16ನೇ ವಯಸ್ಸಿನಿಂದಲೇ ಸಂಘಟನೆ, ಹೋರಾಟ.. CP ರಾಧಾಕೃಷ್ಣನ್ ಯಾರು?

ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ (CP Radhakrishnan) ಅವರು ಎನ್‌ಡಿಎ ಒಕ್ಕೂಟದ ಉಪರಾಷ್ಟ್ರಪತಿ (Vice President) ಅಭ್ಯರ್ಥಿಯಾಗಲಿದ್ದಾರೆ. ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ಮಹತ್ವದ ಘೋಷಣೆ ಮಾಡಿದ್ದಾರೆ.

author-image
Ganesh Kerekuli
cp radhakrishnan (3)
Advertisment

ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ (CP Radhakrishnan) ಅವರು ಎನ್‌ಡಿಎ ಒಕ್ಕೂಟದ ಉಪರಾಷ್ಟ್ರಪತಿ (Vice President) ಅಭ್ಯರ್ಥಿಯಾಗಲಿದ್ದಾರೆ. ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ಮಹತ್ವದ ಘೋಷಣೆ ಮಾಡಿದ್ದಾರೆ.

ಯಾರು ಸಿ.ಪಿ.ರಾಧಾಕೃಷ್ಣನ್..? 

ಸಿ.ಪಿ ರಾಧಾಕೃಷ್ಣನ್ ಅವರ ಪೂರ್ಣ ಹೆಸರು, ಚಂದ್ರಾಪುರಂ ಪೊನ್ನುಸಾಮಿ ರಾಧಾಕೃಷ್ಣನ್. ತಮಿಳುನಾಡು ಮೂಲದ ಇವರು ತಿರುಪುರದಲ್ಲಿ ಅಕ್ಟೋಬರ್ 20, 1957ರಲ್ಲಿ ಜನಿಸಿದರು. ಕೇವಲ 16ನೇ ವಯಸ್ಸಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಜನಸಂಘದೊಂದಿಗೆ ಗುರುತಿಸಿಕೊಂಡು ರಾಜಕೀಯ ಜೀವನ ಪ್ರಾರಂಭಿಸಿದರು. ನಂತರದ ದಿನಗಳಲ್ಲಿ ರಾಧಾಕೃಷ್ಣನ್ ಬಿಜೆಪಿ ಸೇರಿದರು.

ಇದನ್ನೂ ಓದಿ: ಕೇಂದ್ರ ಸರ್ಕಾರದ ಜೊತೆಗಿನ ಕಿತ್ತಾಟದ ಕಾರಣಕ್ಕೆ ಉಪರಾಷ್ಟ್ರಪತಿ ಸ್ಥಾನಕ್ಕೆ ಧನಕರ್ ರಾಜೀನಾಮೆ..!

cp radhakrishnan (2)

1996 ರಲ್ಲಿ ತಮಿಳುನಾಡಿನ ಬಿಜೆಪಿ ಕಾರ್ಯದರ್ಶಿಯಾಗಿ ನೇಮಿಸಲಾಯಿತು. 1998 ಮತ್ತು 1999 ರಲ್ಲಿ ಕೊಯಮತ್ತೂರು ಲೋಕಸಭಾ ಸದಸ್ಯರಾಗಿ (MP) ಆಯ್ಕೆಯಾದರು. 2003 ರಿಂದ 2006 ರವರೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಉಪರಾಷ್ಟ್ರಪತಿ ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ? ಯಾರಿಗೆಲ್ಲಾ ವೋಟ್ ಹಾಕುವ ಹಕ್ಕಿದೆ ಗೊತ್ತಾ?

cp radhakrishnan



2004ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸಂಸದೀಯ ನಿಯೋಗದ ನೇತೃತ್ವವಹಿಸಿ ಭಾಷಣ ಮಾಡಿದ್ದಾರೆ. ಮಹಾರಾಷ್ಟ್ರದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಜಾರ್ಖಂಡ್​ನ ರಾಜ್ಯಪಾಲರಾಗಿದ್ದರು. ಫೆಬ್ರವರಿ 18, 2023 ರಿಂದ ಜುಲೈ 30, 2024 ರವರೆಗೆ ಜಾರ್ಖಂಡ್‌ನ ರಾಜ್ಯಪಾಲರಾಗಿದ್ದರು. ಈ ಅವಧಿಯಲ್ಲಿ (ಮಾರ್ಚ್ 2024 ರಿಂದ ಜುಲೈ/ಆಗಸ್ಟ್ 2024 ರವರೆಗೆ) ತೆಲಂಗಾಣ ಮತ್ತು ಪುದುಚೇರಿಗೆ ಹೆಚ್ಚುವರಿ ಉಸ್ತುವಾರಿ ಹೊಂದಿದ್ದರು.

ಸೆಪ್ಟೆಂಬರ್ 9 ರಂದು ಎಲೆಕ್ಷನ್..!

ಜಗದೀಪ್‌ ಧನಕರ್ ಅವರ ಹಠಾತ್‌ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಹುದ್ದೆಗೆ ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ. ಎನ್​ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸಿ.ಪಿ ರಾಧಾಕೃಷ್ಣನ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 21. ವಿರೋಧ ಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಘೋಷಿಸಿದರೆ ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಎನ್‌ಡಿಎ ಸದಸ್ಯರು ಹೆಚ್ಚಿದ್ದಾರೆ. ಹೀಗಾಗಿ ಆಡಳಿತಾರೂಢ ಮೈತ್ರಿಕೂಟದ ಅಭ್ಯರ್ಥಿಯ ಗೆಲ್ಲುವುದು ಖಚಿತವಾಗಿದೆ.

ಇದನ್ನೂ ಓದಿ:NDA ಇಂದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲರ ಹೆಸರು ಘೋಷಣೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

CP Radhakrishnan
Advertisment