ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕನ್ನಡಿಗರ ಬಹುದಿನದ ಬೇಡಿಕೆ!
ಖಾಸಗಿ ಕಂಪನಿಗಳಲ್ಲಿ ರಾಜ್ಯದ ಜನರಿಗೆ ಶೇ. 100ರಷ್ಟು ಮೀಸಲಾತಿಗೆ ಅಸ್ತು
ಕೊನೆಗೂ ಕನ್ನಡಿಗರ ಬೇಡಿಕೆಗೆ ಅಸ್ತು ಎಂದ ಸಿಎಂ ಸಿದ್ದರಾಮಯ್ಯ ಸರ್ಕಾರ
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕನ್ನಡಿಗರ ಬಹುದಿನದ ಬೇಡಿಕೆ ಎಂದರೆ ಖಾಸಗಿ ಕಂಪನಿಗಳಲ್ಲಿ ರಾಜ್ಯದ ಜನರಿಗೆ ಶೇ. 100ರಷ್ಟು ಮೀಸಲಾತಿ ನೀಡಬೇಕು ಎಂಬುದು. ಕನ್ನಡಿಗರ ಈ ಬೇಡಿಕೆಗೆ ಕೊನೆಗೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತು ಎಂದಿದೆ. ಈ ಮೂಲಕ ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸ್ಪಷ್ಟ ನಿಲುವು ತಾಳಿದೆ.
ಕರ್ನಾಟಕದಲ್ಲಿರೋ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ. 100ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ಎರಡು ಕಾಯ್ದೆಗಳಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಸದ್ಯ ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿರುವ ಸರ್ಕಾರ ಪ್ರಮುಖ ಔದ್ಯೋಗಿಕ ಮೀಸಲಾತಿ ಮಸೂದೆ ಜಾರಿಗೆ ತರಲು ಮುಂದಾಗಿದೆ. ಈ ಮಸೂದೆ ಜಾರಿಯಾದ ಕೂಡಲೇ ಕರ್ನಾಟಕದಲ್ಲಿನ ಖಾಸಗಿ ಕಂಪನಿಗಳು, ಕಾರ್ಖಾನೆಗಳು ಹಾಗೂ ಎಲ್ಲಾ ಸಂಸ್ಥೆಗಳಲ್ಲೂ ಕನ್ನಡಿಗರಿಗೆ ಶೇ.50ರಿಂದ ಶೇ.75ರಷ್ಟು ಮೀಸಲಾತಿ ಸಿಗುತ್ತದೆ. ರಾಜ್ಯ ಸರ್ಕಾರದ ಈ ಮಹತ್ವದ ನಿರ್ಧಾರಕ್ಕೆ ಉದ್ಯಮಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.
ನಾಸ್ಕಾಮ್ ವಿರೋಧ..!
ಇನ್ನು, ಸಿಎಂ ಸಿದ್ದರಾಮಯ್ಯ ಸರ್ಕಾರದ ಈ ನಿರ್ಧಾರಕ್ಕೆ ನಾಸ್ಕಾಮ್ ವಿರೋಧ ವ್ಯಕ್ತಪಡಿಸಿದೆ. ಭಾರತದ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ನಾನಾ ಕಂಪನಿಗಳು ಸಾಮೂಹಿಕ ಉದ್ಯೋಗ ಕಡಿತ ಮಾಡುತ್ತಿವೆ. ಇದಕ್ಕೆ ಕಾರಣ ದೇಶದಲ್ಲಿ ಪ್ರತಿಭಾವಂತರ ಕೊರತೆ ಇದೆ. ಕರ್ನಾಟಕದಲ್ಲೂ ಪ್ರತಿಭಾವಂತರ ಕೊರತೆ ಎದ್ದು ಕಾಣುತ್ತಿದೆ. ಇದರಿಂದ ರಾಜ್ಯದಲ್ಲಿರೋ ಐಟಿ ಕಂಪನಿಗಳು ಬೇರೆ ಕರೆ ಸ್ಥಳಾಂತರ ಆಗಬಹುದು. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಕಂಪನಿಗಳ ಪ್ರತಿನಿಧಿಗಳ ಜೊತೆ ಸಮಾಲೋಚನೆ ನಡೆಸುವುದು ಒಳಿತು ಎಂದು ಪತ್ರಿಕಾ ಹೇಳಿಕೆ ನೀಡಿದೆ.
ಇದನ್ನೂ ಓದಿ: ಕನ್ನಡಿಗರ ಶೇ 75ರಷ್ಟು ಮೀಸಲಾತಿಗೆ ಮೋಹನ್ ದಾಸ್ ಪೈ, ಕಿರಣ್ ಮಜುಂದಾರ್ ಭಾರೀ ವಿರೋಧ..! ಡಿಕೆಶಿ ಕೌಂಟರ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕನ್ನಡಿಗರ ಬಹುದಿನದ ಬೇಡಿಕೆ!
ಖಾಸಗಿ ಕಂಪನಿಗಳಲ್ಲಿ ರಾಜ್ಯದ ಜನರಿಗೆ ಶೇ. 100ರಷ್ಟು ಮೀಸಲಾತಿಗೆ ಅಸ್ತು
ಕೊನೆಗೂ ಕನ್ನಡಿಗರ ಬೇಡಿಕೆಗೆ ಅಸ್ತು ಎಂದ ಸಿಎಂ ಸಿದ್ದರಾಮಯ್ಯ ಸರ್ಕಾರ
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕನ್ನಡಿಗರ ಬಹುದಿನದ ಬೇಡಿಕೆ ಎಂದರೆ ಖಾಸಗಿ ಕಂಪನಿಗಳಲ್ಲಿ ರಾಜ್ಯದ ಜನರಿಗೆ ಶೇ. 100ರಷ್ಟು ಮೀಸಲಾತಿ ನೀಡಬೇಕು ಎಂಬುದು. ಕನ್ನಡಿಗರ ಈ ಬೇಡಿಕೆಗೆ ಕೊನೆಗೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತು ಎಂದಿದೆ. ಈ ಮೂಲಕ ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸ್ಪಷ್ಟ ನಿಲುವು ತಾಳಿದೆ.
ಕರ್ನಾಟಕದಲ್ಲಿರೋ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ. 100ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ಎರಡು ಕಾಯ್ದೆಗಳಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಸದ್ಯ ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿರುವ ಸರ್ಕಾರ ಪ್ರಮುಖ ಔದ್ಯೋಗಿಕ ಮೀಸಲಾತಿ ಮಸೂದೆ ಜಾರಿಗೆ ತರಲು ಮುಂದಾಗಿದೆ. ಈ ಮಸೂದೆ ಜಾರಿಯಾದ ಕೂಡಲೇ ಕರ್ನಾಟಕದಲ್ಲಿನ ಖಾಸಗಿ ಕಂಪನಿಗಳು, ಕಾರ್ಖಾನೆಗಳು ಹಾಗೂ ಎಲ್ಲಾ ಸಂಸ್ಥೆಗಳಲ್ಲೂ ಕನ್ನಡಿಗರಿಗೆ ಶೇ.50ರಿಂದ ಶೇ.75ರಷ್ಟು ಮೀಸಲಾತಿ ಸಿಗುತ್ತದೆ. ರಾಜ್ಯ ಸರ್ಕಾರದ ಈ ಮಹತ್ವದ ನಿರ್ಧಾರಕ್ಕೆ ಉದ್ಯಮಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.
ನಾಸ್ಕಾಮ್ ವಿರೋಧ..!
ಇನ್ನು, ಸಿಎಂ ಸಿದ್ದರಾಮಯ್ಯ ಸರ್ಕಾರದ ಈ ನಿರ್ಧಾರಕ್ಕೆ ನಾಸ್ಕಾಮ್ ವಿರೋಧ ವ್ಯಕ್ತಪಡಿಸಿದೆ. ಭಾರತದ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ನಾನಾ ಕಂಪನಿಗಳು ಸಾಮೂಹಿಕ ಉದ್ಯೋಗ ಕಡಿತ ಮಾಡುತ್ತಿವೆ. ಇದಕ್ಕೆ ಕಾರಣ ದೇಶದಲ್ಲಿ ಪ್ರತಿಭಾವಂತರ ಕೊರತೆ ಇದೆ. ಕರ್ನಾಟಕದಲ್ಲೂ ಪ್ರತಿಭಾವಂತರ ಕೊರತೆ ಎದ್ದು ಕಾಣುತ್ತಿದೆ. ಇದರಿಂದ ರಾಜ್ಯದಲ್ಲಿರೋ ಐಟಿ ಕಂಪನಿಗಳು ಬೇರೆ ಕರೆ ಸ್ಥಳಾಂತರ ಆಗಬಹುದು. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಕಂಪನಿಗಳ ಪ್ರತಿನಿಧಿಗಳ ಜೊತೆ ಸಮಾಲೋಚನೆ ನಡೆಸುವುದು ಒಳಿತು ಎಂದು ಪತ್ರಿಕಾ ಹೇಳಿಕೆ ನೀಡಿದೆ.
ಇದನ್ನೂ ಓದಿ: ಕನ್ನಡಿಗರ ಶೇ 75ರಷ್ಟು ಮೀಸಲಾತಿಗೆ ಮೋಹನ್ ದಾಸ್ ಪೈ, ಕಿರಣ್ ಮಜುಂದಾರ್ ಭಾರೀ ವಿರೋಧ..! ಡಿಕೆಶಿ ಕೌಂಟರ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ