/newsfirstlive-kannada/media/post_attachments/wp-content/uploads/2024/05/rain24.jpg)
ಮುಂಗಾರು​ ಬಳಿಕ ಮೊದಲ ಬಾರಿಗೆ ಅರಬ್ಬಿ ಸಮುದ್ರದಲ್ಲಿ ‘ಶಕ್ತಿ’ ಚಂಡ ಮಾರುತದ ಅಬ್ಬರ ಜೋರಾಗಿದ್ದು, ಮಹಾರಾಷ್ಟ್ರದಲ್ಲಿ ಹೈ-ಅಲರ್ಟ್​ ಘೋಷಿಸಲಾಗಿದೆ.
ಅಕ್ಟೋಬರ್​​ 7ರ ವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದ್ದು, ಈ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಈಶಾನ್ಯ ಅರೇಬಿಯನ್ ಸಮುದ್ರದಲ್ಲಿ ಚಂಡ ಮಾರುತದ ತೀವ್ರಗೊಂಡಿದ್ದು, ಗಂಟೆಗೆ 18 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಹೀಗಾಗಿ ಅಕ್ಟೋಬರ್ 6ರಂದು ಬೆಳಗಿನ ಜಾವ ಚಂಡಮಾರುತವು ಗುಜರಾತ್ ಕಡೆಗೆ ಬೀಸುವ ನಿರೀಕ್ಷೆಯಿದೆ.
ಇದನ್ನೂ ಓದಿ:ಮಕ್ಕಳಿಗೆ ವಿಷಕಾರಿ ಸಿರಪ್ ನೀಡಿದ್ದ ಡಾ. ಸೋನಿ ಬಂಧನ, ಪ್ರಕರಣಕ್ಕೆ ಮೇಜರ್ ಟ್ವಿಸ್ಟ್
ಅರಬ್ಬಿ ಸಮುದ್ರದಲ್ಲಿ ಶಕ್ತಿ ಸೈಕ್ಲೋನ್​ನಿಂದಾಗಿ, ಮಹಾರಾಷ್ಟ್ರ, ಗುಜರಾತ್ ರಾಜ್ಯದ ಕರಾವಳಿ ತೀರದಲ್ಲಿ ಚಂಡಮಾರುತದ ಅಬ್ಬರ ಜೋರಾಗಿದೆ. ಶಕ್ತಿ ಸೈಕ್ಲೋನ್​ನಿಂದಾಗಿ ಗಂಟೆಗೆ 100 ಕಿಲೋಮೀಟರ್ ವೇಗವಾಗಿ ಗಾಳಿ ಬೀಸುತ್ತಿದೆ. ಹೀಗಾಗಿ ಮುಂಬೈ ಕರಾವಳಿ ತೀರ, ಗುಜರಾತ್ ತೀರದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ.
ಅಕ್ಟೋಬರ್ 7 ರವರೆಗೆ ಭಾರಿ ಮಳೆಯ ಮುನ್ಸೂಚನೆಯಿದ್ದು, ಮುಂಬೈನ ತಗ್ಗು ಪ್ರದೇಶಗಳಲ್ಲಿ ಜನರನ್ನ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಮಹಾರಾಷ್ಟ್ರದ ಮುಂಬೈ, ಥಾಣೆ, ರತ್ನಗಿರಿ, ಪಾಲ್ಘರ್, ಸಿಂಧು ದುರ್ಗ ಸೇರಿದಂತೆ ಅನೇಕ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ