ಸದ್ಯದಲ್ಲೇ ಮುಂದಿನ ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್
ಕಾಂಗ್ರೆಸ್ ಪಕ್ಷದ ವಿರುದ್ಧ ಜೆಡಿಎಸ್, ಬಿಜೆಪಿ ಜಂಟಿ ಹೋರಾಟ..!
ಈ ಬಗ್ಗೆ ಮಾಜಿ ಸಿಎಂ ಹೆಚ್ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಏನಂದ್ರು?
ಬೀದರ್: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ, ಜೆಡಿಎಸ್ ಮೈತ್ರಿಯಾಗಿ ಸ್ಪರ್ಧಿಸುತ್ತಿವೆ. ಮಾಜಿ ಪ್ರಧಾನಿ ದೇವೇಗೌಡ್ರು, ಪ್ರಧಾನಿ ನರೇಂದ್ರ ಮೋದಿಯವರ ಜತೆ ಮಹತ್ವದ ಸಭೆ ಮಾಡಿದ ಬಳಿಕ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಮಾತಾಡಿದ್ದಾರೆ.
ಇಂದು ಮಾಧ್ಯಮದವರ ಜತೆ ಮಾತಾಡಿದ ನಿಖಿಲ್ ಕುಮಾರಸ್ವಾಮಿ, ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ನಮ್ಮ ಪಕ್ಷದ ವರಿಷ್ಠರು ತೆರೆ ಎಳೆಯುತ್ತಾರೆ. ಯಾವ ಪಕ್ಷ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು? ಅನ್ನೋ ವಿಚಾರ ಅವರೇ ನಿರ್ಧಾರ ಮಾಡಲಿದ್ದಾರೆ ಎಂದರು.
ನಾನು ಸಿನಿಮಾ ಶೂಟಿಂಗ್ ಆರಂಭಿಸಿ ಒಂದು ವಾರ ಆಗಿದೆ. ರಾಜಕೀಯದಿಂದ ದೂರ ಉಳಿಯಬೇಕು ಎಂದೇ ಸಿನಿಮಾ ನಿರ್ಮಾಣ ಮಾಡುತ್ತಿದ್ದೇನೆ. ಒಂದು ಪ್ರಾದೇಶಿಕ ಪಕ್ಷ ಕಟ್ಟೋದು ಅಷ್ಟು ಸುಲಭ ಅಲ್ಲ. ದೇವೇಗೌಡರ ಹೋರಾಟದ ಶ್ರಮದಿಂದ, ಕಾರ್ಯಕರ್ತರ ಹುರುಪಿನಿಂದ ಜೆಡಿಎಸ್ ಇದೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು 25 ವರ್ಷ ಮುನ್ನಡೆಸಿಕೊಂಡು ಬಂದಿದ್ದಾರೆ. ಬಹಳಷ್ಟು ನಾಯಕರ ಕೊಡುಗೆ ಜೆಡಿಎಸ್ಗೆ ಇದೆ ಎಂದರು.
ಕಾರ್ಯಕರ್ತನಾಗಿ ಓಡಾಡುತ್ತೇನೆ ಎಂದ ನಿಖಿಲ್
ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತನಾಗಿ ಓಡಾಡಲಿದ್ದೇನೆ. ಬೀದರ್ನಲ್ಲಿ ಯಾರು ಸ್ಪರ್ಧೆ ಮಾಡಲಿದ್ದಾರೆ ಅನ್ನೋದು ಬಂಡೆಪ್ಪಾ ಅವರೇ ನಿರ್ಧಾರ ತೆಗೆದುಕೊಳ್ಳಬೇಕು. ಇವರ ಜೊತೆ ದೇವೇಗೌಡ್ರು ಚರ್ಚಿಸಿ ತೀರ್ಮಾನ ಮಾಡಲಿದ್ದಾರೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸದ್ಯದಲ್ಲೇ ಮುಂದಿನ ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್
ಕಾಂಗ್ರೆಸ್ ಪಕ್ಷದ ವಿರುದ್ಧ ಜೆಡಿಎಸ್, ಬಿಜೆಪಿ ಜಂಟಿ ಹೋರಾಟ..!
ಈ ಬಗ್ಗೆ ಮಾಜಿ ಸಿಎಂ ಹೆಚ್ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಏನಂದ್ರು?
ಬೀದರ್: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ, ಜೆಡಿಎಸ್ ಮೈತ್ರಿಯಾಗಿ ಸ್ಪರ್ಧಿಸುತ್ತಿವೆ. ಮಾಜಿ ಪ್ರಧಾನಿ ದೇವೇಗೌಡ್ರು, ಪ್ರಧಾನಿ ನರೇಂದ್ರ ಮೋದಿಯವರ ಜತೆ ಮಹತ್ವದ ಸಭೆ ಮಾಡಿದ ಬಳಿಕ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಮಾತಾಡಿದ್ದಾರೆ.
ಇಂದು ಮಾಧ್ಯಮದವರ ಜತೆ ಮಾತಾಡಿದ ನಿಖಿಲ್ ಕುಮಾರಸ್ವಾಮಿ, ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ನಮ್ಮ ಪಕ್ಷದ ವರಿಷ್ಠರು ತೆರೆ ಎಳೆಯುತ್ತಾರೆ. ಯಾವ ಪಕ್ಷ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು? ಅನ್ನೋ ವಿಚಾರ ಅವರೇ ನಿರ್ಧಾರ ಮಾಡಲಿದ್ದಾರೆ ಎಂದರು.
ನಾನು ಸಿನಿಮಾ ಶೂಟಿಂಗ್ ಆರಂಭಿಸಿ ಒಂದು ವಾರ ಆಗಿದೆ. ರಾಜಕೀಯದಿಂದ ದೂರ ಉಳಿಯಬೇಕು ಎಂದೇ ಸಿನಿಮಾ ನಿರ್ಮಾಣ ಮಾಡುತ್ತಿದ್ದೇನೆ. ಒಂದು ಪ್ರಾದೇಶಿಕ ಪಕ್ಷ ಕಟ್ಟೋದು ಅಷ್ಟು ಸುಲಭ ಅಲ್ಲ. ದೇವೇಗೌಡರ ಹೋರಾಟದ ಶ್ರಮದಿಂದ, ಕಾರ್ಯಕರ್ತರ ಹುರುಪಿನಿಂದ ಜೆಡಿಎಸ್ ಇದೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು 25 ವರ್ಷ ಮುನ್ನಡೆಸಿಕೊಂಡು ಬಂದಿದ್ದಾರೆ. ಬಹಳಷ್ಟು ನಾಯಕರ ಕೊಡುಗೆ ಜೆಡಿಎಸ್ಗೆ ಇದೆ ಎಂದರು.
ಕಾರ್ಯಕರ್ತನಾಗಿ ಓಡಾಡುತ್ತೇನೆ ಎಂದ ನಿಖಿಲ್
ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತನಾಗಿ ಓಡಾಡಲಿದ್ದೇನೆ. ಬೀದರ್ನಲ್ಲಿ ಯಾರು ಸ್ಪರ್ಧೆ ಮಾಡಲಿದ್ದಾರೆ ಅನ್ನೋದು ಬಂಡೆಪ್ಪಾ ಅವರೇ ನಿರ್ಧಾರ ತೆಗೆದುಕೊಳ್ಳಬೇಕು. ಇವರ ಜೊತೆ ದೇವೇಗೌಡ್ರು ಚರ್ಚಿಸಿ ತೀರ್ಮಾನ ಮಾಡಲಿದ್ದಾರೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ