/newsfirstlive-kannada/media/media_files/2026/01/31/nirmala-seetaraman-2026-01-31-08-04-43.jpg)
ನವದೆಹಲಿ: ಮುಂಬರುವ 2026ರ ಕೇಂದ್ರ ಬಜೆಟ್ ಮೇಲೆ ದೇಶಾದ್ಯಂತ ಭಾರಿ ನಿರೀಕ್ಷೆಗಳು ಮನೆಮಾಡಿವೆ. ಆರ್ಥಿಕ ತಜ್ಞರ ಪ್ರಕಾರ, ಈ ಬಾರಿ ಕೇಂದ್ರ ಸರ್ಕಾರವು ಮಧ್ಯಮ ವರ್ಗದವರು, ರೈತರು ಮತ್ತು ಹಿರಿಯ ನಾಗರಿಕರಿಗೆ ದೊಡ್ಡ ಮಟ್ಟದ ಕೊಡುಗೆಗಳನ್ನು ನೀಡಲು ಸಿದ್ಧತೆ ನಡೆಸುತ್ತಿದೆ. ಗ್ರಾಮೀಣ ಭಾಗದ ಆದಾಯವನ್ನು ಬಲಪಡಿಸುವುದು ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಈ ಬಜೆಟ್ನಲ್ಲಿ ಹೆಚ್ಚಿನ ಒತ್ತು ನೀಡುವ ಸಾಧ್ಯತೆಯಿದೆ.
ಈ ಬಾರಿಯ ಬಜೆಟ್ನ ಪ್ರಮುಖ ನಿರೀಕ್ಷೆಗಳು ಇಲ್ಲಿವೆ
13 ಲಕ್ಷದವರೆಗೆ ಆದಾಯ ತೆರಿಗೆ ಇಲ್ಲ..?
ಹೊಸ ಆದಾಯ ತೆರಿಗೆ ಪದ್ಧತಿಯಡಿ (New Tax Regime) ವೇತನದಾರರಿಗೆ ನೀಡಲಾಗುವ 'ಸ್ಟ್ಯಾಂಡರ್ಡ್ ಡಿಡಕ್ಷನ್' (Standard Deduction) ಮೊತ್ತವನ್ನು ಪ್ರಸ್ತುತ ಇರುವ ಮೊತ್ತದಿಂದ 1 ಲಕ್ಷ ರೂ.ಗೆ ಹೆಚ್ಚಿಸುವ ಸಾಧ್ಯತೆಯಿದೆ. ಒಂದು ವೇಳೆ ಇದು ಜಾರಿಯಾದರೆ, ವಾರ್ಷಿಕ 13 ಲಕ್ಷ ರೂಪಾಯಿಗಳವರೆಗೆ ಆದಾಯ ಹೊಂದಿರುವವರು ಯಾವುದೇ ತೆರಿಗೆ ಪಾವತಿಸಬೇಕಿಲ್ಲ. ಪ್ರಸ್ತುತ 12.75 ಲಕ್ಷ ರೂಪಾಯಿಗಳವರೆಗೆ ತೆರಿಗೆ ವಿನಾಯಿತಿ ಇದೆ. ಹಳೆಯ ತೆರಿಗೆ ಪದ್ಧತಿಯಿಂದ ಜನರನ್ನು ಹೊಸ ಪದ್ಧತಿಗೆ ಆಕರ್ಷಿಸಲು ಸರ್ಕಾರ ಈ ಕ್ರಮ ಕೈಗೊಳ್ಳಬಹುದು ಎನ್ನಲಾಗಿದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಹೆಚ್ಚಳ
ರೈತ ಸಮುದಾಯಕ್ಕೆ ಬಜೆಟ್ನಲ್ಲಿ ದೊಡ್ಡ ಉಡುಗೊರೆ ಸಿಗುವ ನಿರೀಕ್ಷೆಯಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ನೀಡಲಾಗುವ ವಾರ್ಷಿಕ ನೆರವನ್ನು 6,000 ರೂಪಾಯಿಗಳಿಂದ 9,000 ರೂಪಾಯಿಗಳಿಗೆ ಹೆಚ್ಚಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ದೇಶದ ಸುಮಾರು 11 ಕೋಟಿ ರೈತ ಕುಟುಂಬಗಳಿಗೆ ಇದರಿಂದ ನೇರ ಲಾಭವಾಗಲಿದೆ. ಇದರಿಂದ ಸರ್ಕಾರದ ಮೇಲೆ ವಾರ್ಷಿಕ ಸುಮಾರು 95,000 ಕೋಟಿ ರೂ.ಗಳ ಹೊರೆ ಬೀಳಲಿದ್ದರೂ, ಗ್ರಾಮೀಣ ಆರ್ಥಿಕತೆಗೆ ಇದು ಚೈತನ್ಯ ನೀಡಲಿದೆ.
ಇದನ್ನೂ ಓದಿ:ಡಾ.ಸಿ.ಜೆ.ರಾಯ್ ಕೇಸ್: ಐಟಿ ಅಧಿಕಾರಿಗಳ ಮೇಲೆ ಆರೋಪವಿಲ್ಲ! ಎಂಡಿ ಟಿ.ಎ. ಜೋಸೆಫ್ ನೀಡಿದ ದೂರಿನಲ್ಲೇನಿದೆ?
ವಂದೇ ಭಾರತ್ ರೈಲುಗಳ ಹಬ್ಬ!
ರೈಲ್ವೆ ಪ್ರಯಾಣಿಕರಿಗೆ 'ವೇಟಿಂಗ್ ಲಿಸ್ಟ್' ಸಮಸ್ಯೆಯಿಂದ ಮುಕ್ತಿ ನೀಡಲು ಸರ್ಕಾರ ಬೃಹತ್ ಯೋಜನೆ ರೂಪಿಸಿದೆ. 2030ರ ವೇಳೆಗೆ ರೈಲು ಟಿಕೆಟ್ ಬುಕ್ಕಿಂಗ್ನಲ್ಲಿ ವೇಟಿಂಗ್ ಲಿಸ್ಟ್ ಇಲ್ಲದಂತೆ ಮಾಡುವ ಗುರಿ ಹೊಂದಲಾಗಿದ್ದು, ಈ ಬಜೆಟ್ನಲ್ಲಿ ಸುಮಾರು 300ಕ್ಕೂ ಹೆಚ್ಚು ಹೊಸ 'ವಂದೇ ಭಾರತ್' ಮತ್ತು 'ಅಮೃತ್ ಭಾರತ್' ರೈಲುಗಳನ್ನು ಘೋಷಿಸುವ ಸಾಧ್ಯತೆಯಿದೆ. ಕಳೆದ ಬಜೆಟ್ನಲ್ಲಿ ರೈಲ್ವೆಗೆ 2.65 ಲಕ್ಷ ಕೋಟಿ ರೂ. ಅನುದಾನ ನೀಡಲಾಗಿತ್ತು, ಈ ಬಾರಿ ಈ ಮೊತ್ತ ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ.
ಒಟ್ಟಾರೆಯಾಗಿ, 2026ರ ಬಜೆಟ್ ಸಾಮಾನ್ಯ ಜನರ ಕೈಯಲ್ಲಿ ಹೆಚ್ಚಿನ ಹಣ ಉಳಿಯುವಂತೆ ಮಾಡುವ ಮತ್ತು ದೇಶದ ಮೂಲಸೌಕರ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಗುರಿಯನ್ನು ಹೊಂದಿದೆ ಎಂದು ತಜ್ಞರು ವಿಶ್ಲೇಷಿಸುತ್ತಿದ್ದಾರೆ.
ಇದನ್ನೂ ಓದಿ:ಸಪ್ತಪದಿ ತುಳಿದ ಸುಷ್ಮಾ ಶೇಖರ್.. ತಾಳಿ ಕಟ್ಟುವ ವೇಳೆ ಕಣ್ಣೀರಿಟ್ಟ ನಟಿ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us