Advertisment

ವಿಶ್ವವಿಖ್ಯಾತ ದಸರಾಗೆ ಸಂಭ್ರಮದ ಚಾಲನೆ.. ಕೆಂಪು ಸೀರೆ, ಹೂವುಗಳಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿ

author-image
Bheemappa
Updated On
ಚಾಮುಂಡೇಶ್ವರಿಗೆ ₹100 ಕೋಟಿ ಚಿನ್ನದ ರಥ.. ದೊಡ್ಡ ಕಾಣಿಕೆಗೆ ಸಿಎಂ ಸಿದ್ದರಾಮಯ್ಯ ಒಲವು; ಏನಿದರ ವಿಶೇಷ?
Advertisment
  • ವೃಶ್ಚಿಕ ಲಗ್ನದಲ್ಲಿ ಬೆಟ್ಟದ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ
  • ನವರಾತ್ರಿ ಮೊದಲ‌ ದಿನವಾದ ಇಂದು ದೇವಿಗೆ ವಿಶೇಷ ಪೂಜೆಗಳು
  • ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿರುವ ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ನಾಡ ಅಧಿದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಂಭ್ರಮದಿಂದ ಚಾಲನೆ ನೀಡಲಾಯಿತು. ಬೆಳಗ್ಗೆ 9.15 ರಿಂದ 9.45 ರ ವೃಶ್ಚಿಕ ಲಗ್ನದಲ್ಲಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅಧಿಕೃತವಾಗಿ ದಸರಾ 2024ರ ಸಮಾರಂಭಕ್ಕೆ ಚಾಲನೆ ಸಿಕ್ಕಿತು.

Advertisment

publive-image

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಾಹಿತಿ ಹಂಪನಾಗರಾಜಯ್ಯ ಅವರು ನಾಡ ದೇವಿಗೆ ಪುಷ್ಪಾರ್ಚನೆ ಮಾಡಿದರು. ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುಷ್ಪಾರ್ಚನೆ ವೇಳೆ ಸಚಿವ ಹೆಚ್​.ಸಿ ಮಹಾದೇವಪ್ಪ, ಕಾನೂನು ಸಚಿವ ಹೆಚ್​.ಕೆ ಪಾಟೀಲ್, ಕೆ.ಹೆಚ್ ಮುನಿಯಪ್ಪ, ತನ್ವೀರ್ ಸೇಠ್ ಸೇರಿದಂತೆ ಇತರೆ ಗಣ್ಯರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  ರಸ್ತೆಯಲ್ಲಿ ಬರುವಾಗ ದೇವರಿಗೆ ನಮಸ್ಕರಿಸಿದ ಸಿಎಂ ಸಿದ್ದರಾಮಯ್ಯ ಅವರು ಈಡುಗಾಯಿ ಒಡೆದರು. ಈ ವೇಳೆ ಸಾಹಿತಿ ಹಂಪನಾಗರಾಜಯ್ಯ ಜೊತೆಯಲ್ಲಿದ್ದರು.

ಇದನ್ನೂ ಓದಿ:ಹೈಕೋರ್ಟ್​​ನಲ್ಲಿ ಭಾರೀ ಹುದ್ದೆಗಳ ನೇಮಕಾತಿ.. 100 ಅಲ್ಲ, 200 ಅಲ್ಲ 3 ಸಾವಿರಕ್ಕೂ ಹೆಚ್ಚು ಉದ್ಯೋಗಗಳು

publive-image

ದಸರಾ ಚಾಲನೆಗೂ ಮೊದಲು ನಾಡಿನ ಅಧಿದೇವತೆಗೆ ಬ್ರಾಹ್ಮಿ ಮುಹೂರ್ತದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಬೆಳಗ್ಗೆಯಿಂದ ಎಲ್ಲ ಕೆಲಸಗಳನ್ನು ಪೂರ್ಣ ಮಾಡಿದ್ದೇವೆ. ತಾಯಿ ಹಂಸವಾಹಿನಿ ಅಲಂಕಾರದಲ್ಲಿ ದೇವಿ ದರ್ಶನವಾಗಿದೆ. ನವರಾತ್ರಿಯ ಮೊದಲ‌ ದಿನವಾದ ಇಂದು ಚಾಮುಂಡಿದೇವಿಗೆ ವಿಶೇಷ ಪೂಜೆಗಳನ್ನ ಮಾಡಲಾಗಿದೆ. 9 ದಿನಗಳು ದೇವಿ ವಿಶೇಷವಾಗಿ ಕಾಣಿಸಿಕೊಳ್ಳಲಿದ್ದಾಳೆ ಎಂದು ದೇವಸ್ಥಾನದ ಅರ್ಚಕ ಡಾ.ಶಶಿಶೇಖರ್ ದೀಕ್ಷಿತ್ ಹೇಳಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment