/newsfirstlive-kannada/media/post_attachments/wp-content/uploads/2025/03/amruthadhre.jpg)
ಸದ್ಯದ ಟಾಪ್ ಮೋಸ್ಟ್ ವಾಚಿಂಗ್ ಸೀರಿಯಲ್ಸ್ಗಳಲ್ಲಿ ಜೀ ವಾಹಿನಿಯ ಅಮೃತಧಾರೆ ಕೂಡ ಒಂದು. ಅಮೃತಧಾರೆ ಧಾರಾವಾಹಿಯ ಕತೆ ವೀಕ್ಷಕರಿಗೆ ತುಂಬಾನೆ ಇಷ್ಟವಾಗ್ತಿದೆ. ಈ ಹಿಂದೆ ಮಲ್ಲಿ-ಜೈದೇವ್ ಮದುವೆ, ಮಗು ಆದ ಎಲ್ಲ ಎಪಿಸೋಡ್ಗಳು ಜನರಿಗೆ ಕಥೆಯ ಎಳೆ ಕುತೂಹಲ ಮೂಡಿಸಿತ್ತು. ಆದರೆ ಅದೇ ಹೊತ್ತಲ್ಲಿ ಅಮೃತಧಾರೆ ಧಾರಾವಾಹಿಯಲ್ಲಿ ಸಾಕಷ್ಟು ಬದಲಾವಣೆಗಳು ಆಗಿದ್ದವು. ಈ ಹಿಂದೆ ಸಾರಾ ಅಣ್ಣಯ್ಯ, ಶಶಿ ಹೆಗ್ಡೆ ಆಚೆ ಬಂದಿದ್ದರು.
ಇದನ್ನೂ ಓದಿ:ನಾಳೆ ಓಲಾ, ಉಬರ್ ರಸ್ತೆಗೆ ಇಳಿಯಲ್ಲ.. ಕರ್ನಾಟಕ ಬಂದ್ಗೆ ಯಾರೆಲ್ಲ ಬೆಂಬಲ ಕೊಟ್ಟವ್ರೆ..?
ಇದಾದ ಬಳಿಕ ಮಲ್ಲಿ ಪಾತ್ರದಲ್ಲಿ ನಟಿಸುತ್ತಿದ್ದ ರಾಧಾ ಭಗವತಿ ಕೂಡ ಸೀರಿಯಲ್ನಿಂದ ಆಚೆ ಬಂದಿದ್ದರು. ಇದೀಗ ಅಮೃತಧಾರೆಯ ಮಲ್ಲಿ ಪಾತ್ರ ಬದಲಾಗಿದ್ದು, ಇದರ ಜೊತೆಯಲ್ಲಿಯೇ ಕಥೆಯಲ್ಲಿ ಬಿಗ್ ಟ್ವಿಸ್ಟ್ ಎದುರಾಗಿದೆ. ಇಷ್ಟು ದಿನ ಮಾತು ಬಾರದ ಅಜ್ಜಯ್ಯನ ಮೊಮ್ಮಗಳಾಗಿದ್ದ ಮಲ್ಲಿಯ ಜನ್ಮ ರಹಸ್ಯ ಗೌತಮ್ ಮುಂದೆ ಬಯಲಾಗಿದೆ. ಮಲ್ಲಿ ಪಾತ್ರದಲ್ಲಿ ನಟಿಸುತ್ತಿದ್ದ ರಾಧಾ ಭಗವತಿ ಅವರು ಸೀರಿಯಲ್ನಿಂದ ಆಚೆ ಬಂದ ಬಳಿಕ ಆ ಜಾಗಕ್ಕೆ ನಟಿ ಅನ್ವಿತಾ ಸಾಗರ್ ಆಗಮಿಸಿದ್ದಾರೆ.
ಹೌದು, ಮಲ್ಲಿ ಪಾತ್ರದಲ್ಲಿ ನಟಿಸುತ್ತಿದ್ದ ನಟಿ ರಾಧಾ ಭಗವತಿ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರೋ ಭಾರ್ಗವಿ ಎಲ್ಎಲ್ಬಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಕಡೆ ಅಮೃತಧಾರೆ ಸೀರಿಯಲ್ ಮಲ್ಲಿ ಪಾತ್ರಕ್ಕೆ ಹೊಸ ಟ್ವಿಸ್ಟ್ ನೀಡಲಾಗಿದೆ. ತನ್ನ ಸೋದರ ಜೈದೇವ್ನ ಹೆಂಡ್ತಿ ಅಂದರೆ ಮಲ್ಲಿ ಸಾಮಾನ್ಯ ಕುಟುಂಬದವಳಲ್ಲ. ಆಕೆ ರಾಜೇಂದ್ರ ಭೂಪತಿಯ ಮಗಳು ಎಂಬ ವಿಷಯ ಗೌತಮ್ ದಿವಾನ್ಗೆ ಗೊತ್ತಾಗಿದೆ.
ಯಾರು ಈ ಅನ್ವಿತಾ ಸಾಗರ್?
ನಟಿ ಅನ್ವಿತಾ ಸಾಗರ್ ಅವರು ಈಗಾಗಲೇ ವೀಕ್ಷಕರಿಗೆ ಚಿರಪರಿಚಿತರಾಗಿದ್ದಾರೆ. ಕನ್ನಡ ಸಿನಿಮಾ ಮತ್ತು ಧಾರಾವಾಹಿ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿರೋ ನಟಿ. ಈ ಹಿಂದೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಧಾರಾವಾಹಿ ಗಟ್ಟಿಮೇಳದಲ್ಲಿ ಆದ್ಯಾ ಪಾತ್ರದಲ್ಲಿ ಅನ್ವಿತಾ ಸಾಗರ್ ಕಾಣಿಸಿಕೊಂಡಿದ್ದರು. ಗಟ್ಟಿಮೇಳ ಧಾರಾವಾಹಿ ಮುಗಿದ ಬಳಿಕ ಅನ್ವಿತಾ ಸಾಗರ್ ಅವರು ಉದಯ ಟಿವಿಯ ಅಣ್ಣ ತಂಗಿ ಸೀರಿಯಲ್ನಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅದು 1 ಸಾವಿರ ಸಂಚಿಕೆಗಳನ್ನು ಆಗಲೇ ಪೂರೈಸಿದೆ. ಇದೀಗ ಮತ್ತೆ ಅನ್ವಿತಾ ಸಾಗರ್ ಅಮೃತಧಾರೆ ಸೀರಿಯಲ್ ಮೂಲಕ ಕಮ್ ಬ್ಯಾಕ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ