/newsfirstlive-kannada/media/post_attachments/wp-content/uploads/2024/07/dboss-wife2.jpg)
ಉಡುಪಿ: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ಗೆ ಸಂಕಷ್ಟಗಳ ಸರಮಾಲೆಯೇ ಎದುರಾಗಿದೆ. ಇವತ್ತು ಕೋರ್ಟ್ ಕೂಡ ದರ್ಶನ್ ಮನೆ ಊಟಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಪೊಲೀಸರು ಕೊಲೆ ಪ್ರಕರಣದ ಚಾರ್ಜ್ಶೀಟ್ ರೆಡಿ ಮಾಡುತ್ತಿದ್ದಾರೆ.
ಇದನ್ನೂ ಓದಿ:‘ದರ್ಶನ್ ತುಂಬಾ ಮುಗ್ಧ ಹುಡುಗ’.. ದಾಸನ ಸ್ಥಿತಿ ನೆನೆದು ಕಣ್ಣೀರು ಹಾಕಿದ ಹಿರಿಯ ನಟಿ ಗಿರಿಜಾ ಲೋಕೇಶ್
ಜೈಲಿನಲ್ಲಿರುವ ದಾಸನಿಗೆ ಒಂದೊಂದು ಗಂಟೆ, ಒಂದೊಂದು ದಿನವೂ ಒಂದೊಂದು ಯುಗದಂತೆ ಭಾಸವಾಗುತ್ತಿದೆ. ಕಾರಾಗೃಹದಲ್ಲಿ ದರ್ಶನ್ ಧ್ಯಾನ, ಪುಸ್ತಕಗಳ ಮೊರೆ ಹೋಗಿದ್ರೆ, ಗಂಡನ ಕಾಪಾಡಲು ಪತ್ನಿ ವಿಜಯಲಕ್ಷ್ಮಿ ಅವರು ಕೊಲ್ಲೂರಿಗೆ ತೆರಳಿದ್ದಾರೆ.
ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿದ್ದಾರೆ. ಆಪ್ತರ ಜೊತೆ ಕೊಲ್ಲೂರಿಗೆ ಆಗಮಿಸಿರುವ ವಿಜಯಲಕ್ಷ್ಮಿ ಅವರು ಮೂಕಾಂಬಿಕಾ ದೇವಿಯ ವಿಶೇಷ ದರ್ಶನ ಪಡೆದಿದ್ದಾರೆ.
ಇದನ್ನೂ ಓದಿ: ಮನೆ ಊಟಕ್ಕೆ ಹಂಬಲಿಸಿದ್ದ ದಾಸನಿಗೆ ಆಘಾತ; ದರ್ಶನ್ ಅರ್ಜಿ ವಜಾ ಆಗಿದ್ದಕ್ಕೆ 3 ಕಾರಣಗಳಿವೆ; ಏನದು?
ದರ್ಶನ್ ಬಿಡುಗಡೆಗಾಗಿ ದೇವರ ಮೊರೆ ಹೋಗಿರುವ ವಿಜಯಲಕ್ಷ್ಮಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಂಕಲ್ಪ, ಪಾರಾಯಣ ಮಾಡುತ್ತಿದ್ದಾರೆ. ದೇವಸ್ಥಾನದಲ್ಲಿ ನಾಳೆ ಬೆಳಗ್ಗೆ ದರ್ಶನ್ಗಾಗಿ ನವ ಚಂಡಿಕಾಯಾಗ ಕೂಡ ನಡೆಯುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ