/newsfirstlive-kannada/media/media_files/2025/10/24/maharashtra-doctor-suicide-2025-10-24-18-10-35.jpg)
ಕೈಯ ಮೇಲೆ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
ಐದು ತಿಂಗಳಲ್ಲಿ ನಾಲ್ಕು ಬಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ (SI) ನಿಂದ ಅತ್ಯಾಚಾರಕ್ಕೊಳಗಾಗಿದ್ದ ಮಹಿಳಾ ವೈದ್ಯೆಯೊಬ್ಬರು ಗುರುವಾರ ರಾತ್ರಿ ಮಹಾರಾಷ್ಟ್ರದ ಸತಾರಾದ ಜಿಲ್ಲಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತನ್ನ ಎಡ ಅಂಗೈಯಲ್ಲಿ ಬರೆದಿರುವ ಟಿಪ್ಪಣಿಯಲ್ಲಿ, ಸಂತ್ರಸ್ತೆ ಎಸ್ಐ ಗೋಪಾಲ್ ಬಡ್ನೆ ಅವರ ಮೇಲೆ ದೈಹಿಕ ಮತ್ತು ಮಾನಸಿಕ ಕಿರುಕುಳದ ಆರೋಪ ಹೊರಿಸಿದ್ದಾಳೆ . ಅವರ ನಿರಂತರ ಕಿರುಕುಳವು ತನ್ನನ್ನು ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದೆ ಎಂದು ಹೇಳಿದ್ದಾಳೆ. ಬಡ್ನೆಯನ್ನು ಈಗ ಅಮಾನತುಗೊಳಿಸಲಾಗಿದೆ. ಟಿಪ್ಪಣಿಯಲ್ಲಿ, ಪೊಲೀಸ್ ಅಧಿಕಾರಿ ಪ್ರಶಾಂತ್ ಬಂಕರ್ ಅವರ ಮೇಲೆ ಮಾನಸಿಕ ಕಿರುಕುಳದ ಆರೋಪವನ್ನೂ ಅವರು ಹೊರಿಸಿದ್ದಾರೆ.
/filters:format(webp)/newsfirstlive-kannada/media/media_files/2025/10/24/maharashtra-doctor-suicide02-2025-10-24-18-12-43.jpg)
ಆತ್ಮಹತ್ಯೆ ಮಾಡಿಕೊಂಡ ವೈದ್ಯೆ ಹಾಗೂ ಕಾರಣನಾದ ಇನ್ಸ್ ಪೆಕ್ಟರ್ ಗೋಪಾಲ್ ಬಡ್ನೆ
"ನಾನು ಸಾಯಲು ಪೊಲೀಸ್ ಇನ್ಸ್ಪೆಕ್ಟರ್ ಗೋಪಾಲ್ ಬಡ್ನೆ ಕಾರಣ. ಅವರು ನಾಲ್ಕು ಬಾರಿ ನನ್ನ ಮೇಲೆ ಅತ್ಯಾಚಾರ ಮಾಡಿದರು. ಅವರು ಐದು ತಿಂಗಳಿಗೂ ಹೆಚ್ಚು ಕಾಲ ನನ್ನನ್ನು ಅತ್ಯಾಚಾರ, ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಒಳಪಡಿಸಿದರು" ಎಂದು ಟಿಪ್ಪಣಿಯಲ್ಲಿ ಹೇಳಲಾಗಿದೆ.
ಫಾಲ್ಟನ್ ಉಪ-ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೈದ್ಯರು ಜೂನ್ 19 ರಂದು ಫಾಲ್ಟನ್ ಉಪ-ವಿಭಾಗೀಯ ಕಚೇರಿಯ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಅವರಿಗೆ ಬರೆದ ಪತ್ರದಲ್ಲಿ ಇದೇ ರೀತಿಯ ಆರೋಪಗಳನ್ನು ಎತ್ತಿದ್ದರು.
ತನ್ನ ಆತ್ಮಹತ್ಯೆಗೆ ತಿಂಗಳುಗಳ ಮೊದಲು ಡಿಎಸ್ಪಿಗೆ ಬರೆದ ಪತ್ರದಲ್ಲಿ, ಮಹಿಳಾ ವೈದ್ಯೆ, ಫಾಲ್ಟನ್ ಗ್ರಾಮೀಣ ಪೊಲೀಸ್ ಇಲಾಖೆಯ ಇಬ್ಬರು ಪೊಲೀಸ್ ಅಧಿಕಾರಿಗಳ ಮೇಲೆ ಕಿರುಕುಳದ ಆರೋಪ ಹೊರಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದರು.
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಆದೇಶದ ಮೇರೆಗೆ ಬದ್ನೆ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಗುರುವಾರ ರಾತ್ರಿ ನಡೆದ ಆತ್ಮಹತ್ಯೆ ಶುಕ್ರವಾರ ಮಹಾರಾಷ್ಟ್ರ ರಾಜ್ಯದಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಯಿತು.
ಆತ್ಮಹತ್ಯೆ ಪತ್ರದ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕ ವಿಜಯ್ ನಾಮದೇವರಾವ್ ವಡೆಟ್ಟಿವಾರ್ ಆಡಳಿತಾರೂಢ ಮಹಾಯುತಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
"ರಕ್ಷಕರು ಪರಭಕ್ಷಕರಾದಾಗ! ಪೊಲೀಸರ ಕರ್ತವ್ಯ ರಕ್ಷಿಸುವುದು, ಆದರೆ ಅವರೇ ಮಹಿಳಾ ವೈದ್ಯರನ್ನು ಶೋಷಿಸುತ್ತಿದ್ದರೆ, ನ್ಯಾಯ ಹೇಗೆ ಸಿಗುತ್ತದೆ? ಈ ಹುಡುಗಿ ಈ ಹಿಂದೆ ದೂರು ನೀಡಿದಾಗ ಏಕೆ ಕ್ರಮ ಕೈಗೊಳ್ಳಲಿಲ್ಲ? ಮಹಾಯುತಿ ಸರ್ಕಾರ ಪೊಲೀಸರನ್ನು ಪದೇ ಪದೇ ರಕ್ಷಿಸುತ್ತಿದೆ, ಇದು ಪೊಲೀಸ್ ದೌರ್ಜನ್ಯ ಹೆಚ್ಚಳಕ್ಕೆ ಕಾರಣವಾಗಿದೆ" ಎಂದು ಅವರು X ನಲ್ಲಿ ಪೋಸ್ಟ್ನಲ್ಲಿ ಮಾಡಿದ್ದಾರೆ.
जेव्हा रक्षकच बनतो भक्षक!
— Vijay Wadettiwar (@VijayWadettiwar) October 24, 2025
फलटण येथील उपजिल्हा रुग्णालयातील महिला डॉक्टरने फाशी घेत आत्महत्या केली. आत्महत्या करताना त्यांनी हातावर सुसाईड नोट लिहिली आहे. त्यात उल्लेख आहे, पोलीस निरीक्षक गोपाल बदने याने त्यांच्यावर चार वेळा बलात्कार केला, तर पोलीस प्रशांत बनकर याने त्यांना सतत… pic.twitter.com/LZVj9HOIEN
"ಈ ಪ್ರಕರಣದಲ್ಲಿ ತನಿಖೆಗೆ ಆದೇಶಿಸುವುದು ಸಾಕಾಗುವುದಿಲ್ಲ. ಈ ಪೊಲೀಸ್ ಅಧಿಕಾರಿಗಳನ್ನು ಕೆಲಸದಿಂದ ವಜಾಗೊಳಿಸಬೇಕು, ಇಲ್ಲದಿದ್ದರೆ ಅವರು ತನಿಖೆಯ ಮೇಲೆ ಒತ್ತಡ ಹೇರಬಹುದು. ವೈದ್ಯೆಯ ಹಿಂದಿನ ದೂರನ್ನು ಏಕೆ ಗಂಭೀರವಾಗಿ ಪರಿಗಣಿಸಲಾಗಿಲ್ಲ? ಅದನ್ನು ನಿರ್ಲಕ್ಷಿಸಿದವರು ಮತ್ತು ಈ ಪೊಲೀಸ್ ಅಧಿಕಾರಿಗಳನ್ನು ರಕ್ಷಿಸಿದವರು ಕ್ರಮ ಎದುರಿಸಬೇಕಾಗುತ್ತದೆ. ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವವರೆಗೆ, ಪೊಲೀಸ್ ದೌರ್ಜನ್ಯವನ್ನು ತಡೆಯಲಾಗುವುದಿಲ್ಲ" ಎಂದು ವಿಜಯ ವಡೆಟ್ಟಿವಾರ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us