ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ
ನೆಟ್ಟಾರ್ ಹತ್ಯೆ ಪ್ರಕರಣದ ಬಂಧಿತ ಆರೋಪಿಗಳ ಸಂಖ್ಯೆ 19ಕ್ಕೆ ಏರಿಕೆ
ವಿದೇಶಕ್ಕೆ ಹಾರುವ ಪ್ಲಾನ್ ಮಾಡಿಕೊಂಡಿದ್ದ ಆರೋಪಿ NIA ಸಿಕ್ಕಿದ್ದೆಲ್ಲಿ?
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ N I A ಮತ್ತೋರ್ವ ಆರೋಪಿಯನ್ನು ಬಂಧಿಸಿದೆ. ದೇಶ ಬಿಟ್ಟು ಪರಾರಿಯಾಗಲು ಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ರಿಯಾಜ್ ಯೂಸಫ್ ಹಾರಳ್ಳಿ ಎಂದು ಗುರುತಿಸಲಾಗಿದೆ.
ರಿಯಾಜ್ ಯೂಸಫ್ ಹಾರಳ್ಳಿಯನ್ನ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಸದ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆಯ A4 ಆರೋಪಿ ಬಂಧನ.. ಎನ್ಐಎ ಅಧಿಕಾರಿಗಳಿಗೆ ಈತ ಸಿಕ್ಕಿದ್ದೆಲ್ಲಿ ಗೊತ್ತಾ?
ಕಳೆದ ತಿಂಗಳಿನಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ 4ನೇ ಆರೋಪಿಯನ್ನು ಬಂಧಿಸಲಾಗಿತ್ತು. ಸುಳ್ಯದ ಶಾಂತಿ ನಗರ ನಿವಾಸಿಯಾಗಿದ್ದ ಮುಸ್ತಫಾ ಪೈಚಾರ್ನನ್ನು ಅರೆಸ್ಟ್ ಮಾಡಲಾಗಿತ್ತು. ಈತ ಪ್ರವೀಣ್ ಹತ್ಯೆ ಬಳಿಕ ತಲೆಮರೆಸಿಕೊಂಡಿದ್ದನು. NIA ತಂಡ ಈತನಿಗಾಗಿ ಹುಡುಕಾಡಿ ಕೊನೆಗೆ ಹಾಸನದ ಸಕಲೇಶಪುರ ಬಳಿ ಆತನನ್ನು ಅರೆಸ್ಟ್ ಮಾಡಲಾಗಿತ್ತು.
ಇದನ್ನೂ ಓದಿ: ಕಾರು-ಟ್ರ್ಯಾಕ್ಟರ್ ಅಪಘಾತ.. ಕಾರಿನಲ್ಲೇ ಸಜೀವ ದಹನಗೊಂಡ 30 ವರ್ಷದ ವ್ಯಕ್ತಿ
ಮುಸ್ತಫಾ ಪೈಚಾರ್ ಸುಳಿವು ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್ಐಎ ಅಧಿಕಾರಿಗಳು ಘೋಷಿಸಿದ್ದರು. ಕೊನೆಗೆ ಹಾಸನ ಜಿಲ್ಲೆ ಸಕಲೇಶಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಅಡಗಿರೋದು ತಿಳಿದು ಬಂತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ
ನೆಟ್ಟಾರ್ ಹತ್ಯೆ ಪ್ರಕರಣದ ಬಂಧಿತ ಆರೋಪಿಗಳ ಸಂಖ್ಯೆ 19ಕ್ಕೆ ಏರಿಕೆ
ವಿದೇಶಕ್ಕೆ ಹಾರುವ ಪ್ಲಾನ್ ಮಾಡಿಕೊಂಡಿದ್ದ ಆರೋಪಿ NIA ಸಿಕ್ಕಿದ್ದೆಲ್ಲಿ?
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ N I A ಮತ್ತೋರ್ವ ಆರೋಪಿಯನ್ನು ಬಂಧಿಸಿದೆ. ದೇಶ ಬಿಟ್ಟು ಪರಾರಿಯಾಗಲು ಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ರಿಯಾಜ್ ಯೂಸಫ್ ಹಾರಳ್ಳಿ ಎಂದು ಗುರುತಿಸಲಾಗಿದೆ.
ರಿಯಾಜ್ ಯೂಸಫ್ ಹಾರಳ್ಳಿಯನ್ನ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಸದ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆಯ A4 ಆರೋಪಿ ಬಂಧನ.. ಎನ್ಐಎ ಅಧಿಕಾರಿಗಳಿಗೆ ಈತ ಸಿಕ್ಕಿದ್ದೆಲ್ಲಿ ಗೊತ್ತಾ?
ಕಳೆದ ತಿಂಗಳಿನಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ 4ನೇ ಆರೋಪಿಯನ್ನು ಬಂಧಿಸಲಾಗಿತ್ತು. ಸುಳ್ಯದ ಶಾಂತಿ ನಗರ ನಿವಾಸಿಯಾಗಿದ್ದ ಮುಸ್ತಫಾ ಪೈಚಾರ್ನನ್ನು ಅರೆಸ್ಟ್ ಮಾಡಲಾಗಿತ್ತು. ಈತ ಪ್ರವೀಣ್ ಹತ್ಯೆ ಬಳಿಕ ತಲೆಮರೆಸಿಕೊಂಡಿದ್ದನು. NIA ತಂಡ ಈತನಿಗಾಗಿ ಹುಡುಕಾಡಿ ಕೊನೆಗೆ ಹಾಸನದ ಸಕಲೇಶಪುರ ಬಳಿ ಆತನನ್ನು ಅರೆಸ್ಟ್ ಮಾಡಲಾಗಿತ್ತು.
ಇದನ್ನೂ ಓದಿ: ಕಾರು-ಟ್ರ್ಯಾಕ್ಟರ್ ಅಪಘಾತ.. ಕಾರಿನಲ್ಲೇ ಸಜೀವ ದಹನಗೊಂಡ 30 ವರ್ಷದ ವ್ಯಕ್ತಿ
ಮುಸ್ತಫಾ ಪೈಚಾರ್ ಸುಳಿವು ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್ಐಎ ಅಧಿಕಾರಿಗಳು ಘೋಷಿಸಿದ್ದರು. ಕೊನೆಗೆ ಹಾಸನ ಜಿಲ್ಲೆ ಸಕಲೇಶಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಅಡಗಿರೋದು ತಿಳಿದು ಬಂತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ