ದೇಶದ ಮತದಾನದ ಹಬ್ಬಕ್ಕೆ ಎಲ್ಲಾ ಮತಗಟ್ಟೆಗಳಲ್ಲಿ ಭರ್ಜರಿ ಸಿದ್ಧತೆ
ಇಂದು ಬೆಳಗ್ಗೆ 7ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ
14ರಲ್ಲಿ 10ಕ್ಕೂ ಹೆಚ್ಚು ಗೆಲ್ಲೋ ವಿಶ್ವಾಸದಲ್ಲಿರೋ ಕಾಂಗ್ರೆಸ್ ಪಡೆ
ದೇಶದಲ್ಲಿ 3ನೇ ಹಂತದ ಹಾಗೂ ಕರ್ನಾಟಕದ 2ನೇ ಹಂತದ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಉತ್ತರ ಕರ್ನಾಟಕದ ಒಟ್ಟು 14 ಕ್ಷೇತ್ರಗಳಿಗೆ ವೋಟಿಂಗ್ ನಡೆಯುತ್ತಿದ್ದು ಮತದಾರರು ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ಮಾಡಬಹುದು.
ರಾಜ್ಯದಲ್ಲಿಂದು 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ವೋಟಿಂಗ್ ನಡೆಯುತ್ತಿರುವ ಕಾರಣ ಎಲ್ಲ ಮತಗಟ್ಟೆಗಲ್ಲಿ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಚುನಾವಣಾ ಕರ್ತವ್ಯಕ್ಕಾಗಿಯೇ 1 ಲಕ್ಷಕ್ಕೂ ಅಧಿಕ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಜನರು ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಲು ಯಾವುದೇ ಆತಂಕ ಬೇಡ. ಏಕೆಂದರೆ ಯಾವುದೇ ಅಹಿತಕರ ನಡೆಯದಂತೆ ಸುಮಾರು 50 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಹೀಗಾಗಿ ಉತ್ತರ ಕರ್ನಾಟಕದಲ್ಲಿ ವೋಟಿಂಗ್ ಸುಗಮವಾಗಿ ನಡೆಯಲಿದೆ.
ಇದನ್ನೂ ಓದಿ: 5 ವರ್ಷದ ಬಾಲಕಿ ಮೇಲೆ ಡೇಂಜರಸ್ ನಾಯಿಗಳ ಡೆಡ್ಲಿ ಅಟ್ಯಾಕ್; ಆಮೇಲೇನಾಯ್ತು?
ಇದನ್ನೂ ಓದಿ: 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರುತ್ತಿರೋ ಭಾರತದ ಸುನಿತಾ ವಿಲಿಯಮ್ಸ್; ಏನಿದು ಸ್ಟೋರಿ?
ಉತ್ತರ ಕರ್ನಾಟಕದ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯ ಕಡಿಮೆ ಇರುವುದರಿಂದ 14 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ನೇರಾ ನೇರಾ ಫೈಟ್ ಇದೆ. ಜೆಡಿಎಸ್ ಉತ್ತರ ಕರ್ನಾಟಕದ ಯಾವ ಕ್ಷೇತ್ರದಲ್ಲೂ ಅಭ್ಯರ್ಥಿಯನ್ನು ಹಾಕಿಲ್ಲ. ದಳ ಸ್ಪರ್ಧಿಸದ ಹಿನ್ನೆಲೆ ‘ಕೈ’-ಕಮಲದ ನಡುವಿನ ಪೈಪೋಟಿ ತೀವ್ರ ಕುತೂಹಲ ಮೂಡಿಸಿದೆ. ಇತ್ತ ಮತದಾನ ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿದ್ದರಿಂದ ಬಿಜೆಪಿಗೆ ಹೆಚ್ಚು ಸ್ಥಾನ ಗೆಲ್ಲೋ ಅವಕಾಶವಿದೆ.
ಕಾಂಗ್ರೆಸ್-ಬಿಜೆಪಿ ನೇರಾ ನೇರಾ ಫೈಟ್
ಮೈತ್ರಿಯಾಗಿ ಲೋಕಸಭಾ ಕದನದಲ್ಲಿ ಬಿಜೆಪಿ ಸ್ಪರ್ಧಿಸಿದ್ದು 2ನೇ ಹಂತದ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯವಿಲ್ಲ. ಮತದಾನ ನಡೀತಿರೋ ಬಹುತೇಕ ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳೇ ಹೆಚ್ಚು ಇವೆ. ಹೀಗಾಗಿ ಬಿಜೆಪಿಗೆ ಹೆಚ್ಚು ಸ್ಥಾನ ಗೆಲ್ಲೋ ಅವಕಾಶ ಇದೆ. ಆದರೆ 14ರಲ್ಲಿ 10ಕ್ಕೂ ಹೆಚ್ಚು ಕ್ಷೇತ್ರಗಳನ್ನ ಕಾಂಗ್ರೆಸ್ ಪಡೆ ಗೆಲ್ಲಲು ವಿಶ್ವಾಸ ವ್ಯಕ್ತಪಡಿಸಿದೆ. ಗ್ಯಾರಂಟಿಯಿಂದಾಗಿ ಹೆಚ್ಚು ಮಹಿಳೆಯರ ಮತಗಳು ಸಿಗುತ್ತಾವೆ ಎನ್ನುವ ನಿರೀಕ್ಷೆ ಕಾಂಗ್ರೆಸ್ ಇದೆ. ಸಚಿವರ ಕುಟುಂಬಸ್ಥರು ಕಣದಲ್ಲಿರೋದ್ರಿಂದ ಲಾಭವಾಗುತ್ತೆ ಎಂಬ ಲೆಕ್ಕಾಚಾರ ಕೂಡ ಮಾಡಲಾಗಿದೆ. ಹೀಗಾಗಿ ದೋಸ್ತಿಯಲ್ಲಿ ಜೆಡಿಎಸ್ ಸ್ಪರ್ಧಿಸದಿದ್ದರೂ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ನೇರ ಹಣಾಹಣಿ ಮಾತ್ರ ಇದೆ.
ಇದನ್ನೂ ಓದಿ: ಲಾಯರ್ ಸಿಡಿಸಿರೋ ಬಾಂಬ್ಗೆ ಕಾಂಗ್ರೆಸ್ ಕೋಟೆಯಲ್ಲಿ ನಡುಕ.. DCM ಬಗ್ಗೆ ದೇವರಾಜೇಗೌಡ ಗಂಭೀರ ಆರೋಪ
14 ಕ್ಷೇತ್ರಗಳಲ್ಲಿ ಕಾಂಗ್ರೆಸ್- ಬಿಜೆಪಿ ನೇರಾ ಜಿದ್ದಾಜಿದ್ದಿ
ಚಿಕ್ಕೋಡಿ
ಬೆಳಗಾವಿ
ಬಾಗಲಕೋಟೆ
ವಿಜಯಪುರ (SC)
ಕಲಬುರಗಿ (SC)
ರಾಯಚೂರು (ST)
ಬೀದರ್
ಕೊಪ್ಪಳ
ಬಳ್ಳಾರಿ (ST)
ಹಾವೇರಿ
ಧಾರವಾಡ
ಉತ್ತರ ಕನ್ನಡ
ದಾವಣಗೆರೆ
ಶಿವಮೊಗ್ಗ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ದೇಶದ ಮತದಾನದ ಹಬ್ಬಕ್ಕೆ ಎಲ್ಲಾ ಮತಗಟ್ಟೆಗಳಲ್ಲಿ ಭರ್ಜರಿ ಸಿದ್ಧತೆ
ಇಂದು ಬೆಳಗ್ಗೆ 7ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ
14ರಲ್ಲಿ 10ಕ್ಕೂ ಹೆಚ್ಚು ಗೆಲ್ಲೋ ವಿಶ್ವಾಸದಲ್ಲಿರೋ ಕಾಂಗ್ರೆಸ್ ಪಡೆ
ದೇಶದಲ್ಲಿ 3ನೇ ಹಂತದ ಹಾಗೂ ಕರ್ನಾಟಕದ 2ನೇ ಹಂತದ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಉತ್ತರ ಕರ್ನಾಟಕದ ಒಟ್ಟು 14 ಕ್ಷೇತ್ರಗಳಿಗೆ ವೋಟಿಂಗ್ ನಡೆಯುತ್ತಿದ್ದು ಮತದಾರರು ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ಮಾಡಬಹುದು.
ರಾಜ್ಯದಲ್ಲಿಂದು 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ವೋಟಿಂಗ್ ನಡೆಯುತ್ತಿರುವ ಕಾರಣ ಎಲ್ಲ ಮತಗಟ್ಟೆಗಲ್ಲಿ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಚುನಾವಣಾ ಕರ್ತವ್ಯಕ್ಕಾಗಿಯೇ 1 ಲಕ್ಷಕ್ಕೂ ಅಧಿಕ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಜನರು ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಲು ಯಾವುದೇ ಆತಂಕ ಬೇಡ. ಏಕೆಂದರೆ ಯಾವುದೇ ಅಹಿತಕರ ನಡೆಯದಂತೆ ಸುಮಾರು 50 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಹೀಗಾಗಿ ಉತ್ತರ ಕರ್ನಾಟಕದಲ್ಲಿ ವೋಟಿಂಗ್ ಸುಗಮವಾಗಿ ನಡೆಯಲಿದೆ.
ಇದನ್ನೂ ಓದಿ: 5 ವರ್ಷದ ಬಾಲಕಿ ಮೇಲೆ ಡೇಂಜರಸ್ ನಾಯಿಗಳ ಡೆಡ್ಲಿ ಅಟ್ಯಾಕ್; ಆಮೇಲೇನಾಯ್ತು?
ಇದನ್ನೂ ಓದಿ: 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರುತ್ತಿರೋ ಭಾರತದ ಸುನಿತಾ ವಿಲಿಯಮ್ಸ್; ಏನಿದು ಸ್ಟೋರಿ?
ಉತ್ತರ ಕರ್ನಾಟಕದ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯ ಕಡಿಮೆ ಇರುವುದರಿಂದ 14 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ನೇರಾ ನೇರಾ ಫೈಟ್ ಇದೆ. ಜೆಡಿಎಸ್ ಉತ್ತರ ಕರ್ನಾಟಕದ ಯಾವ ಕ್ಷೇತ್ರದಲ್ಲೂ ಅಭ್ಯರ್ಥಿಯನ್ನು ಹಾಕಿಲ್ಲ. ದಳ ಸ್ಪರ್ಧಿಸದ ಹಿನ್ನೆಲೆ ‘ಕೈ’-ಕಮಲದ ನಡುವಿನ ಪೈಪೋಟಿ ತೀವ್ರ ಕುತೂಹಲ ಮೂಡಿಸಿದೆ. ಇತ್ತ ಮತದಾನ ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿದ್ದರಿಂದ ಬಿಜೆಪಿಗೆ ಹೆಚ್ಚು ಸ್ಥಾನ ಗೆಲ್ಲೋ ಅವಕಾಶವಿದೆ.
ಕಾಂಗ್ರೆಸ್-ಬಿಜೆಪಿ ನೇರಾ ನೇರಾ ಫೈಟ್
ಮೈತ್ರಿಯಾಗಿ ಲೋಕಸಭಾ ಕದನದಲ್ಲಿ ಬಿಜೆಪಿ ಸ್ಪರ್ಧಿಸಿದ್ದು 2ನೇ ಹಂತದ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯವಿಲ್ಲ. ಮತದಾನ ನಡೀತಿರೋ ಬಹುತೇಕ ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳೇ ಹೆಚ್ಚು ಇವೆ. ಹೀಗಾಗಿ ಬಿಜೆಪಿಗೆ ಹೆಚ್ಚು ಸ್ಥಾನ ಗೆಲ್ಲೋ ಅವಕಾಶ ಇದೆ. ಆದರೆ 14ರಲ್ಲಿ 10ಕ್ಕೂ ಹೆಚ್ಚು ಕ್ಷೇತ್ರಗಳನ್ನ ಕಾಂಗ್ರೆಸ್ ಪಡೆ ಗೆಲ್ಲಲು ವಿಶ್ವಾಸ ವ್ಯಕ್ತಪಡಿಸಿದೆ. ಗ್ಯಾರಂಟಿಯಿಂದಾಗಿ ಹೆಚ್ಚು ಮಹಿಳೆಯರ ಮತಗಳು ಸಿಗುತ್ತಾವೆ ಎನ್ನುವ ನಿರೀಕ್ಷೆ ಕಾಂಗ್ರೆಸ್ ಇದೆ. ಸಚಿವರ ಕುಟುಂಬಸ್ಥರು ಕಣದಲ್ಲಿರೋದ್ರಿಂದ ಲಾಭವಾಗುತ್ತೆ ಎಂಬ ಲೆಕ್ಕಾಚಾರ ಕೂಡ ಮಾಡಲಾಗಿದೆ. ಹೀಗಾಗಿ ದೋಸ್ತಿಯಲ್ಲಿ ಜೆಡಿಎಸ್ ಸ್ಪರ್ಧಿಸದಿದ್ದರೂ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ನೇರ ಹಣಾಹಣಿ ಮಾತ್ರ ಇದೆ.
ಇದನ್ನೂ ಓದಿ: ಲಾಯರ್ ಸಿಡಿಸಿರೋ ಬಾಂಬ್ಗೆ ಕಾಂಗ್ರೆಸ್ ಕೋಟೆಯಲ್ಲಿ ನಡುಕ.. DCM ಬಗ್ಗೆ ದೇವರಾಜೇಗೌಡ ಗಂಭೀರ ಆರೋಪ
14 ಕ್ಷೇತ್ರಗಳಲ್ಲಿ ಕಾಂಗ್ರೆಸ್- ಬಿಜೆಪಿ ನೇರಾ ಜಿದ್ದಾಜಿದ್ದಿ
ಚಿಕ್ಕೋಡಿ
ಬೆಳಗಾವಿ
ಬಾಗಲಕೋಟೆ
ವಿಜಯಪುರ (SC)
ಕಲಬುರಗಿ (SC)
ರಾಯಚೂರು (ST)
ಬೀದರ್
ಕೊಪ್ಪಳ
ಬಳ್ಳಾರಿ (ST)
ಹಾವೇರಿ
ಧಾರವಾಡ
ಉತ್ತರ ಕನ್ನಡ
ದಾವಣಗೆರೆ
ಶಿವಮೊಗ್ಗ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ