಹಿಕ ಜೀವನಕ್ಕೆ ತೇಜಸ್ವಿ ಸೂರ್ಯ ಕಾಲಿಟ್ಟಿದ್ದಾರೆ.
ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಜೋಡಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಪ್ರತಾಪ್ ಸಿಂಹ ಹಾಗೂ ಅವರ ಮಗಳು ಕೂಡ ಆಗಮಿಸಿದ್ದರು.
ಅಲ್ಲದೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹಾಗೂ ಸಂಸದ ಎಸ್. ಮುನಿಸ್ವಾಮಿ ಅವರು ಭಾಗಿಯಾಗಿದ್ದರು.
ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಅವಧೂತ ವಿನಯ್ ಗುರೂಜಿ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಬಂದು ನವ ಜೋಡಿಗೆ ಶುಭ ಹಾರೈಸಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ಅವರ ಮದುವೆ ಶಾಸ್ತ್ರಗಳು ನಡೆಯುತ್ತಿರುವಾಗ ಗುರು, ಹಿರಿಯರು, ಬಂಧುಗಳು ಸ್ನೇಹಿತರು ನೆರೆದಿದ್ದರು.
ಇನ್ನೂ, ಮಾರ್ಚ್ 9ರಂದು ಬೆಂಗಳೂರು ಅರಮನೆ ಆವರಣದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಆರತಕ್ಷತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಈ ಹಿಂದೆ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್ ಅವರು ಹಾಡಿದ ಹಾಡಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಫುಲ್ ಫಿದಾ ಆಗಿದ್ದರು.
ದಕ್ಷಿಣ ಭಾರತದ ಖ್ಯಾತ ಗಾಯಕಿಯಾದ ಶಿವಶ್ರೀ ಸ್ಕಂದಪ್ರಸಾದ್ ಅವರು ಹಾಡಿದ ತುಣುಕನ್ನು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದರು.
ಸದ್ಯ ತೇಜಸ್ವಿ ಸೂರ್ಯ ಅವರ ಜೊತೆಗೆ ಶಿವಶ್ರೀ ಸ್ಕಂದಪ್ರಸಾದ್ ಮದುವೆಯಾಗಿ ಹೊಸ ಬಾಳು ಶುರು ಮಾಡಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ