newsfirstkannada.com

DK ಶಿವಕುಮಾರ್ ಸಿಎಂ ವಿಚಾರ; ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ

Share :

05-11-2023

    ಬಿಜೆಪಿ ಮತ್ತು ಜೆಡಿಎಸ್​ ಇಬ್ಬರು ರಾಜಕೀಯವಾಗಿ ಹತಾಶರಾಗಿದ್ದಾರೆ

    ಮುಖ್ಯಮಂತ್ರಿ ಕುರ್ಚಿ ಬಗ್ಗೆ ಇಲ್ಲಸಲ್ಲದನ್ನು ಮಾತನಾಡುತ್ತಿದ್ದಾರೆ- ಸಿಎಂ

    ಡಿ.ಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮಾತನಾಡಿದ್ದ ಕುಮಾರಸ್ವಾಮಿ

ಮೈಸೂರು: ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಆಗೋದಾದ್ರೆ ಜೆಡಿಎಸ್​ ಶಾಸಕರು ಸಂಪೂರ್ಣ ಬೆಂಬಲ ಎನ್ನುವ ಹೆಚ್​.ಡಿ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಕುಮಾರಸ್ವಾಮಿ ಹೇಳಿಕೆಯಲ್ಲಿ ಏನೂ ಇಲ್ಲ ಎಲ್ಲ ವ್ಯಂಗ್ಯ ಎಂದು ಅಲ್ಲಗಳೆದಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಮತ್ತು ಜೆಡಿಎಸ್​ ಇಬ್ಬರು ರಾಜಕೀಯವಾಗಿ ಹತಾಶರಾಗಿದ್ದಾರೆ. ಈ ಹತಾಶೆಯಲ್ಲಿಯೇ ಸಿಎಂ‌ ಕುರ್ಚಿಯ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಆಡುತ್ತಿದ್ದಾರೆ. ಈ ಹೇಳಿಕೆಯಲ್ಲಿ ವ್ಯಂಗ್ಯ ಬಿಟ್ಟರೇ ಇನ್ನೇನಿದೆ ಹೇಳಿ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ

ಮಾಜಿ ಸಿಎಂ ಕುಮಾರಸ್ವಾಮಿ ಅವರು ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಈ ಹಿಂದೆ ಖುದ್ದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಅವರ ಮಾತಿನಲ್ಲಿ ವ್ಯಂಗ್ಯ ಬಿಟ್ಟರೇ ಬೇರೆ ಏನೂ ಇಲ್ಲ. ಅಧಿಕಾರ ಇಲ್ಲದೇ ಬಿಜೆಪಿ, ಜೆಎಎಸ್ ನಾಯಕರು ಹತಾಶೆಯಾಗಿದ್ದಾರೆ. ಹೀಗಾಗಿ ಕಾಂಗ್ರೆಸ್​ ಸರ್ಕಾರ ಇದ್ದರೂ ಮುಖ್ಯಮಂತ್ರಿ ಕುರ್ಚಿ ಬಗ್ಗೆ ಏನೇನೋ ಹೇಳುತ್ತಿದ್ದಾರೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

DK ಶಿವಕುಮಾರ್ ಸಿಎಂ ವಿಚಾರ; ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ

https://newsfirstlive.com/wp-content/uploads/2023/08/HDK_CM_SIDDARAMAIAH.jpg

    ಬಿಜೆಪಿ ಮತ್ತು ಜೆಡಿಎಸ್​ ಇಬ್ಬರು ರಾಜಕೀಯವಾಗಿ ಹತಾಶರಾಗಿದ್ದಾರೆ

    ಮುಖ್ಯಮಂತ್ರಿ ಕುರ್ಚಿ ಬಗ್ಗೆ ಇಲ್ಲಸಲ್ಲದನ್ನು ಮಾತನಾಡುತ್ತಿದ್ದಾರೆ- ಸಿಎಂ

    ಡಿ.ಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮಾತನಾಡಿದ್ದ ಕುಮಾರಸ್ವಾಮಿ

ಮೈಸೂರು: ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಆಗೋದಾದ್ರೆ ಜೆಡಿಎಸ್​ ಶಾಸಕರು ಸಂಪೂರ್ಣ ಬೆಂಬಲ ಎನ್ನುವ ಹೆಚ್​.ಡಿ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಕುಮಾರಸ್ವಾಮಿ ಹೇಳಿಕೆಯಲ್ಲಿ ಏನೂ ಇಲ್ಲ ಎಲ್ಲ ವ್ಯಂಗ್ಯ ಎಂದು ಅಲ್ಲಗಳೆದಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಮತ್ತು ಜೆಡಿಎಸ್​ ಇಬ್ಬರು ರಾಜಕೀಯವಾಗಿ ಹತಾಶರಾಗಿದ್ದಾರೆ. ಈ ಹತಾಶೆಯಲ್ಲಿಯೇ ಸಿಎಂ‌ ಕುರ್ಚಿಯ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಆಡುತ್ತಿದ್ದಾರೆ. ಈ ಹೇಳಿಕೆಯಲ್ಲಿ ವ್ಯಂಗ್ಯ ಬಿಟ್ಟರೇ ಇನ್ನೇನಿದೆ ಹೇಳಿ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ

ಮಾಜಿ ಸಿಎಂ ಕುಮಾರಸ್ವಾಮಿ ಅವರು ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಈ ಹಿಂದೆ ಖುದ್ದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಅವರ ಮಾತಿನಲ್ಲಿ ವ್ಯಂಗ್ಯ ಬಿಟ್ಟರೇ ಬೇರೆ ಏನೂ ಇಲ್ಲ. ಅಧಿಕಾರ ಇಲ್ಲದೇ ಬಿಜೆಪಿ, ಜೆಎಎಸ್ ನಾಯಕರು ಹತಾಶೆಯಾಗಿದ್ದಾರೆ. ಹೀಗಾಗಿ ಕಾಂಗ್ರೆಸ್​ ಸರ್ಕಾರ ಇದ್ದರೂ ಮುಖ್ಯಮಂತ್ರಿ ಕುರ್ಚಿ ಬಗ್ಗೆ ಏನೇನೋ ಹೇಳುತ್ತಿದ್ದಾರೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More