/newsfirstlive-kannada/media/media_files/2025/08/11/dogs-1-2025-08-11-13-37-48.jpg)
ನವದೆಹಲಿ: ಇತ್ತೀಚೆಗೆ ಮನುಷ್ಯರ ಮೇಲೆ ಬೀದಿ ನಾಯಿಗಳ ದಾಳಿ ಹೆಚ್ಚಾಗಿ ರೇಬಿಸ್ಗೆ ಬಲಿ ಆಗುತ್ತಿದ್ದಾರೆ. ಈ ಸಂಬಂಧ ದೆಹಲಿ ಹಾಗೂ ಎನ್ಸಿಆರ್ನಲ್ಲಿನ ಬೀದಿ ನಾಯಿಗಳನ್ನು ಹಿಡಿದು ಅವುಗಳ ಆಶ್ರಯಕ್ಕೆ ಸೇರಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಸಂಬಂಧ ಪಟ್ಟ ಕಚೇರಿಗಳು, ಅಧಿಕಾರಿಗಳು 8 ವಾರದ ಒಳಗಾಗಿ ದೆಹಲಿ ಹಾಗೂ ಎನ್ಸಿಆರ್ ಪ್ರದೇಶದ ಬೀದಿಗಳಲ್ಲಿರುವ ನಾಯಿಗಳನ್ನು ಹಿಡಿದು ಡಾಗ್ ಶೆಲ್ಟರ್ಗೆ ಹಾಕಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಂಡು ಬರುವ ನಾಯಿಗಳನ್ನು ಹಿಡಿಯಬೇಕು. ಅವುಗಳಿಗೆ ಆಶ್ರಯ ಸೌಲಭ್ಯ ಒದಗಿಸಲು ಮುನ್ಸಿಪಾಲ್ ಮತ್ತು ಇತರೆ ಏಜೆನ್ಸಿಗಳು ಕೂಡಿ ಕೆಲಸ ಮಾಡಬೇಕು. ನ್ಯಾಯಾಲಯ ನೀಡಿದ ಗಡುವಿನ ಒಳಗೆ ಕೆಲಸ ಪೂರ್ಣಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ.
ಇದನ್ನೂ ಓದಿ:BJP ಸಂಸದರನ್ನ ಖಾಲಿ ಟ್ರಂಕ್ಗೆ ಹೋಲಿಸಿ ಡಿ.ಕೆ ಶಿವಕುಮಾರ್ ಕಿಡಿ..ಕಿಡಿ.. ಏನೇನು ಹೇಳಿದರು? VIDEO
ಒಮ್ಮೆ ನಾಯಿಯನ್ನು ಆಶ್ರಯಕ್ಕೆ ಎತ್ತಿಕೊಂಡು ಹೋದ ಮೇಲೆ ಮತ್ತೆ ಬೀದಿಗೆ ತಂದು ಬಿಡಬಾರದು. ಕಾಲೋನಿಗೆ, ಬೀದಿಗೆ ಅಥವಾ ಸಾರ್ವಜನಿಕ ಸ್ಥಳಗಳಿಗೆ ನಾಯಿಗಳನ್ನು ಬಿಡಲೇಬಾರದು ಎಂದು ದೆಹಲಿ ಸರ್ಕಾರ, ಎಂಸಿಡಿ ಹಾಗೂ ಎನ್ಡಿಎಂಸಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಒಂದು ವೇಳೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಬಂದು ನಾಯಿ ವಾಪಸ್ ತೆಗೆದುಕೊಂಡು ಹೋಗಲು ಯತ್ನಿಸಿದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಎಚ್ಚರಿಕೆ ಕೂಡ ನೀಡಿದೆ.
ನಾಯಿಗಳ ಹಾವಾಳಿ ಹೆಚ್ಚಾಗಿ ರೇಬಿಸ್ ಹರಡುತ್ತಿರುವುದನ್ನು ಗಮನಿಸಿದ್ದ ಸುಪ್ರೀಂ ಕೋರ್ಟ್ ಸುಮೋಟೋ ಕೇಸ್ ದಾಖಲು ಮಾಡಿಕೊಂಡಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ ನ್ಯಾ.ಜೆ.ಬಿ ಪಾರ್ದಿವಾಲಾ ಮತ್ತು ನ್ಯಾ.ಆರ್ ಮಹದೇವನ್ ಪೀಠದಿಂದ ನಿರ್ದೇಶನ ಹೊರ ಬಿದ್ದಿದೆ. ದೆಹಲಿ ಹಾಗೂ ಹೊರವಲಯದಲ್ಲಿ 1 ದಿನಕ್ಕೆ ನಾಯಿಗಳು ಕಚ್ಚಿರುವಂತಹ 100 ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದು ರೇಬಿಸ್ಗೆ ಕಾರಣವಾಗುತ್ತಿರುವುದು ಒಂದು ಕಾರಣವಾದರೆ ಜೊತೆಗೆ ಮಕ್ಕಳು, ಹಿರಿಯ ನಾಗರಿಕರು ಭಯಾನಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ