ರಾಜ್ಯ ಸರ್ಕಾರದಿಂದಲೂ ಹೈ-ಅಲರ್ಟ್​.. ಪೊಲೀಸರಿಗೆ ಹೆಚ್ಚುವರಿ ರಜೆ ಯಾರಿಗೂ ಇಲ್ಲ -ಪರಮೇಶ್ವರ್

author-image
Ganesh
Updated On
ರಾಜ್ಯ ಸರ್ಕಾರದಿಂದಲೂ ಹೈ-ಅಲರ್ಟ್​.. ಪೊಲೀಸರಿಗೆ ಹೆಚ್ಚುವರಿ ರಜೆ ಯಾರಿಗೂ ಇಲ್ಲ -ಪರಮೇಶ್ವರ್
Advertisment
  • ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ
  • ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಭಾರೀ ಭದ್ರತೆಗೆ ನಿರ್ಧಾರ
  • ಕಾರವಾರ, ಮಂಗಳೂರಲ್ಲಿ ಟೈಟ್ ಸೆಕ್ಯೂರಿಟಿಗೆ ಆದೇಶ

ಭಾರತ-ಪಾಕಿಸ್ತಾನ ಗಡಿಯಲ್ಲಿ ಯುದ್ಧದ ಕಾರ್ಮೋಡ ಸೃಷ್ಟಿಯಾಗಿದೆ. ಭಾರತದ ಆಪರೇಷನ್​ ಸಿಂಧೂರ್​​ ದಾಳಿಯಿಂದ ತತ್ತರಿಸಿ ಹೋಗಿರುವ ಪಾಕ್​, ಗಡಿಯಲ್ಲಿ ಪ್ರಚೋದನಾಕಾರಿ ಗುಂಡಿನ ದಾಳಿ ನಡೆಸುತ್ತಿದೆ. ಇತ್ತ ಪಾಕ್​ನಿಂದ ಮಿಸೈಲ್​ ದಾಳಿ ಹಿನ್ನೆಲೆಯಲ್ಲಿ ಕೇಂದ್ರದಿಂದ ಹೈ-ಅಲರ್ಟ್​ ಘೋಷಣೆ ಮಾಡಲಾಗಿದೆ. ಜೊತೆಗೆ ಪ್ರತಿಯೊಂದು ರಾಜ್ಯಕ್ಕೂ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ.

ಈ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್​​ ಮಾತನಾಡಿ.. ಸೂಕ್ಷ್ಮ ಪರಿಸ್ಥಿತಿ ಇರೋದ್ರಿಂದ ಪೊಲೀಸರಿಗೆ ರಜೆ ಘೋಷಣೆ ಮಾಡಲ್ಲ. ಹೆಚ್ಚುವರಿ ರಜೆಗಳನ್ನ ಯಾರಿಗೂ ಕೊಡ್ತಿಲ್ಲ. ಗಡಿಯಲ್ಲಿ ಈಗಾಗಲೇ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ಸೂಕ್ಷ್ಮ ಸನ್ನಿವೇಶ ಯಾವಾಗ ನಾರ್ಮಲ್​ ಆಗುತ್ತೋ ಗೊತ್ತಿಲ್ಲ. ಕೇಂದ್ರ ಸರ್ಕಾರ ಈಗಾಗಲೇ ಎಚ್ಚರಿಕೆಯ ಸಂದೇಶ ರವಾನಿಸಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಪಾಕ್ ದಾಳಿಗೆ ಹುತಾತ್ಮರಾದ ವೀರಯೋಧ ಮುರಳಿ ನಾಯಕ್ ಯಾರು..?

ಹೀಗಾಗಿ ಗಡಿ ಪ್ರದೇಶ ಹಾಗೂ ಕರಾವಳಿ ಪ್ರದೇಶಗಳಲ್ಲಿ ಸೆಕ್ಯೂರಿಟಿ ಹೆಚ್ಚಿಸಲಾಗಿದೆ. ಯುದ್ಧದ ಸನ್ನಿವೇಶದಲ್ಲಿ ಟೈಟ್ ಇರುತ್ತದೆ. ಮಂಗಳೂರು, ಉತ್ತರ ಕನ್ನಡದಲ್ಲಿ ಹೆಚ್ಚು ಸೆಕ್ಯೂರಿಟಿ ಇರುತ್ತದೆ. ನೌಕಾ ಸೇನೆಯ ಜೊತೆಗೆ ಪೊಲೀಸರು ಕೂಡ ಭದ್ರತೆಯನ್ನ ನೋಡಿಕೊಳ್ತಾರೆ. ಹೀಗಾಗಿ ಪೊಲೀಸರಿಗೆ ರಜೆ ಘೋಷಣೆ ಮಾಡಲ್ಲ. ಹಾಗೂ ಹೆಚ್ಚುವರಿ ರಜೆಗಳನ್ನ ಯಾರಿಗೂ ಕೊಡ್ತಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆ ಆಗಿ 3 ದಿನ ಕಳೆದಿಲ್ಲ.. ದೇಶ ಕಾಯಲು ಪತಿಯನ್ನ ಅರಿಶಿಣ ಮೈಯಲ್ಲೇ ಕಳುಹಿಸಿದ ಪತ್ನಿ..

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment