Advertisment

ಮಹಾ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಶ್ರೀಮಂತ ಅಂಬಾನಿ ಕುಟುಂಬದ 4 ತಲೆಮಾರು; ಫೋಟೋಗಳು ಇಲ್ಲಿವೆ!

author-image
Veena Gangani
Updated On
ಮಹಾ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಶ್ರೀಮಂತ ಅಂಬಾನಿ ಕುಟುಂಬದ 4 ತಲೆಮಾರು; ಫೋಟೋಗಳು ಇಲ್ಲಿವೆ!
Advertisment
  • ಮಹಾ ಕುಂಭಮೇಳಕ್ಕೆ ಬಂದ ಉದ್ಯಮಿ ಮುಕೇಶ್​ ಅಂಬಾನಿ ತಾಯಿ
  • ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ಭೇಟಿ ಕೊಟ್ಟ ಅಂಬಾನಿ ಕುಟುಂಬ
  • ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿ ಪುನೀತರಾದ ಅಂಬಾನಿ ಫ್ಯಾಮಿಲಿ

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ, ಉದ್ಯಮಿ ಮುಕೇಶ್​ ಅಂಬಾನಿ ತಮ್ಮ ಕುಟುಂಬದೊಂದಿಗೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ಭೇಟಿ ಕೊಟ್ಟಿದ್ದಾರೆ.

Advertisment

ಇದನ್ನೂ ಓದಿ:ರಮ್ಯಾ ಬಳಿ ಪ್ರೀತಿಯ ಮಗಳಿಗಾಗಿ ದುನಿಯಾ ವಿಜಿ ಕೇಳಿಕೊಂಡಿದ್ದು ಏನು ಗೊತ್ತಾ..? Video

publive-image

ಕುಟುಂಬ ಸಮೇತ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರೋ ಮಹಾ ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ. ಇಂದು ಮಧ್ಯಾಹ್ನ ಪ್ರಯಾಗ್‌ರಾಜ್‌ ಭೇಟಿ ನೀಡಿದ ಮುಕೇಶ್ ಅಂಬಾನಿ, ಅವರ ತಾಯಿ ಕೋಕಿಲಾಬೆನ್ ಅಂಬಾನಿ ಕೂಡ ಬಂದಿದ್ದರು.

publive-image

ಪುತ್ರರಾದ ಅನಂತ್ ಮತ್ತು ಆಕಾಶ್ ಅಂಬಾನಿ, ಆಕಾಶ್ ಅವರ ಪತ್ನಿ ಶ್ಲೋಕಾ ಮೆಹ್ತಾ ಮತ್ತು ಅವರ ಇಬ್ಬರು ಮಕ್ಕಳಾದ ಪೃಥ್ವಿ ಮತ್ತು ವೇದಾ, ಅನಂತ್ ಅಂಬಾನಿ ಪತ್ನಿ ರಾಧಿಕಾ ಅವರೊಂದಿಗೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

Advertisment

publive-image

ಸಂಗಮದಲ್ಲಿ ಸ್ನಾನ ಮಾಡಿದ ಬಳಿಕ, ಅಂಬಾನಿ ಕುಟುಂಬಸ್ಥರು ನಿರಂಜನಿ ಅಖಾಡದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಸ್ವಾಮಿ ಕೈಲಾಶಾನಂದ ಗಿರಿ ಜಿ ಮಹಾರಾಜ್ ಅವರ ಸಮ್ಮುಖದಲ್ಲಿ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದೆ.

publive-image

ಕುಂಭಮೇಳ ಭೇಟಿ ವೇಳೆ ಅಂಬಾನಿ ಅವರ ಕುಟುಂಬ ಪರಮತೀರ್ಥ ತ್ರಿವೇಣಿ ಪುಷ್ಪ ಆಶ್ರಮದಲ್ಲಿ ನಡೆದ ಯಜ್ಞದಲ್ಲಿ ಭಾಗವಹಿಸಿದೆ. ಮುಖೇಶ್ ಅಂಬಾನಿ ಹಾಗೂ ಅವರ ಕುಟುಂಬ ನಮ್ಮ ಆಶ್ರಮಕ್ಕೆ ಭೇಟಿ ನೀಡಿದ್ದು, ಸ್ವಾಮಿ ಚಿದಾನಂದ ಸರಸ್ವತಿ ಅವರ ನೇತೃತ್ವದಲ್ಲಿ ನಡೆದ ಯಜ್ಞದಲ್ಲಿ ಭಾಗವಹಿಸಿತ್ತು ಎಂದು ಆಶ್ರಮ ಪ್ರಕಟಣೆ ಮಾಡಿದೆ.

publive-image

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment