ಉಕ್ಕಿ ಹರಿಯುತ್ತಿರುವ ನದಿಗಳಿಂದಾಗಿ ಜಲಾಶಯದ ಒಳಹರಿವು ಹೆಚ್ಚಳ
ನೀರಾವರಿ ಇಲಾಖೆಯ ಬೇಜವಾಬ್ದಾರಿತನಕ್ಕೆ ಗ್ರಾಮಸ್ಥರಿಂದ ತೀವ್ರ ಆಕ್ರೋಶ
ಮೂರು ದಿನಗಳ ಹಿಂದಷ್ಟೇ ಸಿಎಂ ಸಿದ್ದರಾಮಯ್ಯರಿಂದ ಬಾಗಿನ ಅರ್ಪಣೆ
ಮೈಸೂರು: ಕೇರಳದ ವಯನಾಡು ಸೇರಿದಂತೆ ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಆಗುತ್ತಿರೋ ಕಾರಣ, ಕಾವೇರಿ ಒಡಲು ತುಂಬು ತುಳುಕುತ್ತಿದೆ. ಧಾರಾಕಾರ ಮಳೆಯಿಂದಾಗಿ ಕೆಆರ್ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರ ಪರಿಣಾಮ ಕೆಆರ್ಎಸ್ ಡ್ಯಾಂನಿಂದ ನದಿಗೆ ನೀರನ್ನು ಬಿಡಲಾಗುತ್ತಿದೆ. ಹೀಗಾಗಿ ಕಾವೇರಿ ತೀರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ: ಮೆಟ್ಟೂರು ಡ್ಯಾಂನಿಂದ ಕಾವೇರಿಗೆ ನೀರು.. ಕೃಷ್ಣೆಯಲ್ಲಿ ಕೊಚ್ಚಿ ಹೋಗ್ತಿದ್ದವನ ರಕ್ಷಣೆ; ತುಂಗಭದ್ರೆಯಿಂದ ಕಂಪ್ಲಿಗೆ ಕಂಟಕ..!
ಮೂರು ದಿನಗಳ ಹಿಂದೆ 84 ಅಡಿ ಎತ್ತರದ ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಣೆ ಮಾಡಿದ್ದರು. ಈಗ ವಯನಾಡಿನಲ್ಲಿ ಭಾರೀ ಮಳೆ ನಡುವೆ ಕಬಿನಿ ಜಲಾಶಯದಲ್ಲಿ ಆತಂಕ ಸೃಷ್ಟಿಯಾಗಿದೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕು ಬೀಚನಹಳ್ಳಿಯಲ್ಲಿರೋ ಕಬಿನಿ ಜಲಾಶಯದ ಬಲದಂಡೆ ಬಳಿ ಭಾರೀ ಪ್ರಮಾಣದ ಬಿರುಕು ಕಾಣಿಸಿದ್ದು, ನಿತ್ಯ 300 ರಿಂದ 500 ಕ್ಯೂಸೆಕ್ಸ್ ನೀರು ಪೋಲಾಗುತ್ತಿದೆ. ಕೇರಳದಲ್ಲಿ ಮಳೆ ಆಗ್ತಿರುವ ಕಾರಣ ಉಕ್ಕಿ ಹರಿಯುತ್ತಿರುವ ನದಿಗಳಿಂದ ಡ್ಯಾಂನ ಒಳಹರಿವು ಹೆಚ್ಚಳವಾಗಿದೆ. ಮತ್ತೊಂದೆಡೆ ಬಲದಂಡೆ ಬಳಿ ಭಾರೀ ಪ್ರಮಾಣದ ಬಿರುಕು ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇನ್ನು, ನೀರಾವರಿ ಇಲಾಖೆ ಬೇಜವಾಬ್ದಾರಿತನಕ್ಕೆ ಗ್ರಾಮಸ್ಥರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜೊತೆಗೆ ಬಲದಂಡೆ ನಾಲೆ ಒಡೆದರೆ ಸರಗೂರು ತಿ.ನರಸೀಪುರ, ನಂಜನಗೂಡು ಜಲಾವೃತವಾಗುವ ಸಂಕಷ್ಟ ಎದುರಾಗಿದೆ. ಹೀಗಾಗಿ ನೂರಾರು ಗ್ರಾಮಗಳು ಜಲಾವೃತವಾಗುವ ಆತಂಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಯಾವುದೇ ಅನಾಹುತ ಸಂಭವಿಸದಂತೆ ಜಿಲ್ಲಾಡಳಿತ ಅಲರ್ಟ್ ಆಗಿದೆ. ಸಾರ್ವಜನಿಕರು ತೆರಳದಂತೆ ಸೇತುವೆಯ ಎರಡು ಬದಿ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಉಕ್ಕಿ ಹರಿಯುತ್ತಿರುವ ನದಿಗಳಿಂದಾಗಿ ಜಲಾಶಯದ ಒಳಹರಿವು ಹೆಚ್ಚಳ
ನೀರಾವರಿ ಇಲಾಖೆಯ ಬೇಜವಾಬ್ದಾರಿತನಕ್ಕೆ ಗ್ರಾಮಸ್ಥರಿಂದ ತೀವ್ರ ಆಕ್ರೋಶ
ಮೂರು ದಿನಗಳ ಹಿಂದಷ್ಟೇ ಸಿಎಂ ಸಿದ್ದರಾಮಯ್ಯರಿಂದ ಬಾಗಿನ ಅರ್ಪಣೆ
ಮೈಸೂರು: ಕೇರಳದ ವಯನಾಡು ಸೇರಿದಂತೆ ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಆಗುತ್ತಿರೋ ಕಾರಣ, ಕಾವೇರಿ ಒಡಲು ತುಂಬು ತುಳುಕುತ್ತಿದೆ. ಧಾರಾಕಾರ ಮಳೆಯಿಂದಾಗಿ ಕೆಆರ್ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರ ಪರಿಣಾಮ ಕೆಆರ್ಎಸ್ ಡ್ಯಾಂನಿಂದ ನದಿಗೆ ನೀರನ್ನು ಬಿಡಲಾಗುತ್ತಿದೆ. ಹೀಗಾಗಿ ಕಾವೇರಿ ತೀರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ: ಮೆಟ್ಟೂರು ಡ್ಯಾಂನಿಂದ ಕಾವೇರಿಗೆ ನೀರು.. ಕೃಷ್ಣೆಯಲ್ಲಿ ಕೊಚ್ಚಿ ಹೋಗ್ತಿದ್ದವನ ರಕ್ಷಣೆ; ತುಂಗಭದ್ರೆಯಿಂದ ಕಂಪ್ಲಿಗೆ ಕಂಟಕ..!
ಮೂರು ದಿನಗಳ ಹಿಂದೆ 84 ಅಡಿ ಎತ್ತರದ ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಣೆ ಮಾಡಿದ್ದರು. ಈಗ ವಯನಾಡಿನಲ್ಲಿ ಭಾರೀ ಮಳೆ ನಡುವೆ ಕಬಿನಿ ಜಲಾಶಯದಲ್ಲಿ ಆತಂಕ ಸೃಷ್ಟಿಯಾಗಿದೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕು ಬೀಚನಹಳ್ಳಿಯಲ್ಲಿರೋ ಕಬಿನಿ ಜಲಾಶಯದ ಬಲದಂಡೆ ಬಳಿ ಭಾರೀ ಪ್ರಮಾಣದ ಬಿರುಕು ಕಾಣಿಸಿದ್ದು, ನಿತ್ಯ 300 ರಿಂದ 500 ಕ್ಯೂಸೆಕ್ಸ್ ನೀರು ಪೋಲಾಗುತ್ತಿದೆ. ಕೇರಳದಲ್ಲಿ ಮಳೆ ಆಗ್ತಿರುವ ಕಾರಣ ಉಕ್ಕಿ ಹರಿಯುತ್ತಿರುವ ನದಿಗಳಿಂದ ಡ್ಯಾಂನ ಒಳಹರಿವು ಹೆಚ್ಚಳವಾಗಿದೆ. ಮತ್ತೊಂದೆಡೆ ಬಲದಂಡೆ ಬಳಿ ಭಾರೀ ಪ್ರಮಾಣದ ಬಿರುಕು ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇನ್ನು, ನೀರಾವರಿ ಇಲಾಖೆ ಬೇಜವಾಬ್ದಾರಿತನಕ್ಕೆ ಗ್ರಾಮಸ್ಥರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜೊತೆಗೆ ಬಲದಂಡೆ ನಾಲೆ ಒಡೆದರೆ ಸರಗೂರು ತಿ.ನರಸೀಪುರ, ನಂಜನಗೂಡು ಜಲಾವೃತವಾಗುವ ಸಂಕಷ್ಟ ಎದುರಾಗಿದೆ. ಹೀಗಾಗಿ ನೂರಾರು ಗ್ರಾಮಗಳು ಜಲಾವೃತವಾಗುವ ಆತಂಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಯಾವುದೇ ಅನಾಹುತ ಸಂಭವಿಸದಂತೆ ಜಿಲ್ಲಾಡಳಿತ ಅಲರ್ಟ್ ಆಗಿದೆ. ಸಾರ್ವಜನಿಕರು ತೆರಳದಂತೆ ಸೇತುವೆಯ ಎರಡು ಬದಿ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ