/newsfirstlive-kannada/media/post_attachments/wp-content/uploads/2024/12/Nelamangala-Accident-2.jpg)
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಹೊಚ್ಚ ಹೊಸ ಕಾರಿನ ಮೇಲೆ ಕಂಟೇನರ್ ಉರುಳಿ ಬಿದ್ದು 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದ ದುರಂತ ಸಂಭವಿಸಿದೆ.
ಈ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಡಿಕ್ಕಿಯಾದ ರಭಸಕ್ಕೆ ಪಲ್ಟಿಯಾದ ಕಂಟೇನರ್ ಕಾರಿನ ಮೇಲೆ ಬಿದ್ದಿದೆ. 2 ಕಾರು, 2 ಲಾರಿ ಹಾಗೂ ಸ್ಕೂಲ್ ಬಸ್ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ವಿರಾಟ್ ಕೊಹ್ಲಿ ಮಾಲಿಕತ್ವದ ರೆಸ್ಟೋರೆಂಟ್ಗೆ ನಕ್ಷೆ, ಲೈಸೆನ್ಸ್ ಏನೂ ಇಲ್ಲ.. BBMP ನೋಟಿಸ್
ಇಂದು ವೀಕೆಂಡ್ ಹಿನ್ನೆಲೆಯಲ್ಲಿ 2 ತಿಂಗಳ ಹಿಂದಷ್ಟೇ VOLVO ಕಾರು ಖರೀದಿಸಿದ್ದ ಕುಟುಂಬ ಪ್ರವಾಸಕ್ಕೆ ಹೊರಟಿತ್ತು. ಕಾರಲ್ಲಿ ತೆರಳುವಾಗ ಈ ಅಪಘಾತ ಸಂಭವಿಸಿ ಕಾರಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಮಗು ಸಾವನ್ನಪ್ಪಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದು ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು, ತುಮಕೂರು -ಬೆಂಗಳೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಕಂಟೇನರ್ ಲಾರಿ ಬಿದ್ದ ಪರಿಣಾಮವಾಗಿ ಕಾರಿನಲ್ಲಿದ್ದವರ ರಕ್ಷಣೆ ಮಾಡಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ