Advertisment

Breaking News: ಸಿಎಂ ಸಿದ್ದರಾಮಯ್ಯಗೆ ಇಲ್ಲ ರಿಲೀಫ್ -ಹೈಕೋರ್ಟ್​ನಿಂದ ಮಹತ್ವದ ತೀರ್ಪು

author-image
Bheemappa
Updated On
‘ಕರ್ಮ ಹಿಟ್​ ಬ್ಯಾಕ್ ಎಂದ್ರೆ ಇದೇ ಅಲ್ಲವೇ ಸಿದ್ದರಾಮಯ್ಯ’ -HD ಕುಮಾರಸ್ವಾಮಿ ಟಾಂಗ್
Advertisment
  • ಸಿಎಂ ವಿರುದ್ಧ ಪ್ರಾಸಿಕ್ಯೂಶನ್​ಗೆ ಅನುಮತಿ ನೀಡಿದ್ದ ರಾಜ್ಯಪಾಲ
  • ತೀರ್ಪು ಇಂದಿಗೆ ಕಾಯ್ದಿರಿಸಿದ್ದ ಹೈಕೋರ್ಟ್​ ಏಕಸದಸ್ಯ ಪೀಠ
  • 2 ಕಡೆಯ ವಾದ-ಪ್ರತಿವಾದ ಆಲಿಸಿ ತೀರ್ಪು ನೀಡಿದ ಕೋರ್ಟ್

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್​ನಲ್ಲೂ ಹಿನ್ನಡೆ ಆಗಿದೆ. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್​​ಗೆ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಪ್ರಕರಣದ ಬಗ್ಗೆ ತನಿಖೆ ಆಗಬೇಕು ಎಂದು ಹೈಕೋರ್ಟ್​ ಹೇಳಿದೆ.

Advertisment

ಮೈಸೂರಿನ ಮುಡಾ ಸೈಟ್​ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಶನ್​ಗೆ ಅನುಮತಿ ನೀಡಿದ್ದರು. ಆರ್​​ಟಿಐ ಕಾರ್ಯಕರ್ತ ಹಾಗೂ ವಕೀಲ ಟಿಜೆ ಅಬ್ರಾಹಾಂ ಸಲ್ಲಿಸಿದ್ದ ಖಾಸಗಿ ದೂರನ್ನು ಸ್ವೀಕರಿಸಿದ್ದ ರಾಜ್ಯಪಾಲರು ಪ್ರಾಸಿಕ್ಯೂಶನ್​ಗೆ ಅನುಮತಿಸಿದ್ದರು.  ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಶನ್​​ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ, ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ ಕೋರ್ಟ್​ ತೀರ್ಪ ಅನ್ನು ಇವತ್ತಿಗೆ ಕಾಯ್ದಿರಿಸಿತ್ತು. ಅದರಂತೆ ಹೈಕೋರ್ಟ್​​ ಸಿಎಂ ಸಿದ್ದರಾಮಯ್ಯರ ಅರ್ಜಿಯನ್ನು ವಜಾ ಮಾಡಿದೆ.

ಇದನ್ನೂ ಓದಿ:DCM ಡಿ.ಕೆ ಶಿವಕುಮಾರ್ ರಾತ್ರಿ 2 ಗಂಟೆವರೆಗೆ ಸಿಲಿಕಾನ್ ಸಿಟಿ ರೌಂಡ್ಸ್​.. ಕಾರಣವೇನು?

publive-image

ನ್ಯಾಯಾಲಯದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಸುಪ್ರೀಂಕೋರ್ಟ್​ನ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಹಾಗೂ ಪ್ರೊ.ರವಿಕುಮಾರ್ ವರ್ಮಾ ಅವರು ವಾದ ಮಂಡನೆ ಮಾಡಿದರು. ಇನ್ನು ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ್ದ ನ್ಯಾ.ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಪ್ರಕರಣ ತನಿಖೆ ಆಗಬೇಕು ಎಂದು ಹೇಳಿದೆ.

Advertisment

ಸದ್ಯ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಪ್ರರಕಣದ ಬಗ್ಗೆ ತನಿಖೆಯಾಗಬೇಕು ಎಂದು ಕೋರ್ಟ್ ಹೇಳಿದ್ದರಿಂದ ಸಿಎಂಗೆ ಇನ್ನಷ್ಟು ಸಂಕಷ್ಟ ಎದುರಾದಂತೆ ಆಗಿದೆ. ಹೀಗಾಗಿ ಪ್ರಕರಣದಲ್ಲಿ ಅರ್ಜಿದಾರರ ಕ್ರಮ ಸೂಕ್ತವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment