ಜನರ ಮುಖದಲ್ಲಿ ಮಂದಹಾಸ ಮೂಡಿಸಿದ ಹವಾಮಾನ ಇಲಾಖೆ
ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಬಿರು ಬಿಸಿಲಿನ ತಾಪಮಾನ
ಬಿಸಿಲಿನ ಗುಂಗಿನಲ್ಲಿದ್ದ ಜನರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ
ದೇಶದಲ್ಲಿ ದಿನದಿಂದ ದಿನಕ್ಕೆ ಬಿರು ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಬಿಸಿಲಿನ ಬೇಗೆಗೆ ಕಂಗಾಲಾಗಿದ್ದ ಜನರು ಮನೆಯಿಂದ ಆಚೆ ಬರೋದಕ್ಕೆ ಭಯ ಪಡುವಂತ ಸ್ಥಿತಿ ನಿರ್ಮಾಣವಾಗಿದೆ. ಆದರೆ ಇದೇ ಗುಂಗಿನಲ್ಲಿದ್ದ ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ.
ಇದನ್ನೂ ಓದಿ: ಹೈದರಾಬಾದ್ ವಿರುದ್ಧ ರೋಚಕ ಪಂದ್ಯ; ಆರ್ಸಿಬಿಯನ್ನು ಗೆಲ್ಲಿಸಲು ಅಚ್ಚರಿ ಪ್ಲೇಯರ್ ಎಂಟ್ರಿ
ನೈಋತ್ಯ ಮುಂಗಾರು (ಜೂನ್-ಸೆಪ್ಟೆಂಬರ್) 2024 ರಲ್ಲಿ #ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.
ಮೂಲ IMD. pic.twitter.com/hTrCE2wEMX— Karnataka State Natural Disaster Monitoring Centre (@KarnatakaSNDMC) April 15, 2024
ಹೌದು, ಬಿರು ಬಿಸಿಲಿನ ಬೇಗೆಗೆ ಹೈರಾಣಾಗಿದ್ದವರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡುವ ಮೂಲಕ ಜನರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಾಮಾನ್ಯಕ್ಕಿಂತ ಅಧಿಕ ಪ್ರಮಾಣದಲ್ಲಿ ಕಂಡುಬರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವರ್ಷದ ಮಾನ್ಸೂನ್ ಋತುವಿನ ಅವಧಿಯಲ್ಲಿ ಹವಾಮಾನ ಪರಿಸ್ಥಿತಿಗಳು ಅಭಿವೃದ್ಧಿಗೊಳ್ಳುತ್ತಿರುವುದು ಕಂಡುಬರುತ್ತದೆ. ಜೂನ್-ಸೆಪ್ಟೆಂಬರ್ ವೇಳೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.
ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರ್ಷದ ಮೊದಲ ಮಳೆಯಾಗಿದೆ. ವಿಜಯಪುರ, ದಾವಣಗೆರೆ, ಶಿವಮೊಗ್ಗ, ಕೊಡಗು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಇನ್ನು ಮುಂದಿನ ತಿಂಗಳಾದ ಜೂನ್-ಸೆಪ್ಟೆಂಬರ್ ವೇಳೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಜನರ ಮುಖದಲ್ಲಿ ಮಂದಹಾಸ ಮೂಡಿಸಿದ ಹವಾಮಾನ ಇಲಾಖೆ
ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಬಿರು ಬಿಸಿಲಿನ ತಾಪಮಾನ
ಬಿಸಿಲಿನ ಗುಂಗಿನಲ್ಲಿದ್ದ ಜನರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ
ದೇಶದಲ್ಲಿ ದಿನದಿಂದ ದಿನಕ್ಕೆ ಬಿರು ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಬಿಸಿಲಿನ ಬೇಗೆಗೆ ಕಂಗಾಲಾಗಿದ್ದ ಜನರು ಮನೆಯಿಂದ ಆಚೆ ಬರೋದಕ್ಕೆ ಭಯ ಪಡುವಂತ ಸ್ಥಿತಿ ನಿರ್ಮಾಣವಾಗಿದೆ. ಆದರೆ ಇದೇ ಗುಂಗಿನಲ್ಲಿದ್ದ ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ.
ಇದನ್ನೂ ಓದಿ: ಹೈದರಾಬಾದ್ ವಿರುದ್ಧ ರೋಚಕ ಪಂದ್ಯ; ಆರ್ಸಿಬಿಯನ್ನು ಗೆಲ್ಲಿಸಲು ಅಚ್ಚರಿ ಪ್ಲೇಯರ್ ಎಂಟ್ರಿ
ನೈಋತ್ಯ ಮುಂಗಾರು (ಜೂನ್-ಸೆಪ್ಟೆಂಬರ್) 2024 ರಲ್ಲಿ #ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.
ಮೂಲ IMD. pic.twitter.com/hTrCE2wEMX— Karnataka State Natural Disaster Monitoring Centre (@KarnatakaSNDMC) April 15, 2024
ಹೌದು, ಬಿರು ಬಿಸಿಲಿನ ಬೇಗೆಗೆ ಹೈರಾಣಾಗಿದ್ದವರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡುವ ಮೂಲಕ ಜನರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಾಮಾನ್ಯಕ್ಕಿಂತ ಅಧಿಕ ಪ್ರಮಾಣದಲ್ಲಿ ಕಂಡುಬರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವರ್ಷದ ಮಾನ್ಸೂನ್ ಋತುವಿನ ಅವಧಿಯಲ್ಲಿ ಹವಾಮಾನ ಪರಿಸ್ಥಿತಿಗಳು ಅಭಿವೃದ್ಧಿಗೊಳ್ಳುತ್ತಿರುವುದು ಕಂಡುಬರುತ್ತದೆ. ಜೂನ್-ಸೆಪ್ಟೆಂಬರ್ ವೇಳೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.
ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರ್ಷದ ಮೊದಲ ಮಳೆಯಾಗಿದೆ. ವಿಜಯಪುರ, ದಾವಣಗೆರೆ, ಶಿವಮೊಗ್ಗ, ಕೊಡಗು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಇನ್ನು ಮುಂದಿನ ತಿಂಗಳಾದ ಜೂನ್-ಸೆಪ್ಟೆಂಬರ್ ವೇಳೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ