/newsfirstlive-kannada/media/media_files/2026/01/26/republic-day-10-2026-01-26-12-32-53.jpg)
/newsfirstlive-kannada/media/media_files/2026/01/26/republic-day-9-2026-01-26-12-33-04.jpg)
ದೇಶದಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದ್ದಾರೆ.
/newsfirstlive-kannada/media/media_files/2026/01/26/republic-day-8-2026-01-26-12-33-39.jpg)
ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಯುದ್ಧ ಸ್ಮಾರಕದಲ್ಲಿ ಪುಷ್ಪಗುಚ್ಛ ಇರಿಸಿ ನಂತರ ರಾಷ್ಟ್ರಧ್ವಜ ಹಾರಿಸಿದ್ದಾರೆ. ಇನ್ನು ವಂದೇ ಮಾತರಂ ಗೀತೆಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆ ಹಾಗೂ ಆಪರೇಷನ್ ಸಿಂಧೂರ ವಿಷಯಗಳ ಮೇಲೆ ಈ ಬಾರಿ ಗಣರಾಜ್ಯೋತ್ಸವ ಆಚರಿಸಲಾಗಿದೆ.
/newsfirstlive-kannada/media/media_files/2026/01/26/republic-day-7-2026-01-26-12-34-10.jpg)
ಪ್ರತಿ ವರ್ಷ ಗಣರಾಜ್ಯೋತ್ಸವಕ್ಕೆ ಒರ್ವ ವಿದೇಶಿ ಗಣ್ಯ ವ್ಯಕ್ತಿಯನ್ನು ಅತಿಥಿಯಾಗಿ ಆಹ್ವಾನಿಸಲಾಗಿದೆ. ಈ ವರ್ಷ ವಿದೇಶಿ ಅತಿಥಿಯಾಗಿ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೋ ಕೋಸ್ಟಾ ಭಾಗಿ ಆಗಿದ್ದಾರೆ.
/newsfirstlive-kannada/media/media_files/2026/01/26/republic-day-6-2026-01-26-12-34-25.jpg)
ಇವರನ್ನ ಪದ್ಧತಿಯಂತೆ 21 ಗನ್ ಸೆಲ್ಯೂಟ್, ಗಾರ್ಡ್ ಆಫ್ ಆನರ್ ಮೂಲಕ ಗೌರವಿಸಲಾಗಿದೆ. ನಾಳೆ ನಡೆಯುವ 16ನೇ ಭಾರತ ಯೂರೋಪಿಯನ್ ಯೂನಿಯನ್ ಶೃಂಗಸಭೆಯಲ್ಲೂ ಲೇಯೆನ್ ಮತ್ತು ಕೋಸ್ಟಾ ಯೂರೋಪಿಯನ್ ಯೂನಿಯನ್ನ ಪ್ರತಿನಿಧಿಗಳಾಗಿ ಭಾಗವಹಿಸಲಿದ್ದಾರೆ.
/newsfirstlive-kannada/media/media_files/2026/01/26/republic-day-5-2026-01-26-12-34-43.jpg)
ಈ ಶೃಂಗಸಭೆಯಲ್ಲಿ ಮಹತ್ವದ ಮುಕ್ತ ವ್ಯಾಪಾರ ಒಪ್ಪಂದ ಚರ್ಚೆಗಳು ಹಾಗೂ ಮದರ್ ಆಫ್ ಆಲ್ ಡೀಲ್ಸ್ ಬಗ್ಗೆ ಮಾತುಕತೆ ನಡೆಯುವ ನಿರೀಕ್ಷೆ ಹೆಚ್ಚಿದೆ. ಇನ್ನು ದೆಹಲಿಗೆ ಬಂದ ಅಥಿತಿಗಳನ್ನ ಭಾರತ ವಿದೇಶಾಂಗ ಸಚಿವ ಜಯಶಂಕರ್ ಭೇಟಿಯಾಗಿ ಮಾತುಕತೆನಡೆಸಿದ್ದಾರೆ.
/newsfirstlive-kannada/media/media_files/2026/01/26/republic-day-3-2026-01-26-12-34-58.jpg)
ಗಣರಾಜ್ಯೋತ್ಸವ ಹಿನ್ನೆಲೆ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭಾಶಯಗಳನ್ನ ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿ, ದೇಶದ ಎಲ್ಲಾ ಜನತೆಗೂ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.
/newsfirstlive-kannada/media/media_files/2026/01/26/republic-day-2-2026-01-26-12-35-18.jpg)
ಭಾರತದ ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ರಾಷ್ಟ್ರೀಯ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಸಂಕಲ್ಪವು ಇನ್ನಷ್ಟು ಬಲಗೊಳ್ಳಲಿ ಎಂದು ತಿಳಿಸಿದ್ದಾರೆ.
/newsfirstlive-kannada/media/media_files/2026/01/26/republic-day-1-2026-01-26-12-35-29.jpg)
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us