Subscribe

0

user
  • Manage Subscription
  • Bookmarks
  • My Profile
  • Log Out
  • LIVE
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಬಿಗ್‌ ಬಾಸ್
  • ವಿದೇಶ
  • ಸ್ಪೋರ್ಟ್ಸ್
  • ಆರೋಗ್ಯ
  • ಲೈಫ್‌ಸ್ಟೈಲ್
  • ಎಜುಕೇಶನ್
  • ಟೆಕ್
  • Sign in with Email

By clicking the button, I accept the Terms of Use of the service and its Privacy Policy, as well as consent to the processing of personal data.

Don’t have an account? Signup

ad_close_btn
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸ್ಪೋರ್ಟ್ಸ್
  • ಆರೋಗ್ಯ
  • ಸಿನಿಮಾ

Powered by :

ದೇಶ ರಾಜಕೀಯ

ಕುವೆಂಪು ಸಾಧನೆಗೆ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಕೆ

ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಆಗ್ರಹಿಸಿ ದೆಹಲಿ ಕರ್ನಾಟಕ ಸಂಘದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೇಂದ್ರದ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಖಾತೆ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಲಾಗಿದೆ.

author-image
Chandramohan
17 Dec 2025 19:42 IST
Follow Us
BHARAT RATNA AWARD REQUEST TO KUVEMPU (1)

ರಾಷ್ಟ್ರಕವಿ ಕುವೆಂಪುಗೆ ಭಾರತ ರತ್ನ ಪ್ರಶಸ್ತಿ ನೀಡಿಕೆಗೆ ಕೇಂದ್ರಕ್ಕೆ ಮನವಿ

Advertisment
  • ರಾಷ್ಟ್ರಕವಿ ಕುವೆಂಪುಗೆ ಭಾರತ ರತ್ನ ಪ್ರಶಸ್ತಿ ನೀಡಿಕೆಗೆ ಕೇಂದ್ರಕ್ಕೆ ಮನವಿ
  • ದೆಹಲಿ ಕರ್ನಾಟಕ ಸಂಘ, ವಿಶ್ವಮಾನವ ಕ್ಷೇಮಾಭಿವೃದ್ದಿ ಟ್ರಸ್ಟ್ ನಿಂದ ಒತ್ತಾಯ
  • ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್‌ಗೆ ಮನವಿ ಸಲ್ಲಿಕೆ

ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸಿ.ಎಂ ನಾಗರಾಜ್ ಅವರು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಯಶಸ್ವಿಯಾಗಿಸಿದ್ದಾರೆ.  ರಾಷ್ಟ್ರಮಟ್ಟದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ . ಅಂತಹದೇ ಇತಿಹಾಸ ಸೃಷ್ಟಿ ಮಾಡುವ ಸಾಲಿಗೆ ಸೇರುವಂತಹ ಕಾರ್ಯಕ್ರಮ ಮನುಜ ಮತ ವಿಶ್ವ ಪಥ ಎಂದು ಸಾರಿದ ಪದ್ಮವಿಭೂಷಣ ಹಾಗೂ ಜ್ಞಾನಪೀಠ ಪುರಸ್ಕೃತ ರಾಷ್ಟ್ರಕವಿ ಕುವೆಂಪು ಅವರ ಸಾಧನೆ ಕೊಡುಗೆ ಕುರಿತು ವಿಚಾರ ಸಂಕೀರ್ಣವನ್ನು ದೆಹಲಿ ಕರ್ನಾಟಕ ಸಂಘದಲ್ಲಿ ಬಹು ಅರ್ಥಪೂರ್ಣವಾಗಿ ಮತ್ತು ದೊಡ್ಡ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮವು ರಾಷ್ಟ್ರಕವಿ ಕುವೆಂಪು ಅವರ ಶ್ರೇಷ್ಠ ಸಾಧನೆ ಮತ್ತು ಅತ್ಯುನ್ನತ ಕೊಡುಗೆಗಳಿಗಾಗಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಬಗ್ಗೆ ಭಾರತ ಸರ್ಕಾರಕ್ಕೆ ಮನವಿ ಮಾಡುವ ಸದುದ್ದೇಶದಿಂದ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು  ಮಾಡಿದರು . ಈ ಕಾರ್ಯಕ್ರಮದಲ್ಲಿ  ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮೀಜಿ ಮತ್ತು ಬೆಂಗಳೂರಿನ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶ್ರೀ ಡಾ. ನಿಶ್ಚಲಾನಂದನಾಥ ಮಹಾಸ್ವಾಮೀಜಿಯವರು,   ಶ್ರೀ ಮುಕ್ತಿದಾನಂದ ಜಿ ಮಹಾರಾಜ್ ರವರು ಅಧ್ಯಕ್ಷರು ಶ್ರೀರಾಮಕೃಷ್ಣ ಆಶ್ರಮ ಮೈಸೂರು ಹಾಗೂ ಶಿರಾದ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶ್ರೀ ಡಾ. ನಂಜಾವದೂತ ಮಹಾ ಸ್ವಾಮೀಜಿ ಹಾಗೂ ಮಾದಾರ ಚೆನ್ನಯ್ಯ ಗುರುಪೀಠದ  ಜಗದ್ಗುರು ಶ್ರೀ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿರವರು,  ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್  ರವರು,  ಕೇಂದ್ರ ಸರ್ಕಾರದ ಉಕ್ಕು ಮತ್ತು ಭಾರಿ ಕೈಗಾರಿಕಾ ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಕೇಂದ್ರ ಸರ್ಕಾರದ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಖಾತೆ ಸಚಿವ ಗಜೇಂದ್ರ ಸಿಂಗ ಶೆಖಾವತ್ , ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಗಡಿನಾಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಸಿ.ಸೋಮಶೇಖರ್, ಐಟಿ ಇಲಾಖೆಯ ಆಂಧ್ರದ ಪ್ರಧಾನ ಆಯುಕ್ತ ಜಯರಾಮ ರಾಯಪುರ, ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ದಿ ಟ್ರಸ್ಟ್‌ನ ಅಧ್ಯಕ್ಷ ಎಚ್‌.ಕೆ.ರಾಮು ಅವರು ಭಾಗವಹಿಸಿ, ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದಂತ ಎಲ್ಲಾ ಸ್ವಾಮೀಜಿಗಳು ಹಾಗೂ ಭಾರತ ಸರ್ಕಾರದ ಮಾನ್ಯ ಸಚಿವರು ರಾಷ್ಟ್ರಕವಿ ಕುವೆಂಪು ಅವರ ಸಾಧನೆ ಮತ್ತು ಕೊಡುಗೆಗಳ ಬಗ್ಗೆ ಅವರ ಕಾವ್ಯ ಕಥನ ಮತ್ತು ರಾಷ್ಟ್ರಕವಿ ಕುವೆಂಪು ಅವರು ಬರೆದ ಮೇರು ಕೃತಿ ಶ್ರೀ ರಾಮಾಯಣ ದರ್ಶನಂ ಕುರಿತು ಅದ್ಭುತವಾಗಿ ಮಾತನಾಡಿ ಕುವೆಂಪು ಅವರ ಸಾಧನೆ ಮತ್ತು ಕೊಡುಗೆಗಳ ಬಗ್ಗೆ ಕೇಳುಗರ ಮೈನವಿರೇಳಿಸುವಂತೆ ಅದ್ಭುತವಾಗಿ ವರ್ಣಿಸಿದರು. 

ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಖಾತೆ ಸಚಿವ  ಗಜೇಂದ್ರ ಸಿಂಗ್ ಶೇಖಾವತ್ ಅವರು ಭಾರತ ಸರ್ಕಾರದ ಪರವಾಗಿ ರಾಷ್ಟ್ರ ಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡುವಂತೆ ದೆಹಲಿ ಕರ್ನಾಟಕ ಸಂಘದ ಪರವಾಗಿ ನೆರೆದಿದ್ದ ಎಲ್ಲಾ ಮುಖ್ಯ ಅತಿಥಿಗಳಿಂದ ಮಾಡಿದ ಮನವಿಯನ್ನು ಸ್ವೀಕರಿಸಿದರು.  ಗಜೇಂದ್ರ ಸಿಂಗ್ ಶೆಖಾವತ್‌  ಸಹ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ತುಂಬಾ ಅಗಾಧವಾದ ಭಾಷಣ ಮಾಡಿ ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ತಾವು ಸಹ ಭಾರತ ಸರ್ಕಾರಕ್ಕೆ ಮನವಿ ಮಾಡುವುದಾಗಿ ಆಶ್ವಾಸನೆ ನೀಡಿದರು. 

BHARAT RATNA AWARD REQUEST TO KUVEMPU




ಈ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಾಧನೆ ಮತ್ತು ಕೊಡುಗೆ ಬಗ್ಗೆ ಒಂದು ಕಿರು ಚಿತ್ರವನ್ನು ಹಾಗೂ ಸಾಹಿತಿ ಚದುರಂಗ ರವರು ರಚಿಸಿ ನಿರ್ದೇಶಿಸಿದಂತ ಒಂದು ಸಾಕ್ಷ್ಯಚಿತ್ರ ವನ್ನು ಪ್ರದರ್ಶಿಸಲಾಯಿತು. ಈ ಕಾರ್ಯಕ್ರಮಕ್ಕೆ ಕರ್ನಾಟಕದ ಮೈಸೂರು, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ಬಳ್ಳಾರಿ, ಮಂಡ್ಯದಿಂದ ಮತ್ತು ದೆಹಲಿಯ ಸ್ಥಳೀಯ ಕನ್ನಡಿಗರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. 

ಈ ಕಾರ್ಯಕ್ರಮವನ್ನು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ ಮೈಸೂರು ಹಾಗೂ ದೆಹಲಿ ಕರ್ನಾಟಕ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿತ್ತು.
 ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರು ದಿನರಾತ್ರಿ ಎನ್ನದೆ ಕಾರ್ಯಕ್ರಮವು ಅಚ್ಚುಕಟ್ಟಾಗಿ ನಡೆಯಲು ಎಲ್ಲರನ್ನೂ ಒಗ್ಗೂಡಿಸಿ ಈ ಕಾರ್ಯಕ್ರಮದ ಯಶಸ್ಸಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಅವರೇ ಕಾರಣಿಕರ್ತರಾಗಿದ್ದಾರೆ. ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರಾದ  ಸಿಎಂ ನಾಗರಾಜ್ ಅವರು ಸ್ವಾಗತ ಭಾಷಣವನ್ನು ಮಾಡಿದರು .  ಈ ಕಾರ್ಯಕ್ರಮದ ನಿರೂಪಣೆಯನ್ನು ದೆಹಲಿ ಕರ್ನಾಟಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾದ  ಕೆ.ಎಸ್ ಮೂರ್ತಿ ಅವರು ಮಾಡಿದರು.

BHARAT RATNA AWARD REQUEST TO KUVEMPU (2)




ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Bharat ratna award Demanded for Kuvempu at Delhi
Advertisment
FOLLOW NEWSFIRST FOR
LATEST UPDATES
YouTubeFacebookTwitterInstagram
Subscribe to our Newsletter! Be the first to get exclusive offers and the latest news
logo

Related Articles
Read the Next Article
Latest Stories
Subscribe to our Newsletter! Be the first to get exclusive offers and the latest news



Quick Links

  • IC
  • GRIEVANCE
  • FEED
  • CONTACT US

Olecom Media Pvt Ltd. © 2025

Powered by