/newsfirstlive-kannada/media/post_attachments/wp-content/uploads/2025/03/TEAM-INDIA-12.jpg)
ಐಸಿಸಿ ಚಾಂಪಿಯನ್ಸ್​ ಟ್ರೋಫಿ ಗೆದ್ದಿರೋ ಖುಷಿಯಲ್ಲಿರುವ ಟೀಂ ಇಂಡಿಯಾ ಆಟಗಾರರು ಒಬ್ಬೊಬ್ಬರೇ ತವರಿಗೆ ಮರಳುತ್ತಿದ್ದಾರೆ. ಮಂಗಳವಾರ ಒಂದಷ್ಟು ಆಟಗಾರರು ಸೈಲೆಂಟ್ ಆಗಿ ಬಂದು ಕುಟುಂಬವನ್ನು ಸೇರಿಕೊಂಡಿದ್ದಾರೆ. ಸಾಮಾನ್ಯವಾಗಿ ಐಸಿಸಿ ಟೂರ್ನಿಗಳಲ್ಲಿ ಗೆಲುವು ಸಾಧಿಸಿ ಮರಳಿದಾಗ ಆಟಗಾರರಿಗೆ ಭರ್ಜರಿ ಸ್ವಾಗತ ನೀಡಲಾಗುತ್ತದೆ.
ಇದನ್ನೂ ಓದಿ: ಕಾಂತಾರ ಬೆಡಗಿ ಸಪ್ತಮಿ ಗೌಡ ಮನೆಯಲ್ಲಿ ನೀರವ ಮೌನ; ಅಸಲಿಗೆ ಆಗಿದ್ದೇನು?
ವಿಮಾನ ನಿಲ್ದಾಣದಲ್ಲಿಯೇ ಅದ್ದೂರಿ ಸ್ವಾಗತ ನೀಡಿ, ತೆರೆದ ವಾಹನ ಮೂಲಕ ಮೆರವಣಿಗೆ ಕೂಡ ಈ ಹಿಂದೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಬಿಸಿಸಿಐ ಯಾವುದೇ ಸನ್ಮಾನ ಕಾರ್ಯಕ್ರಮವನ್ನು ಆಯೋಜನೆ ಮಾಡಿಲ್ಲ. ಅದಕ್ಕೆ ಕಾರಣವನ್ನೂ ಕೂಡ ಬಿಸಿಸಿಐ ತಿಳಿಸಿದೆ.
ಮಾರ್ಚ್​ 22 ರಿಂದ ಐಪಿಎಲ್ ಆರಂಭವಾಗಲಿದೆ. ಅದಕ್ಕಾಗಿ ಆಟಗಾರರು ಸಿದ್ಧರಾಗಲಿದ್ದಾರೆ. ಹೀಗಾಗಿ ಯಾವುದೇ ಕಾರ್ಯಕ್ರಮವನ್ನು ಆಯೋಜನೆ ಮಾಡಿಲ್ಲ ಎಂದು ಬಿಸಿಸಿಐ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಬಹುತೇಕ ಆಟಗಾರರು ದುಬೈನಿಂದ ಹಿಂದಿರುಗಿದ್ದಾರೆ. ಕೆಲವು ಆಟಗಾರರು ಒಂದೆರಡು ದಿನ ಅಲ್ಲೇ ಉಳಿದು, ಆ ಬಳಿಕ ವಾಪಸ್ ಆಗಲಿದ್ದಾರೆ.
ಐಪಿಎಲ್​ ಬರೋಬ್ಬರಿ 2 ತಿಂಗಳ ಕಾಲ ನಡೆಯಲಿದೆ. ಹೀಗಾಗಿ ಅವರಿಗೆ ವಿಶ್ರಾಂತಿಯ ಅಗತ್ಯ ಇದೆ. ಅವರು ಐಪಿಎಲ್ ತಂಡವನ್ನು ಕೂಡಿಕೊಳ್ಳುವ ಮುನ್ನ ಕೆಲ ದಿನಗಳು ವಿಶ್ರಾಂತಿ ಪಡೆಯಲಿದ್ದಾರೆ. ಇದೇ ಕಾರಣಕ್ಕೆ ಯಾವುದೇ ಸನ್ಮಾನ ಕಾರ್ಯಕ್ರಮ ಆಯೋಜನೆ ಮಾಡಿಲ್ಲ ಎನ್ನಲಾಗಿದೆ.
ಇದನ್ನೂ ಓದಿ: ಒಂದೇ 1 ಪಂದ್ಯ ಆಡದೇ ಚಾಂಪಿಯನ್ ಆದ ಮೂವರು ಟೀಂ ಇಂಡಿಯಾ ಆಟಗಾರರು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ