/newsfirstlive-kannada/media/post_attachments/wp-content/uploads/2024/09/HDK_ADGP_2.jpg)
ಬೆಂಗಳೂರು: ಉದ್ಯಮಿ ವಿಜಯ್ ಟಾಟಾಗೆ ಹಣಕ್ಕೆ ಬೇಡಿಕೆಯಿಟ್ಟ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ H.D.ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬಿಎನ್ಎಸ್ ಸೆಕ್ಷನ್ 3(5), 308(2), 351(2) ಅಡಿಯಲ್ಲಿ ದಾಖಲಾಗಿದೆ. 308 ಬಿಎನ್ಎಸ್ ಸೆಕ್ಷನ್ ಅಂದ್ರೆ ಸುಲಿಗೆ ಆರೋಪ ಪ್ರಕರಣವಾಗಿದೆ. ಇದು ನಾನ್ ಬೇಲಬಲ್ ಸೆಕ್ಷನ್ ಆಗಿದ್ದು ಬಂಧನ ಮಾಡಬಹುದು. 351 - ಕ್ರಿಮಿನಲ್ ಬೆದರಿಕೆ ಆರೋಪ, ಇದು ಬೇಲಬಲ್ ಸೆಕ್ಷನ್ ಆಗಿದೆ. ಈ ಸೆಕ್ಷನ್ ಅಡಿಯಲ್ಲಿ ಎರಡು ವರ್ಷದ ತನಕ ಶಿಕ್ಷೆ ವಿಧಿಸಬಹುದು. 3(5) ಸಮಾನ ಉದ್ದೇಶ ಹೊಂದಿರುವ ಇಬ್ಬರು ಆರೋಪಿಗಳಿಗೆ ಸಂಬಂಧಿಸಿದ್ದಾಗಿ. ಇದರ ಅಡಿಯಲ್ಲಿ ನೇರವಾಗಿ ಬಂಧನ ಸಾಧ್ಯವಿಲ್ಲ. ಮೊದಲು 7 ದಿನಗಳಲ್ಲಿ ವಿಚಾರಣೆಗೆ ನೊಟೀಸ್ ನೀಡಬೇಕು. ವಿಚಾರಣೆಗೆ ಬರದಿದ್ದಾಗ ಬಂಧನ ಮಾಡುವ ಸಾಧ್ಯತೆ ಇರುತ್ತದೆ. ಸದ್ಯ ಪ್ರಕರಣದಲ್ಲಿ ಕುಮಾರಸ್ವಾಮಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ.
ಇದನ್ನೂ ಓದಿ:50 ಕೋಟಿ ರೂಪಾಯಿ ವಸೂಲಿ ಆರೋಪ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಬಂಧನ ಸಾಧ್ಯತೆ
ಇನ್ನು ತಮ್ಮ ವಿರುದ್ಧ ಕೇಸ್ ಪ್ರಶ್ನಿಸಿ ಕುಮಾರಸ್ವಾಮಿ ಹೈಕೋರ್ಟ್ ಕದ ತಟ್ಟುವ ಸಾಧ್ಯತೆ ಇದೆ. ದೆಹಲಿಯಲ್ಲಿರುವ ಕೇಂದ್ರ ಸಚಿವರು, ಬೆಂಗಳೂರಿಗೆ ಬಂದ ಬೆನ್ನಲ್ಲೇ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.
ಫೋನ್ ಮೂಲಕ ಹೆಚ್ಡಿಕೆ ಬೆದರಿಕೆ ಹಾಕಿರುವ ಆರೋಪ ಇದೆ. ಪ್ರಕರಣ ದಾಖಲು ಮಾಡಿಕೊಳ್ಳುವ ವಿಚಾರದಲ್ಲಿ ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ಯಡವಿದ್ದಾರೆ. ಬೆಳಗ್ಗೆ ಎನ್ಸಿಆರ್ ಮಾಡಿ, ಸಂಜೆ ಎಫ್ಐಆರ್ ಮಾಡಿದ್ದಾರೆ. ಬೆಳಗ್ಗೆ ಗಂಭೀರವಲ್ಲದ ಪ್ರಕರಣ ಮತ್ತು ಸಂಜೆ ಗಂಭೀರ ಕೇಸ್ ಎಂದು ದಾಖಲಿಸಿಕೊಂಡಿದ್ದಾರೆ. ಒತ್ತಡಕ್ಕೆ ಮಣಿದು FIR ದಾಖಲಿಸಿದ ಆರೋಪ ಮಾಡಬಹುದು. ಈ ಅಂಶಗಳು ಪ್ರಶ್ನಿಸಿ ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ. ಹೈಕೋರ್ಟ್ನಲ್ಲಿ ಪ್ರಕರಣದ FIR ರದ್ದು ಕೋರುವ ಸಾಧ್ಯತೆ ಹೆಚ್ಚಿದೆ.
ಇದನ್ನೂ ಓದಿ:50 ಕೋಟಿ ಸುಲಿಗೆ ಆರೋಪ ಕೇಸ್; ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ