/newsfirstlive-kannada/media/post_attachments/wp-content/uploads/2024/06/Praveen-Nettar.jpg)
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ N I A ಮತ್ತೋರ್ವ ಆರೋಪಿಯನ್ನು ಬಂಧಿಸಿದೆ. ದೇಶ ಬಿಟ್ಟು ಪರಾರಿಯಾಗಲು ಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ರಿಯಾಜ್ ಯೂಸಫ್ ಹಾರಳ್ಳಿ ಎಂದು ಗುರುತಿಸಲಾಗಿದೆ.
ರಿಯಾಜ್ ಯೂಸಫ್ ಹಾರಳ್ಳಿಯನ್ನ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಸದ್ಯ ಪ್ರವೀಣ್​ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ.
ಕಳೆದ ತಿಂಗಳಿನಲ್ಲಿ ಪ್ರವೀಣ್​ ನೆಟ್ಟಾರು ಹತ್ಯೆಯ ಪ್ರಮುಖ 4ನೇ ಆರೋಪಿಯನ್ನು ಬಂಧಿಸಲಾಗಿತ್ತು. ಸುಳ್ಯದ ಶಾಂತಿ ನಗರ ನಿವಾಸಿಯಾಗಿದ್ದ ಮುಸ್ತಫಾ ಪೈಚಾರ್​ನನ್ನು ಅರೆಸ್ಟ್​ ಮಾಡಲಾಗಿತ್ತು. ಈತ ಪ್ರವೀಣ್​ ಹತ್ಯೆ ಬಳಿಕ ತಲೆಮರೆಸಿಕೊಂಡಿದ್ದನು. NIA ತಂಡ ಈತನಿಗಾಗಿ ಹುಡುಕಾಡಿ ಕೊನೆಗೆ ಹಾಸನದ ಸಕಲೇಶಪುರ ಬಳಿ ಆತನನ್ನು ಅರೆಸ್ಟ್​ ಮಾಡಲಾಗಿತ್ತು.
[caption id="attachment_67708" align="alignnone" width="800"]
ಮುಸ್ತಫಾ ಪೈಚಾರ್[/caption]
ಇದನ್ನೂ ಓದಿ: ಕಾರು-ಟ್ರ್ಯಾಕ್ಟರ್​ ಅಪಘಾತ.. ಕಾರಿನಲ್ಲೇ ಸಜೀವ ದಹನಗೊಂಡ 30 ವರ್ಷದ ವ್ಯಕ್ತಿ
ಮುಸ್ತಫಾ ಪೈಚಾರ್ ಸುಳಿವು ನೀಡಿದವರಿಗೆ​ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್​ಐಎ ಅಧಿಕಾರಿಗಳು ಘೋಷಿಸಿದ್ದರು. ಕೊನೆಗೆ ಹಾಸನ ಜಿಲ್ಲೆ ಸಕಲೇಶಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಅಡಗಿರೋದು ತಿಳಿದು ಬಂತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us