/newsfirstlive-kannada/media/media_files/2026/02/27/mla-vinay-kulkarni-2026-02-27-12-54-08.jpg)
ಶಾಸಕ ವಿನಯ ಕುಲಕರ್ಣಿಗೆ ಜಾಮೀನು ಮಂಜೂರು
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರಾಗಿದೆ. ಸುಪ್ರೀಂಕೋರ್ಟ್ ನ ಜಸ್ಚೀಸ್ ಸಂಜಯ್ ಕರೋಲ್ ಅವರ ಪೀಠವು ಜಾಮೀನು ಮಂಜೂರು ಮಾಡಿದೆ. ಕೊಲೆ ಕೇಸ್ ವಿಚಾರಣೆಯನ್ನು ಮುಂದಿನ 2 ತಿಂಗಳಲ್ಲಿ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್, ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ. ವಿನಯ ಕುಲಕರ್ಣಿಗೆ ಸಾಕ್ಷ್ಯನಾಶ ಮಾಡಿದ ಆರೋಪದ ಹಿನ್ನಲೆಯಲ್ಲಿ ಈ ಹಿಂದೆ ಸುಪ್ರೀಂಕೋರ್ಟ್ ಜಾಮೀನು ರದ್ದುಪಡಿಸಿತ್ತು. ಹೀಗಾಗಿ ವಿನಯ ಕುಲಕುರ್ಣಿ ಕೋರ್ಟ್ ಗೆ ಶರಣಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು.
ಈಗ ಮತ್ತೆ ಸುಪ್ರೀಂಕೋರ್ಟ್ ನಿಂದ ಶಾಸಕ ವಿನಯ ಕುಲಕರ್ಣಿಗೆ ಜಾಮೀನು ಮಂಜೂರಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us