ಕಳೆದ ಒಂದು ತಿಂಗಳಿನಿಂದ ರಣಬಿಸಿಲಿಗೆ ಕಂಗೆಟ್ಟ ರಾಜ್ಯದ ಜನ
ಆದಷ್ಟು ಬೇಗ ಮಳೆಯಾಗಲಿ ಎಂದಿದ್ದ ಜನರಿಗೆ ಭರ್ಜರಿ ಗುಡ್ನ್ಯೂಸ್
ಮಳೆ ಬಗ್ಗೆ ರಾಜ್ಯ ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?
ವಿಜಯಪುರ: ಕಳೆದೊಂದು ತಿಂಗಳಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿದಿನ 36-38 ಡಿಗ್ರಿ ಸೆಲ್ಸಿಯಸ್ನಷ್ಟು ಉಷ್ಣಾಂಶ ದಾಖಲಾಗುತ್ತಿದೆ. ಕಡು ಬಿಸಿಲಿನಿಂದ ಬೇಸತ್ತ ಜನ ಮಳೆ ಬಂದರೆ ಸಾಕಪ್ಪ ಎಂದು ಹಾತೊರೆಯುತ್ತಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದ ಕಥೆಯಂತೂ ಹೇಳತೀರದು.
ಇನ್ನು, ಈ ಮಧ್ಯೆ ಉತ್ತರ ಕರ್ನಾಟಕದ ಜನರಿಗೂ ರಾಜ್ಯ ಹವಾಮಾನ ಇಲಾಖೆ ಗುಡ್ನ್ಯೂಸ್ ನೀಡಿದೆ. ಮುಂದಿನ 15 ದಿನಗಳ ಕಾಲ ಅಂದರೆ ಮೇ 1-15 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇದರ ಕುರಿತು ಈ ಜಿಲ್ಲೆಗಳ ನಾಗರಿಕರು ಮಳೆಯ ಬಗ್ಗೆ ಕೊಂಚ ಎಚ್ಚರಿಕೆಯನ್ನು ವಹಿಸಬೇಕಿದೆ.
ಇದನ್ನೂ ಓದಿ: ಕೊನೆಗೂ ಬಂದ ಮಳೆರಾಯ.. ವರ್ಷಧಾರೆ ಕಂಡು ನಿಟ್ಟುಸಿರು ಬಿಟ್ಟ ಜನ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಳೆದ ಒಂದು ತಿಂಗಳಿನಿಂದ ರಣಬಿಸಿಲಿಗೆ ಕಂಗೆಟ್ಟ ರಾಜ್ಯದ ಜನ
ಆದಷ್ಟು ಬೇಗ ಮಳೆಯಾಗಲಿ ಎಂದಿದ್ದ ಜನರಿಗೆ ಭರ್ಜರಿ ಗುಡ್ನ್ಯೂಸ್
ಮಳೆ ಬಗ್ಗೆ ರಾಜ್ಯ ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?
ವಿಜಯಪುರ: ಕಳೆದೊಂದು ತಿಂಗಳಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿದಿನ 36-38 ಡಿಗ್ರಿ ಸೆಲ್ಸಿಯಸ್ನಷ್ಟು ಉಷ್ಣಾಂಶ ದಾಖಲಾಗುತ್ತಿದೆ. ಕಡು ಬಿಸಿಲಿನಿಂದ ಬೇಸತ್ತ ಜನ ಮಳೆ ಬಂದರೆ ಸಾಕಪ್ಪ ಎಂದು ಹಾತೊರೆಯುತ್ತಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದ ಕಥೆಯಂತೂ ಹೇಳತೀರದು.
ಇನ್ನು, ಈ ಮಧ್ಯೆ ಉತ್ತರ ಕರ್ನಾಟಕದ ಜನರಿಗೂ ರಾಜ್ಯ ಹವಾಮಾನ ಇಲಾಖೆ ಗುಡ್ನ್ಯೂಸ್ ನೀಡಿದೆ. ಮುಂದಿನ 15 ದಿನಗಳ ಕಾಲ ಅಂದರೆ ಮೇ 1-15 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇದರ ಕುರಿತು ಈ ಜಿಲ್ಲೆಗಳ ನಾಗರಿಕರು ಮಳೆಯ ಬಗ್ಗೆ ಕೊಂಚ ಎಚ್ಚರಿಕೆಯನ್ನು ವಹಿಸಬೇಕಿದೆ.
ಇದನ್ನೂ ಓದಿ: ಕೊನೆಗೂ ಬಂದ ಮಳೆರಾಯ.. ವರ್ಷಧಾರೆ ಕಂಡು ನಿಟ್ಟುಸಿರು ಬಿಟ್ಟ ಜನ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ